ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕವು ಇತ್ತೀಚೆಗೆ ಸಾಸ್ತಾನದ ಕೋಡಿ ಬೀಚ್ನಲ್ಲಿ ದೊಡ್ಡ ಪ್ರಮಾಣದ ಬೀಚ್ ಸ್ವಚ್ಛತಾ ಅಭಿಯಾನ ಯಶಸ್ವಿಯಾಗಿ ಆಯೋಜಿಸಿತು. ಸ್ವಚ್ಛತಾ ಅಭಿಯಾನದಲ್ಲಿ 114 ರಾಷ್ಟ್ರೀಯ ಸೇವಾ ಯೋಜನೆ ಸ್ವಯಂಸೇವಕರು ಭಾಗವಹಿಸಿದರು.
ಕೋಡಿ ಗ್ರಾಮ ಪಂಚಾಯಿತಿ, ಶೆಟ್ಟಿ ಆಗ್ರೋ ಸೆಂಟರ್, ಐರೋಡಿ ಮತ್ತು ಸಾಸ್ತಾನಾದ ಎನ್ಜಿಒ ಬೇರು ಕೋಸ್ಟ್ ಕ್ಲಿಯರ್ ನ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಸಾಮೂಹಿಕ ಸೇವಾ ಮನೋಭಾವವನ್ನು ಹೆಚ್ಚಿಸಿ, ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆಡಳಿತವು ಉದಾರ ಮನೋಭಾವದೊಂದಿಗೆ ಎಲ್ಲಾ ಸ್ವಯಂಸೇವಕರಿಗೆ ಉಪಾಹಾರ ಮತ್ತು ಮಧ್ಯಾಹ್ನದ ಊಟ ವ್ಯವಸ್ಥೆ ಮಾಡಿತು..................
12ರಂದು ‘ಕಾರಂತ ಉಪನ್ಯಾಸ ಮತ್ತು ರಂಗಪ್ರದರ್ಶನ’ಕಾರ್ಕಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಯಕ್ಷ ರಂಗಾಯಣ ಕಾರ್ಕಳ ಹಾಗೂ ಡಾ. ಶಿವರಾಮ ಕಾರಂತ ಟ್ರಸ್ಟ್, ಉಡುಪಿ ಸಹಯೋಗದಲ್ಲಿ ‘ಕಾರಂತ ಉಪನ್ಯಾಸ ಮತ್ತು ರಂಗಪ್ರದರ್ಶನ’ ಕಾರ್ಯಕ್ರಮ 12ರಂದು ಕೋಟಿ ಚೆನ್ನಯ ಥೀಂ ಪಾರ್ಕ್ ಆವರಣದಲ್ಲಿ ನಡೆಯಲಿದೆ. ಸಂಜೆ 4ಕ್ಕೆ ಚಿಂತಕ ಎಸ್.ಆರ್. ವಿಜಯಶಂಕರ್ ಉಪನ್ಯಾಸ ನೀಡಲಿದ್ದು, ಡಾ. ಗಣನಾಥ ಎಕ್ಕಾರು ಆಶಯ ಭಾಷಣ ಮಾಡಲಿದ್ದಾರೆ. ಬಿ.ಆರ್. ವೆಂಕಟರಮಣ ಐತಾಳ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 6.30ಕ್ಕೆ ‘ನಿರ್ದಿಗಂತ’ ತಂಡದಿಂದ ಡಾ. ಶಿವರಾಮ ಕಾರಂತರ ‘ಮೈಮನಗಳ ಸುಳಿಯಲ್ಲಿ’ ನಾಟಕವನ್ನು ಅಮಿತ್ ರೆಡ್ಡಿ ನಿರ್ದೇಶನದಲ್ಲಿ ಪ್ರದರ್ಶಿಸಲಾಗುವುದು ಎಂದು ಯಕ್ಷರಂಗಾಯಣದ ಅಧ್ಯಕ್ಷ ಬಿ.ಆರ್. ವೆಂಕಟರಮಣ ಐತಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.