ಕುಡಿಯುವ ನೀರಿನ ಟ್ಯಾಂಕ್‌ಗಳ ಸ್ವಚ್ಛ ಮಾಡಿ: ಇಒ ಸುನಿಲ್

KannadaprabhaNewsNetwork |  
Published : May 30, 2024, 12:53 AM IST
ಅಂಕೋಲಾ ತಾಪಂ ಸಭಾಂಗಣದಲ್ಲಿ ವಿವಿಧ ಯೋಜನೆಗಳ ಕುರಿತು ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. | Kannada Prabha

ಸಾರಾಂಶ

ಮುಂಗಾರು ಆರಂಭವಾಗುವ ಮೊದಲು ಕುಡಿಯುವ ನೀರಿನ ಒವರ್ ಹೆಡ್ ಟ್ಯಾಂಕ್‌ಗಳನ್ನು ಶುಚಿಗೊಳಿಸಬೇಕು.

ಅಂಕೋಲಾ: ಈ ತಿಂಗಳ ಅಂತ್ಯದೊಳಗಾಗಿ ಗ್ರಾಪಂ ವ್ಯಾಪ್ತಿಯ ಎಲ್ಲ ಕುಡಿಯುವ ನೀರಿನ ಮೇಲ್ತೊಟ್ಟಿಗಳನ್ನು ಕಡ್ಡಾಯವಾಗಿ ಶುಚಿಗೊಳಿಸಿ, ಜಿಯೋ ಟ್ಯಾಗ್ ಛಾಯಾಚಿತ್ರಗಳೊಂದಿಗೆ ವರದಿ ಸಲ್ಲಿಸಬೇಕು ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಸುನಿಲ್ ಎಂ. ಸೂಚನೆ ನೀಡಿದರು.

ಅಂಕೋಲಾ ತಾಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ವಿವಿಧ ಯೋಜನೆಗಳ ಕುರಿತ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಂಗಾರು ಆರಂಭವಾಗುವ ಮೊದಲು ಕುಡಿಯುವ ನೀರಿನ ಒವರ್ ಹೆಡ್ ಟ್ಯಾಂಕ್‌ಗಳನ್ನು ಶುಚಿಗೊಳಿಸಬೇಕು. ಕುಡಿಯುವ ನೀರಿನ ಖಾಸಗಿ ಮೂಲಗಳಾದ ವೈಯಕ್ತಿಕ ಬಾವಿಗಳು ಸೇರಿದಂತೆ ಎಲ್ಲ ಕುಡಿಯುವ ನೀರಿನ ಮೂಲಗಳಲ್ಲಿ ನಿಯಮಿತವಾಗಿ ನೀರಿನ ಗುಣಮಟ್ಟ ಪರಿಶೀಲನೆ ಆಗಬೇಕು. ವಾಟರ್ ಪೈಪ್‌ಲೈನ್ ಸೋರುವಿಕೆ ನಿಯಂತ್ರಿಸಬೇಕು. ಜನತೆಗೆ ಶುದ್ಧ ಕುಡಿಯುವ ನೀರು ಪಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ನರೇಗಾ ಯೋಜನಗೆ ಸಂಬಂಧಿಸಿದಂತೆ ಮಳೆಗಾಲದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಾನವ ದಿನಗಳ ಸೃಜನೆ ಕಷ್ಟವಾದ್ದರಿಂದ ಮಳೆ ಆರಂಭವಾಗುವ ಮೊದಲೇ ನಿಗದಿತ ಗುರಿ ಸಾಧಿಸಲು ಕ್ರಮವಹಿಸಬೇಕು. ಮಹಿಳಾ ಕೂಲಿಕಾರರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು. ಗ್ರಾಪಂ ಕಟ್ಟಡ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಳೆ ನೀರು ಕೊಯ್ಲು ಘಟಕ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಎಂದ ಅವರು, ವಸತಿ, ಎಸ್‌ಬಿಎಂ, 15ನೇ ಹಣಕಾಸು, ಮುಖ್ಯಮಂತ್ರಿ ಗ್ರಾಮ ವಿಕಸನ, ಗ್ರಂಥಾಲಯ, ಎಸ್ಕ್ರೋ ಬಿಲ್ ಸೇರಿದಂತೆ ವಿವಿಧ ಪ್ರಮುಖ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ತಾಪಂ ಸಹಾಯಕ ಲೆಕ್ಕಾಧಿಕಾರಿ ಶ್ರೀಮತಿ ನಾಯ್ಕ, ಎಲ್ಲ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಸಿಲಿನ ಹೊಡೆತಕ್ಕೆ ಸಾವಿರಾರು ಮೀನುಗಳ ಮಾರಣಹೋಮ
ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸ