ಇಂದು ಯರಗಟ್ಟಿಗೆ ಸಿಎಂ, ಡಿಸಿಎಂ ಆಗಮನ

KannadaprabhaNewsNetwork |  
Published : Apr 28, 2024, 01:18 AM IST
ಯರಗಟ್ಟಿಯಲ್ಲಿ ಭಾನುವಾರ ನಡೆಯುವ ಕಾಂಗ್ರೆಸ್‌ ಪ್ರಚಾರ ಸಮಾವೇಶದ ವೇದಿಕೆ ಸಿದ್ಧತೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಪರಿಶೀಲಿಸಿದರು | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ: ಮೇ. 7 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಏ.28ರಂದು ಆಗಮಿಸುತ್ತಿದ್ದು, ಯರಗಟ್ಟಿಯಲ್ಲಿ ಮಧ್ಯಾಹ್ನ 2.30ಕ್ಕೆ ಅದ್ಧೂರಿ ಸಮಾವೇಶ ನಡೆಯಲಿದೆ. ಸಮಾವೇಶ ನಡೆಯಲಿರುವ ಬಸವೇಶ್ವರ ಪ್ರೌಢಶಾಲಾ ಆವರಣದಲ್ಲಿ ನಡೆಯುತ್ತಿರುವ ಸಿದ್ಧತೆಗಳನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಶನಿವಾರ ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿಮೇ. 7 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಏ.28ರಂದು ಆಗಮಿಸುತ್ತಿದ್ದು, ಯರಗಟ್ಟಿಯಲ್ಲಿ ಮಧ್ಯಾಹ್ನ 2.30ಕ್ಕೆ ಅದ್ಧೂರಿ ಸಮಾವೇಶ ನಡೆಯಲಿದೆ. ಸಮಾವೇಶ ನಡೆಯಲಿರುವ ಬಸವೇಶ್ವರ ಪ್ರೌಢಶಾಲಾ ಆವರಣದಲ್ಲಿ ನಡೆಯುತ್ತಿರುವ ಸಿದ್ಧತೆಗಳನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಶನಿವಾರ ಪರಿಶೀಲನೆ ನಡೆಸಿದರು.

ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ ಬೆಳಗ್ಗೆ ಉಗಾರಖುರ್ದ್‌ದಲ್ಲಿ ಚಿಕ್ಕೋಡಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಪ್ರಚಾರ ನಡೆಸಿ, ಹೆಲಿಕಾಪ್ಟರ್ ಮೂಲಕ ಯರಗಟ್ಟಿಗೆ ಆಗಮಿಸುವರು.

ಸಮಾವೇಶದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಹಲವಾರು ಸಚಿವರು, ಜಿಲ್ಲೆಯ ಶಾಸಕರು, ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ. ಭಾರೀ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ನಿರೀಕ್ಷೆ ಇದ್ದು, ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಮಳೆಯಾದರೂ ಯಾವುದೇ ತೊಂದರೆಯಾಗದಂತೆ ಪೆಂಡಾಲ್‌ಗಳನ್ನು ಹಾಕಲಾಗಿದೆ.ಕೋಟ್...

ಬೆಳಗಾವಿ ಜಿಲ್ಲೆಯಲ್ಲಿ ಸಂಪೂರ್ಣ ಕಾಂಗ್ರೆಸ್ ಪರ ವಾತಾವರಣ ನಿರ್ಮಾಣವಾಗಿದ್ದು, ಭಾನುವಾರ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ಕಾರ್ಯಕರ್ತರಲ್ಲಿ ಇನ್ನಷ್ಟು ಉತ್ಸಾಹ ತುಂಬಲಿದ್ದಾರೆ. ಸ್ಥಳೀಯ ಅಭ್ಯರ್ಥಿಯಾಗಿರುವ ಮೃಣಾಲ ಹೆಬ್ಬಾಳಕರ್ ಅವರನ್ನು ಗೆಲ್ಲಿಸಲೇ ಬೇಕೆಂದು ಕ್ಷೇತ್ರದ ಜನರು ನಿರ್ಧರಿಸಿದ್ದು, ಅತ್ಯಧಿಕ ಬಹುಮತದಿಂದ ಕಾಂಗ್ರೆಸ್ ಗೆಲ್ಲಲಿದೆ. ಭಾನುವಾರದ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಬೇಕು.

ಲಕ್ಷ್ಮೀ ಹೆಬ್ಬಾಳಕರ್, ಸಚಿವೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಆತ್ಮ*ತ್ಯೆಗೆ ಸರ್ಕಾರಿ ನೌಕರಿಗೆ ಸೇರುವಂತೆ ಕುಟುಂಬ ಒತ್ತಡ ಕಾರಣ?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ