ಸಭೆ ತಡವಾಗಿದ್ದಕ್ಕೆ ನಗರಸೇವಕನ ಪ್ರತಿಭಟನೆ

KannadaprabhaNewsNetwork |  
Published : Jan 15, 2026, 03:15 AM IST
ಬೆಳಗಾವಿ  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ನಗರಸೇವಕರನ್ನು ಸಭೆಗೆ ಆಹ್ವಾನಿಸಿ ಸುಮಾರು ಒಂದೂವರೆ ಗಂಟೆ ತಡ ಮಾಡಿ ಸಭೆ ಆರಂಭಿಸಿದ ಮಹಾನಗರ ಪಾಲಿಕೆಯ ಅಧಿಕಾರಿಗಳ ನಡೆಯನ್ನು ಖಂಡಿಸಿ, ನಗರಸೇವಕರೊಬ್ಬರು ಸಭಾಗೃಹದಲ್ಲಿ ನೆಲದ ಮೇಲೆ ಕುಳಿತು ಪ್ರತಿಭಟನೆ ಮಾಡಿದ ಘಟನೆ ಮಹಾನಗರ ಪಾಲಿಕೆಯಲ್ಲಿ ಬುಧವಾರ ನಡೆದಿದೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ನಗರಸೇವಕರನ್ನು ಸಭೆಗೆ ಆಹ್ವಾನಿಸಿ ಸುಮಾರು ಒಂದೂವರೆ ಗಂಟೆ ತಡ ಮಾಡಿ ಸಭೆ ಆರಂಭಿಸಿದ ಮಹಾನಗರ ಪಾಲಿಕೆಯ ಅಧಿಕಾರಿಗಳ ನಡೆಯನ್ನು ಖಂಡಿಸಿ, ನಗರಸೇವಕರೊಬ್ಬರು ಸಭಾಗೃಹದಲ್ಲಿ ನೆಲದ ಮೇಲೆ ಕುಳಿತು ಪ್ರತಿಭಟನೆ ಮಾಡಿದ ಘಟನೆ ಮಹಾನಗರ ಪಾಲಿಕೆಯಲ್ಲಿ ಬುಧವಾರ ನಡೆದಿದೆ.

ಜ.14ರಂದು ಮಧ್ಯಾಹ್ನ 12ಕ್ಕೆ ಮಹಾನಗರ ಪಾಲಿಕೆಯಲ್ಲಿ ಬೆಳಗಾವಿ ನಗರ 2.0 ಯೋಜನೆಯ ಕುರಿತು ಚರ್ಚಿಸಲು ಸಭೆ ಕರೆಯಲಾಗಿತ್ತು. ಆದರೆ, ಸಭೆಯು ನಿಗದಿತ ಸಮಯಕ್ಕಿಂತ ಮಧ್ಯಾಹ್ನ 1.30ಕ್ಕೆ ತಡವಾಗಿ ಆರಂಭವಾಯಿತು. ಅಕಾರಿಗಳ ಈ ನಿರ್ಲಕ್ಷ್ಯ ಧೋರಣೆಯನ್ನು ವಿರೋಧಿಸಿ ನಗರಸೇವಕ ಶಾಹಿದ್ ಪಠಾಣ್ ಅವರು ಕೌನ್ಸಿಲ್ ಹಾಲ್‌ನ ನೆಲದ ಮೇಲೆ ಕುಳಿತು ಧರಣಿ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಯೋಜನೆಯ ಅಕಾರಿಗಳು ಜನಪ್ರತಿನಿಧಿಗಳು ಸಮಯಕ್ಕೆ ಬೆಲೆ ನೀಡುತ್ತಿಲ್ಲ. ತಮಗೆ ಬೇಕಾದಾಗ ಸಭೆ ಆರಂಭಿಸುತ್ತಾರೆ ಎಂದು ಆರೋಪಿಸಿದರು.

ಈ ವೇಳೆ ಸಭೆಯ ವಿಳಂಬಕ್ಕೆ ಸಂಬಂಸಿದಂತೆ ಸ್ಮಾರ್ಟ್ ಸಿಟಿ ಅಕಾರಿಗಳು, ನಗರ ಸೇವಕರಲ್ಲಿ ಕ್ಷಮೆಯಾಚಿಸಿದರು. ಅಲ್ಲದೆ, ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲಾಗುವುದು ಎಂಬ ಭರವಸೆ ನೀಡಿದರು. ಜತೆಗೆ ಸಭೆಯಲ್ಲಿದ್ದ ಮೇಯರ್ ಮಂಗೇಶ ಪವಾರ, ಉಪ ಮೇಯರ್ ವಾಣಿ ಜೋಶಿ, ಪಾಲಿಕೆ ಆಯುಕ್ತ ಎಂ.ಕಾರ್ತಿಕ ಅವರು ಮನವೊಲಿಸಿದ ಬಳಿಕ ಶಾಹಿದ್ ಪಠಾಣ ಪ್ರತಿಭಟನೆ ಹಿಂಪಡೆದರು. ತದನಂತರ ಸಭೆಯು ಸುಗಮವಾಗಿ ಮುಂದುವರಿಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಳಿಪಟ ದಾರ ಕುತ್ತಿಗೆ ಸೀಳಿ ಮಗಳನ್ನು ಹಾಸ್ಟೆಲ್‌ನಿಂದ ಕರೆತರಲು ಹೊರಟಿದ್ದ ಅಪ್ಪ ದಾರುಣ ಸಾವು
ಪೌರಾಯುಕ್ತೆಗೆ ಬೆಂಕಿ: ಕಾಂಗ್ರೆಸ್ಸಿಗನಿಂದ ಧಮ್ಕಿ