ಎರಡು ಗುಂಪುಗಳ ನಡುವೆ ಮಾರಾಮಾರಿ: ಪ್ರಕರಣ ದಾಖಲು

KannadaprabhaNewsNetwork |  
Published : Jan 11, 2024, 01:31 AM IST
ಮೂಡಿಗೆರೆ ಪಟ್ಟಣದ ಬಸ್ ನಿಲ್ದಾಣದಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಡಿಕೊಂಡಿರುವ ಘಟನೆ ಸಿಸಿ ಟಿವಿಯಲ್ಲಿ ಸೆರೆಯಲಾಗಿರುವ ದೃಶ್ಯ. | Kannada Prabha

ಸಾರಾಂಶ

ಯುವತಿಯೋರ್ವಳ ವಿಚಾರಕ್ಕಾಗಿ ಅನ್ಯಕೋಮಿನ ಎರಡು ಯುವಕರ ಗುಂಪುಗಳು ಹೊಡೆದಾಡಿಕೊಂಡ ಘಟನೆ ಮಂಗಳವಾರ ಸಂಜೆ ಮೂಡಿಗೆರೆ ಬಸ್ ನಿಲ್ದಾಣದಲ್ಲಿ ನಡೆದಿದೆ.

ಕನ್ನಡಪ್ರಭ ವಾರ್ತೆ, ಮೂಡಿಗೆರೆ

ಯುವತಿಯೋರ್ವಳ ವಿಚಾರಕ್ಕಾಗಿ ಅನ್ಯಕೋಮಿನ ಎರಡು ಯುವಕರ ಗುಂಪುಗಳು ಹೊಡೆದಾಡಿಕೊಂಡ ಘಟನೆ ಮಂಗಳವಾರ ಸಂಜೆ ಮೂಡಿಗೆರೆ ಬಸ್ ನಿಲ್ದಾಣದಲ್ಲಿ ನಡೆದಿದೆ.

ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಹಿಂದೂ ಹುಡುಗಿಯರಿಗೆ ಬಣಕಲ್ ಮೂಲದ ಮುಸ್ಲಿಂ ಯುವಕ ಮುನಾಜ್ ಎಂಬಾತ ಚಾಕಲೇಟ್ ನೀಡಿದ್ದ ಎಂಬ ವಿಚಾರವಾಗಿ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದಿದೆ. ಬಸ್ ನಿಲ್ದಾಣ ಆವರಣದಲ್ಲಿಯೇ ಯುವಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಯುವಕರ ಗುಂಪು ಚದುರಿ ಪರಾರಿಯಾಗಿದ್ದ ಬಗ್ಗೆ ಸಿ.ಸಿ.ಕ್ಯಾಮರದಲ್ಲಿಯೂ ದೃಶ್ಯ ಸೆರೆಯಾಗಿದೆ. ಇದರಿಂದ ಪಟ್ಟಣದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಪೊಲೀಸರು ಮುನ್ನೆಚ್ಚರಿಕೆ ವಹಿಸಿ, ಪಟ್ಟಣದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಘಟನೆ ಬಗ್ಗೆ ಮುನಾಜ್ ಮೂಡಿಗೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರತಿಯಾಗಿ ಮೂಡಿಗೆರೆ ಪಟ್ಟಣದ ಅನಿಲ್ ಪೂಜಾರಿ ಪ್ರತಿದೂರು ನೀಡಿದ್ದಾರೆ. ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143, 144, 148, 149, 324, 325, 504, 506 ರ ಅಡಿ ಪ್ರಕರಣ ದಾಖಲಿಸಲಾಗಿದೆ. 10ಎಂಡಿಜಿ3ಎ:

ಮೂಡಿಗೆರೆ ಪಟ್ಟಣದ ಬಸ್ ನಿಲ್ದಾಣದಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಡಿಕೊಂಡಿರುವ ಘಟನೆ ಸಿಸಿ ಟಿವಿಯಲ್ಲಿ ಸೆರೆಯಾದ ದೃಶ್ಯ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆನಂದಪುರ : ಮರದ ರಂಬೆ ಮರ್ಮಾಂಗಕ್ಕೆ ತಗುಲಿ ವ್ಯಕ್ತಿ ಸಾವು
ಅಪಘಾತದಿಂದ ಕೆಲ್ಸ ಕಳ್ಕೊಂಡ ಮಹಿಳೆ ನೆರವಿಗೆ ಕೋರ್ಟ್‌