ಕನ್ನಡಪ್ರಭ ವಾರ್ತೆ ನಂಜನಗೂಡು
ಪಟ್ಟಣದ ಭಾರತಿ ತೀರ್ಥ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ 112ನೇ ಸಂಸ್ಥಾಪನಾ ದಿನಾಚರಣೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಾಂತೀಯ ಭಾಷೆಗಳಲ್ಲಿ ಕನ್ನಡಕ್ಕೆ ತನ್ನದೇ ಆದ ಪ್ರಾಮುಖ್ಯತೆಯನ್ನು ತಂದುಕೊಡಬೇಕು ಎಂಬ ಸದುದ್ದೇಶದಿಂದ ಕನ್ನಡ ಸಾಹಿತ್ಯ ಪರಿಷತ್ ಸ್ಥಾಪಿಸಿ, ಆ ಮೂಲಕ ನಾಡಿನ ಸಾಹಿತ್ಯ ಮತ್ತು ಸಂಸ್ಕೃತಿ ಉಳಿಸಿ ಬೆಳೆಸಲು ಶ್ರಮಿಸುತ್ತಿದೆ, ನಾಲ್ವಡಿ ಅವರ ಪರಿಶ್ರಮದಿಂದಾಗಿ ಇಂದು ಕನ್ನಡ ಭಾಷೆ ಶಾಸ್ತ್ರೀಯ ಸ್ಥಾನಮಾನ ಲಭಿಸಿದೆ, ಜೊತೆಗೆ ವಿವಿಧ ರಾಜ್ಯಗಳ ಪೈಪೋಟಿಯ ನಡುವೆ ನಮ್ಮ ನಾಡಿನ ಕವಿಗಳು ಕನ್ನಡ ಭಾಷೆಗೆ 9 ಜ್ಞಾನಪೀಠ ಪ್ರಶಸ್ತಿಗಳನ್ನು ತಂದು ಕೊಡುವ ಮೂಲಕ ಕನ್ನಡ ಭಾಷೆಯ ಹಿರಿಮೆಯನ್ನು ದೇಶ ವಿದೇಶಗಳಲ್ಲಿ ಸಾರುವ ಮೂಲಕ ಕನ್ನಡ ಭಾಷೆಗೆ ತನ್ನದೇ ಆದ ಶಕ್ತಿ ಇದೆ ಎಂಬುದನ್ನು ಸಾಬೀತು ಮಾಡಿದ್ದಾರೆ ಎಂದರು.ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ದಿನೇಶ್ ಮಾತನಾಡಿ, ಮಾತೃಭಾಷೆಯಿಂದ ಮಾತ್ರ ಜೀವನದಲ್ಲಿ ಸಾಧನೆ ಸಾಧ್ಯ, ಆದ್ದರಿಂದ ವಿದ್ಯಾರ್ಥಿಗಳು ಇಂಗ್ಲೀಷ್ ವ್ಯಾಮೋಹ ಹಾಗೂ ಕೀಳರಿಮೆಯನ್ನು ಬಿಟ್ಟು, ಶ್ರದ್ಧೆ ಪರಿಶ್ರಮದಿಂದ ಕನ್ನಡ ಭಾಷೆಯನ್ನು ಬರೆದು ಓದುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು, ಆ ಮೂಲಕ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕಿದೆ ಎಂದರು.
ಕಸಾಪ ತಾಲೂಕು ಅಧ್ಯಕ್ಷ ಲತಾ ಮುದ್ದು ಮೋಹನ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಬಿ.ವಿ. ರಾಘವೇಂದ್ರ, ಅನಿತಾ, ಸತೀಶ್ ದಳವಾಯಿ, ರಂಗಸ್ವಾಮಿ, ಶೋಭಾ ನಾಗಶಯನ, ಮಂಜುಳಾ ಇದ್ದರು.