ಜೀಪು ಚಾಲಕರ ಸಂಘದಿಂದ ಸ್ವಚ್ಛ ಕೊಡಗು- ಸುಂದರ ಕೊಡಗು ಅಭಿಯಾನ

KannadaprabhaNewsNetwork |  
Published : Oct 22, 2025, 01:03 AM IST
ಚಿತ್ರ :  15ಎಂಡಿಕೆ2 : ಮಾಂದಲಪಟ್ಟಿ ಜೀಪು ಚಾಲಕರ ಸಂಘದಿಂದ ಸ್ವಚ್ಛತೆ. | Kannada Prabha

ಸಾರಾಂಶ

ಸ್ವಚ್ಛ ಕೊಡಗು - ಸುಂದರ ಕೊಡಗು ಅಭಿಯಾನಕ್ಕೆ ಜಿಲ್ಲೆಯಾದ್ಯಂತ ಅತ್ಯುತ್ತಮ ಸ್ಪಂದನೆ ದೊರಕಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೂರ್ಗ್ ಹೊಟೇಲ್, ರೆಸಾರ್ಟ್ ಅಸೋಸಿಯೇಷನ್ ಹಮ್ಮಿಕೊಂಡಿರುವ ಸ್ವಚ್ಛ ಕೊಡಗು- ಸುಂದರ ಕೊಡಗು ಅಭಿಯಾನಕ್ಕೆ ಜಿಲ್ಲೆಯಾದ್ಯಂತ ಅತ್ಯುತ್ತಮ ಸ್ಪಂದನೆ ದೊರಕಿದೆ. ಮಾಂದಲಪಟ್ಟಿ ಜೀಪು ಚಾಲಕರ ಸಂಘವು ಈ ಅಭಿಯಾನಕ್ಕೆ ಕೈಜೋಡಿಸಿತು.

ಸುಮಾರು 25 ಮಂದಿ ನಾಲ್ಕೈದು ತಂಡಗಳಾಗಿ ಶ್ರಮದಾನದಲ್ಲಿ ತೊಡಗಿದ್ದು, ನಂದಿಮೊಟ್ಟೆಯಿಂದ ಮಾಂದಲಪಟ್ಟಿವರೆಗೆ 18 ಕಿ.ಮೀ ರಸ್ತೆ ಬದಿಯಲ್ಲಿನ ಕಸವನ್ನು ಹೆಕ್ಕಿ ಸ್ವಚ್ಛಗೊಳಿಸಲಾಯಿತು. ಬೆಳಗ್ಗೆ 8 ಗಂಟೆಯಿಂದಲೇ ಸ್ವಚ್ಛತಾ ಕಾರ್ಯ ಆರಂಭಗೊಂಡಿತು. ಪ್ರವಾಸಿಗರು ಹಾಗೂ ಸಾರ್ವಜನಿಕರು ರಸ್ತೆ ಬದಿ ಕಸ ಎಸೆಯದೆ ಸ್ವಚ್ಛತೆ ಕಾಪಾಡುವಂತೆ ಮಾಂದಲಪಟ್ಟಿ ಜೀಪು ಚಾಲಕರ ಸಂಘದ ಖಜಾಂಚಿ ಮೊಣ್ಣಯ್ಯ ಮನವಿ ಮಾಡಿದ್ದಾರೆ. ಮಾಂದಲಪಟ್ಟಿಗೆ ತೆರಳುವ ಪ್ರವಾಸಿಗರು ಅಲ್ಲಿ ಕಸ ಹಾಕದಂತೆ ಜೀಪು ಚಾಲಕರು ಎಚ್ಚರ ವಹಿಸಬೇಕೆಂದು ಅವರು ಹೇಳಿದರು.

ಈ ಸಂದರ್ಭ ಸಂಘದ ಪ್ರಮುಖರಾದ ಶರಣು, ಪುಷ್ಪರಾಜ್, ರವಿ, ಡೇವಿಡ್‌ರಾಜ್, ದರ್ಶನ್, ಪಾಂಡಿರ ರವಿ, ಪಾಂಡಿರ ಚೇತು, ಗಜೇಂದ್ರ, ನಾರಾಯಣ, ಮನು, ಗಣೇಶ್, ರಾಜೇಶ್, ಮುತ್ತಣ್ಣ ಸೇರಿದಂತೆ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಗರದಲ್ಲಿ ಮಹಿಳೆ ಮೇಲೆ ನಾಯಿ ಅಟ್ಟಹಾಸ, ವಿವಿಧೆಡೆ 50 ಹೊಲಿಗೆ
ಭ್ರಷ್ಟಾಚಾರಕ್ಕೆ ಸಾಕ್ಷ್ಯ ಕೊಟ್ರೆ ರಾಜೀನಾಮೆ : ಸಚಿವರ ಸವಾಲ್