ರಸ್ತೆಯ ಗುಂಡಿಗಳನ್ನು ಮುಚ್ಚಿ

KannadaprabhaNewsNetwork |  
Published : Jun 25, 2025, 01:18 AM IST
24ಎಎನ್‌ಟಿ1: ಆನವಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ, ತಿಮ್ಮಾಪುರ ನಿವಾಸಿಗಳು ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ತಿಮ್ಮಾಪುರ ಗ್ರಾಮದ ಶಿಬಾರದಿಂದ ರಾಜ್ಯ ಹೆದ್ದಾರಿ ವರೆಗಿನ ರಸ್ತೆ ತುಂಬ ಗುಂಡಿಗಳು ಬಿದ್ದಿದ್ದು, ವಾಹನ ಸಂಚಾರ ಕಷ್ಟಸಾಧ್ಯವಾಗಿದೆ, ಕೂಡಲೇ ಗುಂಡಿಗಳನ್ನು ಮುಚ್ಚಬೇಕು ಎಂದು ಒತ್ತಾಯಿಸಿ ತಿಮ್ಮಾಪುರ ಗ್ರಾಮದ ನಿವಾಸಿಗಳು ಆನವಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಆನವಟ್ಟಿ: ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ತಿಮ್ಮಾಪುರ ಗ್ರಾಮದ ಶಿಬಾರದಿಂದ ರಾಜ್ಯ ಹೆದ್ದಾರಿ ವರೆಗಿನ ರಸ್ತೆ ತುಂಬ ಗುಂಡಿಗಳು ಬಿದ್ದಿದ್ದು, ವಾಹನ ಸಂಚಾರ ಕಷ್ಟಸಾಧ್ಯವಾಗಿದೆ, ಕೂಡಲೇ ಗುಂಡಿಗಳನ್ನು ಮುಚ್ಚಬೇಕು ಎಂದು ಒತ್ತಾಯಿಸಿ ತಿಮ್ಮಾಪುರ ಗ್ರಾಮದ ನಿವಾಸಿಗಳು ಆನವಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಗ್ರಾಮದ ನಿವಾಸಿ ಬಸವರಾಜಪ್ಪ, ಐದು ವರ್ಷದಿಂದ ತಿಮ್ಮಾಪುರ ಗ್ರಾಮದ 200 ಮೀಟರ್‌ ರಸ್ತೆ ಹಾಳಾಗಿದ್ದು, ಅಧಿಕಾರಿಗಳು ಎರಡು ವರ್ಷದಿಂದ ಮಂಜೂರು ಆಗಿದೆ ಎಂದು ಹೇಳುತ್ತಿದ್ದರು. ಇನ್ನೂ ನಿರ್ಮಾಣ ಆಗಿಲ್ಲ ಏಕೆ ಎಂದು ಕೇಳಿದರೆ 15ನೇ ಹಣಕಾಸು ಹಣ ಬಂದಿಲ್ಲ. ಕಾಮಗಾರಿ ಮರಳಿ ಹೋಗಿದೆ ಎಂದು ಉತ್ತರ ನೀಡುತ್ತಿದ್ದಾರೆ. ಅವಧಿ ಮುನ್ನವೇ ಮಳೆಗಾಲ ಶುರುವಾಗಿದ್ದು, ರಸ್ತೆಯಲ್ಲಿ ಇದ್ದ ಚಿಕ್ಕ-ಚಿಕ್ಕ ಗುಂಡಿಗಳು, ಈಗ ದೊಡ್ಡ-ದೊಡ್ಡ ಗುಂಡಿಗಳಾಗಿ ನಡೆದುಕೊಂಡು ಹೋಗುವುದು ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು.

ಈ ರಸ್ತೆಯಲ್ಲಿ ಶಾಲಾ –ಕಾಲೇಜು ವಿದ್ಯಾರ್ಥಿಗಳು, ಕೂಲಿ ಕೆಲಸಕ್ಕೆ ಹೋಗುವವರು, ಗೂಡ್ಸ್‌ ವಾಹನ, ದ್ವಿಚಕ್ರ ವಾಹನ, ಆಟೋಗಳಲ್ಲಿ ಸಂಚಾರ ಮಾಡಲು ವಾಹನ ಸವಾರರು ಜೀವಭಯದಲ್ಲಿ ಸಂಚಾರ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಪಾದಚಾರಿಗಳು, ಸೈಕಲ್‌, ದ್ವಿಚಕ್ರ ವಾಹನದಲ್ಲಿ ಹೋಗುವವರು ಈ ರಸ್ತೆಯಲ್ಲಿ ಬಿದ್ದು, ಎದ್ದು ಹೋಗುತ್ತಿದ್ದಾರೆ. ಸಾಕಾಷ್ಟು ಅಪಘಾತಗಳು ಸಂಭವಿಸಿವೆ. ನಿತ್ಯ ಪರದಾಡಿಕೊಂಡು ತಮ್ಮ ಕೆಲಸ ಕಾರ್ಯಗಳಿಗೆ ಆನವಟ್ಟಿಗೆ ಹೋಗುವ ತಿಮ್ಮಾಪುರ ನಿವಾಸಿಗಳಿಗೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ತಕ್ಷಣವೇ ಗುಂಡಿಗಳನ್ನು ಮುಚ್ಚಿ, ನಂತರ ಡಾಂಬರು ರಸ್ತೆಯನ್ನು ನಿರ್ಮಿಸಿ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ನಿವಾಸಿಗಳಾದ ಅಮಿತ್‌, ಸುಮಂತ್‌, ನಂದೀಶ್‌, ಇಬ್ರಾಹಿಂ, ಅರುಣ, ಮಾಲತೇಶ್‌, ಸಹಿಮ್‌, ಆದಿತ್ಯ, ವೇಣುಗೋಪಾಲ, ಶಬರೀಶ್‌, ರಬ್ಬಾನಿ ಇತರರಿದ್ದರು.

PREV

Recommended Stories

ಬಾಗಲಕೋಟೆ ತೋಟಗಾರಿಕಾ ವಿಜ್ಞಾನ ವಿವಿಗೆ ಅನುದಾನ: ಸಚಿವ
ಸಂಭ್ರಮದ ಮೌನೇಶ್ವರ ಜಾತ್ರಾ ಮಹೋತ್ಸವ