ಕನ್ನಡಪ್ರಭ ವಾರ್ತೆ ಬೆಂಗಳೂರು
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಿಂದ ಹೆಬ್ಬಾಳದ ಜಿಕೆವಿಕೆಯಲ್ಲಿ ಆಯೋಜಿಸಿದ್ದ ರೈತ ಸಂತೆ ಹಾಗೂ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವರ್ಷದ ಹಿಂದೆ ನಾನು ಅಮೆರಿಕಾಕ್ಕೆ ತೆರಳಿದ್ದಾಗ ಉದ್ಯಮಿ ಸ್ಯಾಮ್ ಪಿತ್ರೋಡಾ ಅವರನ್ನು ಭೇಟಿ ಮಾಡಿದ್ದೆ. ಬೆಂಗಳೂರು ವಿದ್ಯಾರ್ಥಿಗಳ ಪಠ್ಯಕ್ರಮದಲ್ಲಿ ಎರಡ್ಮೂರು ದಿವಸ ಹಳ್ಳಿ ಬದುಕಿನ ಪ್ರವಾಸ ಆಯೋಜಿಸಬೇಕು. ಹಳ್ಳಿ ಬದುಕಿನ ಪರಿಸ್ಥಿತಿ ಬಗ್ಗೆ ಅರಿವು ಮೂಡಿಸಬೇಕು. ಈ ಬಗ್ಗೆ ನಿಮ್ಮ ಸರ್ಕಾರ ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದ್ದರು. ಕೃಷಿ ಸಚಿವ ಚಲುವರಾಯಸ್ವಾಮಿ ಮತ್ತು ಕೃಷಿ ವಿವಿ ಉಪಕುಲಪತಿಗಳು ಈ ಸಂಬಂಧ ತಿಂಗಳೊಳಗೆ ರೂಪುರೇಷೆ ಸಿದ್ಧಪಡಿಸಬೇಕು ಎಂದು ತಿಳಿಸಿದರು.ಕೋಳಿ ಸಾಕಾಣಿಕೆ ತರಬೇತಿ ಪಡೆದಿದ್ದೆ: ನಾನು ಸಹ ರೈತನ ಮಗ. ಖುದ್ದಾಗಿ ವ್ಯವಸಾಯ ಮಾಡದಿದ್ದರೂ ನೂರಾರು ಎಕರೆ ಆಸ್ತಿ ಹೊಂದಿದ್ದೇನೆ. ಆರನೇ ತರಗತಿಯಲ್ಲಿದ್ದಾಗ ನ್ಯಾಷನಲ್ ಸ್ಕೂಲ್ ನಿಂದ ಕಾರ್ಮೆಲ್ ಶಾಲೆಗೆ ಸೇರಿದೆ. ಆಗ ‘ರೈತರು ಮುಖ್ಯವೋ, ಜವಾನರು ಮುಖ್ಯವೋ’ ಎಂಬ ಚರ್ಚಾ ಸ್ಪರ್ಧೆಯಲ್ಲಿ ರೈತನ ಪರವಾಗಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದೆ. ವಿದ್ಯಾರ್ಥಿಯಾಗಿದ್ದಾಗ ಈ ಕೃಷಿ ಕಾಲೇಜಿಗೆ ಬಂದು ಕೋಳಿ ಸಾಕಾಣೆ ಬಗ್ಗೆ ತರಬೇತಿ ಪಡೆದಿದ್ದೆ ಎಂದು ನೆನಪಿಸಿಕೊಂಡರು.
ಇದೇ ಸಂದರ್ಭದಲ್ಲಿ 9 ಜಿಲ್ಲೆಗಳ ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು. ಕೃಷಿ ವಿವಿ ಕುಲಪತಿ ಡಾ.ಎಸ್.ವಿ. ಸುರೇಶ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೆಎಸ್ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಡಾ. ಪ್ರಶಾಂತ್ ಮತ್ತಿತರರು ಉಪಸ್ಥಿತರಿದ್ದರು.