ಕನ್ನಡಪ್ರಭ ವಾರ್ತೆ ಮೈಸೂರು
ದೇಶದ ಸಂವಿಧಾನ ಖಾತರಿಪಡಿಸಿರುವ ಒಕ್ಕೂಟ ಪದ್ಧತಿಯಲ್ಲಿ ರಾಜ್ಯ ಸರ್ಕಾರಕ್ಕಿರುವ ಅಧಿಕಾರ ನುಂಗುವ ಕೇಂದ್ರ ಸರ್ಕಾರ ನಡೆ ಖಂಡನಿಯ. ಕಾರ್ಮಿಕರ ಕುರಿತ ವಿಚಾರಗಳು ಸಮವರ್ತಿ ಪಟ್ಟಿಯಲ್ಲಿರುವುದರಿಂದ ರಾಜ್ಯದ ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ ನಿಯಮಗಳನ್ನು ಬದಲಿಸಬೇಕು. 4 ಕಾರ್ಮಿಕ ಸಂಹಿತೆಗಳಲ್ಲಿ ಕಾರ್ಮಿಕರಿಗೆ ಮಾರಕವಾಗಿರುವ ಅಂಶಗಳನ್ನು ತಿದ್ದುಪಡಿ ಮೂಲಕ ಬದಲಿಸಬೇಕು. ಸಂಹಿತೆಗಳ ಜಾರಿಗೆ ಅಗತ್ಯ ನಿಯಮಾವಳಿ ರೂಪಿಸಬೇಕು ಎಂದು ಅವರು ಒತ್ತಾಯಿಸಿದರು.
ಕೇಂದ್ರ ಸರ್ಕಾರ ಹಿಂದಿ ಮತ್ತು ಆಂಗ್ಲ ಭಾಷೆಗಳಲ್ಲಿ ಸಂಹಿತೆ ಮತ್ತು ಕರಡು ನಿಯಮಾವಳಿ ಪ್ರಕಟಿಸಿದೆ. ದೇಶದ ಕಾರ್ಮಿಕರಿಗೆ ಈ ಕಾನೂನು ಮತ್ತು ನಿಯಮಾವಳಿಗಳನ್ನು ಅವರವರ ಮಾತೃಭಾಷೆಯಲ್ಲಿ ತಿಳಿದುಕೊಳ್ಳುವ ಹಕ್ಕಿದೆ. ಇದನ್ನು ನಿರಾಕರಿಸಬಾರದು ಎಂದು ಅವರು ಆಗ್ರಹಿಸಿದರು.ರಾಜ್ಯ ಸರ್ಕಾರ ಕನ್ನಡದಲ್ಲಿ ಪ್ರಕಟಿಸಬೇಕು. ನಿಯಮಾವಳಿ ಮತ್ತು ಕಾನೂನುಗಳನ್ನು ಓದಲು ರಾಜ್ಯದ ಕಾರ್ಮಿಕರಿಗೆ ಮುಕ್ತ ಅವಕಾಶ ಇರಬೇಕು. ಈ ಬಗ್ಗೆ ಕರ್ನಾಟಕ ಸರ್ಕಾರ ತನ್ನ ಬದ್ಧತೆ ಪ್ರಕಟಿಸಬೇಕು. ಕನ್ನಡದಲ್ಲಿ ಸಂಹಿತೆ ಮತ್ತು ನಿಯಮಾವಾಳಿಗಳನ್ನು ಪ್ರಕಟಿಸಿದ ನಂತರ ಆಕ್ಷೇಪಣೆ ಸಲ್ಲಿಸಲು ಕನಿಷ್ಠ 2 ತಿಂಗಳು ಅವಕಾಶ ನೀಡಬೇಕು. ರಾಜ್ಯ ಸರ್ಕಾರ ತನ್ನ ಅಧಿಕಾರ ಚಲಾಯಿಸಿ ಮೂಲ ಸಂಹಿತೆಗಳಿಗೆ ತಿದ್ದುಪಡಿ ತಂದು ನಂತರ ನಿಯಮಾವಳಿ ರೂಪಿಸಬೇಕು. ಜೊತೆಗೆ ಕೂಡಲೇ ಕನಿಷ್ಠ ವೇತನ ಅಧಿಸೂಚನೆ ಹೊರಡಿಸಬೇಕು ಎಂದು ಅವರು ಒತ್ತಾಯಿಸಿದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಕೆ. ಬಾಲಾಜಿರಾವ್, ಮುಖಂಡರಾದ ಅಣ್ಣಪ್ಪ, ಪುಷ್ಪಲತಾ, ಜಯರಾಂ, ಬಸವಯ್ಯ, ರೇವಣ್ಣಸಿದ್ದಪ್ಪ, ಶಶಿಕುಮಾರ್, ಕಮಲಾಕ್ಷಿ, ಲೀಲಾವತಿ, ಚಂದ್ರಿಕಾ ಮೊದಲಾದವರು ಇದ್ದರು.