ಶಿಕಾರಿಪುರ: ಶಿಕಾರಿಪುರದಲ್ಲಿ ಶುಕ್ರವಾರ ಬಿಜೆಪಿ ರೈತ ಮೋರ್ಚಾ ವತಿಯಿಂದ ವಿದ್ಯುತ್ ಸಮಸ್ಯೆ ಸಹಿತ ಬರಪೀಡಿತ ತಾಲೂಕು ಎಂದು ಘೋಷಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ನಡೆದ ಬೃಹತ್ ಪ್ರತಿಭಟನಾ ಸಭೆಗೆ ಆಗಮಿಸಿದ್ದ ಸಹಸ್ರ ಸಹಸ್ರ ಸಂಖ್ಯೆಯ ರೈತರು ಸಾರ್ವಜನಿಕರು ಬಿಸಿಲ ಬೇಗೆಯಿಂದ ದಣಿವಾರಿಸಿಕೊಳ್ಳಲು ಬಳಸಿದ ನೀರಿನ ಖಾಲಿ ಪ್ಯಾಕೆಟ್ ಮತ್ತಿತರ ತ್ಯಾಜ್ಯವನ್ನು ಯುವ ಮೋರ್ಚಾ ಕಾರ್ಯಕರ್ತರು ಮುಖಂಡ ಗುರುಮೂರ್ತಿ ನೇತೃತ್ವದಲ್ಲಿ ಸಂಗ್ರಹಿಸಿ ಕೈಗೊಂಡ ಸ್ವಚ್ಚತಾ ಅಭಿಯಾನ ಜನತೆಯ ಮೆಚ್ಚುಗೆಗೆ ಪಾತ್ರವಾಯಿತು. ಈ ಸಂದರ್ಭದಲ್ಲಿ ತಾ.ಬಿಜೆಪಿ ಅಧ್ಯಕ್ಷ ಹನುಮಂತಪ್ಪ, ಸಿದ್ದಲಿಂಗಪ್ಪ, ಯುವ ಮೋರ್ಚಾದ ಪ್ರಶಾಂತ್ ಸಾಳುಂಕೆ, ಗಿರೀಶ್ ಧಾರವಾಡದ, ವೀರೇಂದ್ರ ಪಾಟೀಲ್ ಸಹಿತ ಹಲವರು ಹಾಜರಿದ್ದರು.