ಕನ್ನಡಪ್ರಭ ವಾರ್ತೆ ಬೆಂಗಳೂರು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ನ್ಯಾಯವನ್ನು ಒಳಗೊಂಡಿರುವ ಸಂವಿಧಾನವನ್ನು ವಿರೋಧಿಸುವವರು ಅದರ ಬದಲಾವಣೆಯಾಗಬೇಕೆಂಬ ಮಾತುಗಳನ್ನಾಡಿದ್ದಾರೆ ಎಂದರು.
ಪೇಜಾವರ ಶ್ರೀಗಳೂ ಈ ಕುರಿತು ಹೇಳಿಕೆ ನೀಡಿದ್ದಾರಲ್ಲಾ ಎಂಬ ಪ್ರಶ್ನೆಗೆ, ಅವರು ಯಾಕೆ ಹಾಗೆ ಹೇಳಿದರೋ ಗೊತ್ತಿಲ್ಲ. ಆದರೆ, ನಮ್ಮ ಸರ್ಕಾರ ಸಂವಿಧಾನದ ರಕ್ಷಣೆಗೆ ಬದ್ಧವಾಗಿದೆ ಎಂದರು.ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರು ಬಿಜೆಪಿ ಮತ್ತು ಆರೆಸ್ಸೆಸ್ನವರು ಸಂವಿಧಾನ ವಿರೋಧಿಗಳು ಎಂದು ಟೀಕಿಸಿದರು. ಪೇಜಾವರ ಶ್ರೀಗಳ ಹೇಳಿಕೆಯನ್ನು ಪಕ್ಷದ ನಾಯಕರೊಬ್ಬರು ಮೆಲುಧ್ವನಿಯಲ್ಲಿ ಪ್ರಸ್ತಾಪಿಸಿದರು. ಆಗ ಮುಖ್ಯಮಂತ್ರಿಯವರು, ಹೌದು ಮೊನ್ನೆ ಮೊನ್ನೆ ಪೇಜಾವರ ಸ್ವಾಮೀಜಿ ಅವರು ಕೂಡ ಸಂವಿಧಾನ ಬದಲಾವಣೆ ಕುರಿತು ಮಾತನಾಡಿದ್ದಾರೆ. ಅದನ್ನು ಹೇಳುವ ಅವಶ್ಯಕತೆ ಏನಿತ್ತು. ಮನುಸ್ಮೃತಿ ಇರಬೇಕು ಅಂತ ಸ್ವಾಮೀಜಿ ಪ್ರತಿಪಾದಿಸುತ್ತಾರೆ.+++ಆದರೆ, ನಾನು ಹೇಳುತ್ತೇನೆ. ದಲಿತರು, ಶೂದ್ರರು, ಅಲ್ಪಸಂಖ್ಯಾತರು, ಮಹಿಳೆಯರು, ಯುವಕರು ಎಲ್ಲರೂ ಸೇರಿ ನಮ್ಮ ಸಂವಿಧಾನವನ್ನು ನಾವು ಉಳಿಸಿಕೊಳ್ಳದೆ ಹೋದರೆ ನಾವ್ಯಾರೂ ಇರುವುದಿಲ್ಲ ಎಂದರು.+++