ಸಿಎಂ ಆದ್ರೂ ಬೊಮ್ಮಾಯಿ ಕೊಡುಗೆ ಶೂನ್ಯ: ಸಚಿವ ಶಿವಾನಂದ ಪಾಟೀಲ್

KannadaprabhaNewsNetwork |  
Published : Nov 07, 2024, 12:30 AM IST
 ಸಿಎಂ ಆದ್ರೂ ಬೊಮ್ಮಾಯಿ ಕೊಡುಗೆ ಸೂನ್ಯ , *ಸಚಿವ ಶಿವಾನಂದ ಪಾಟೀಲ್ ಟೀಕೆ *ಸಿಎಂ ಡಿಸಿಎಂ ಕೈ ಬಲಪಡಿಸಲು ಮನವಿ  | Kannada Prabha

ಸಾರಾಂಶ

ಮುಖ್ಯಮಂತ್ರಿ ಆದ್ರೂ ತಾವು ಪ್ರತಿನಿಧಿಸುತ್ತಿದ್ದ ಶಿಗ್ಗಾಂವಿ ಕ್ಷೇತ್ರಕ್ಕೆ ಬಸವರಾಜ ಬೊಮ್ಮಾಯಿ ಕೊಡುಗೆ ಶೂನ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಟೀಕಿಸಿದರು.

ಕನ್ನಡಪ್ರಭ ವಾರ್ತೆ ಶಿಗ್ಗಾಂವಿ

ಮುಖ್ಯಮಂತ್ರಿ ಆದ್ರೂ ತಾವು ಪ್ರತಿನಿಧಿಸುತ್ತಿದ್ದ ಶಿಗ್ಗಾಂವಿ ಕ್ಷೇತ್ರಕ್ಕೆ ಬಸವರಾಜ ಬೊಮ್ಮಾಯಿ ಕೊಡುಗೆ ಶೂನ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಟೀಕಿಸಿದರು.

ಶಿಗ್ಗಾಂವಿಯಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರು. ಸತತವಾಗಿ ನಾಲ್ಕು ಬಾರಿ ಗೆದ್ದು ಪ್ರಮುಖ ಖಾತೆಗಳನ್ನು ನಿರ್ವಹಿಸಿದರೂ ಕ್ಷೇತ್ರದ ಅಭಿವೃದ್ಧಿ ಮಾಡಲಿಲ್ಲ ಎಂದು ವಾಗ್ದಾಳಿ ಮಾಡಿದ ಅವರು, ತಾಲೂಕಿನಲ್ಲಿ ಸಂಚರಿಸಿದಾಗ ಕ್ಷೇತ್ರದ ಸಮಸ್ಯೆಗಳು ಗೋಚರಿಸುತ್ತಿವೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೈ ಬಲಪಡಿಸಲು ಪಕ್ಷದ ಅಭ್ಯರ್ಥಿ ಪಠಾಣ್ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಎಸ್.ಎ. ಖಾದ್ರಿ, ಮಂಜುನಾಥ ಮಣ್ಣನವರ ಸೇರಿದಂತೆ ಹಲವಾರು ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ