ಗೋಕರ್ಣ: ಇಲ್ಲಿನ ಬಸ್ ನಿಲ್ದಾಣ ಹಾಗೂ ಗ್ರಾಮ ಪಂಚಾಯಿತಿಯ ಅಶೋಕೆಯಲ್ಲಿ ನಿರ್ಮಿಸಿದ ಎಫ್ಎಸ್ಟಿ ಘಟಕಕ್ಕೆ ಜಿಲ್ಲಾ ಲೋಕಾಯುಕ್ತ ಎಸ್. ಪಿ. ಕುಮಾರಚಂದ್ರ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.
ಅದೇ ರೀತಿ ತ್ಯಾಜ್ಯ ವಿಲೇವಾರಿ ಘಟಕದ ಪಕ್ಕ ಹಾಕಿರುವ ತ್ಯಾಜ್ಯ ರಾಶಿಯನ್ನು ಕಂಡು, ಈ ರೀತಿ ಕಸ ಎಸೆದಿರುವುದು ಏಕೆ ಎಂದು ಪ್ರಶ್ನಿಸಿ, ಮೂರು ದಿನದೊಳಗೆ ಕಸ ತೆಗೆದು ಸ್ವಚ್ಛಗೊಳಿಸಿ ನಂತರ ಫೋಟೋ ಸಹಿತ ವರದಿ ನೀಡುವಂತೆ ಖಡಕ್ ಆದೇಶ ನೀಡಿದರು. ಬಸ್ ನಿಲ್ದಾಣದ ಶೌಚಾಲಯದಲ್ಲಿ ಹೆಚ್ಚು ಹಣ ಆಕರಣೆ ಹಾಗೂ ಸ್ವಚ್ಛತೆ ಇಲ್ಲದಿರುವುದು, ಅಶೋಕೆಯ ತ್ಯಾಜ್ಯ ವಿಲೇವಾರಿ ಘಟಕದ ಪಕ್ಕದಲ್ಲಿ ತ್ಯಾಜ್ಯ ರಾಶಿ ಹಾಕಿದ ಪರಿಣಾಮ ಅಲ್ಲಿನ ನಿವಾಸಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಪತ್ರಿಕೆ ಪ್ರಕಟಿಸಿತ್ತು. ಇದನ್ನೇ ಆಧರಿಸಿ ಲೋಕಾಯುಕ್ತ ಅಧಿಕಾರಿಗಳ ಆಗಮಿಸಿದ್ದರು.
ಈ ವೇಳೆ ಇನ್ಸ್ಪೆಕ್ಟರ್ ವಿನಾಯಕ ಬಿಲ್ಲವ, ಪ್ರಸಾದ ಪನ್ನೇಕರ ಹಾಗೂ ಸಿಬ್ಬಂದಿ, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಮಂಜುನಾಥ ಉಪಸ್ಥಿತರಿದ್ದರು.ಗಜಾನನ ಮಾರುತಿ ತಾಳಮದ್ದಲೆ ಕೂಟ ಉದ್ಘಾಟನೆ
ನಂತರ ಹೊಸ್ತೋಟ ಮಂಜುನಾಥ ಭಾಗ್ವತ ವಿರಚಿತ ರಾಮ ನಿರ್ಯಾಣ ತಾಳಮದ್ದಲೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ನಾರಾಯಣ ಭಾಗ್ವತ ದೇವರಗದ್ದೆ, ನಾಗೇಂದ್ರ ಭಾಗ್ವತ ಶೇಡಿಜಡ್ಡಿ, ಗೋಪಾಲಕೃಷ್ಣ ಭಟ್ಟ ಮೊಟ್ಟೆಪಾಲ, ಮದ್ದಲೆ ವಾದಕರಾಗಿ ಗಣಪತಿ ಹೆಗಡೆ ಕಣ್ಣಿಜಡ್ಡಿ ಭಾಗವಹಿಸಿದ್ದರು.