ಕನ್ನಡಪ್ರಭ ವಾರ್ತೆ ಮಂಗಳೂರು
ಮಂಗಳೂರಿಗೆ ಆಗಮಿಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈಕ್ರೋ ಫೈನಾನ್ಸ್ಗಳ ಸಾಲ ನೀಡಿಕೆ, ಬಡ್ಡಿದರ ನಿಗದಿ, ಕಂತು ಪಾವತಿ ಸೇರಿದಂತೆ ಒಟ್ಟು ವ್ಯವಹಾರ ನಿಯಂತ್ರಿಸಲು ಕಾನೂನು ಜಾರಿ ಮಾಡುವುದು ಅತ್ಯಗತ್ಯ. ಮೈಕ್ರೋ ಫೈನಾನ್ಸ್ಗಳು ಬಲವಂತದ ಸಾಲ ವಸೂಲಿಯನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿದರು.
ಕೃಷಿ ವಿರೋಧಿ ತಿದ್ದುಪಡಿ ವಾಪಸ್ಗೆ ಆಗ್ರಹ: ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ರೈತ ಮತ್ತು ಕೃಷಿ ವಿರೋಧಿ ತಿದ್ದುಪಡಿಗಳನ್ನು ವಾಪಸ್ ಮಾಡುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಇದುವರೆಗೂ ತಿದ್ದುಪಡಿ ವಾಪಸ್ ಮಾಡಿಲ್ಲ. ಇದನ್ನು ವಿರೋಧಿಸಿ ಫೆ.10ರಿಂದ ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಯುತ್ತಿದ್ದು, ಸಿಪಿಎಂ ಇದಕ್ಕೆ ಬೆಂಬಲ ಘೋಷಿಸಿರುವುದಾಗಿ ಹೇಳಿದರು.ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಸೈಯದ್ ಮುಜೀಪ್, ದ.ಕ. ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ರಾಜ್ಯ ಸಮಿತಿ ಸದಸ್ಯ ಸುನಿಲ್ ಕುಮಾರ್ ಬಜಾಲ್, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಬಿ.ಎಂ. ಭಟ್ ಇದ್ದರು.ಕಾಂಗ್ರೆಸ್ ಉತ್ತಮ ಪಕ್ಷ ಅಂತ ಬೆಂಬಲ ನೀಡಿದ್ದಲ್ಲ: ಡಾ.ಪ್ರಕಾಶ್