ನನ್ನ ಜತೆಗೆ ಶಾಸಕರಾದವರು ಸಿಎಂ, ಡಿಸಿಎಂ, ನನಗೆ ಅದೃಷ್ಟವಿಲ್ಲ: ರಾಯರಡ್ಡಿ

KannadaprabhaNewsNetwork |  
Published : Aug 05, 2025, 11:45 PM IST
ನೂತನವಾಗಿ ರಾಜ್ಯ ಕೆಎಂಎಫ್ ಮಂಡಳಿಗೆ ಹಂಪಯ್ಯಸ್ವಾಮಿ ಹಿರೇಮಠ ನಾಮನಿರ್ದೇಶನಗೊಂಡ ಹಿನ್ನೆಲೆಯಲ್ಲಿ ಯಲಬುರ್ಗಾದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಜಂಗಮ ಸಮುದಾಯದಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಶಾಸಕ ಬಸವರಾಜ ರಾಯರಡ್ಡಿಯನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ನನ್ನ ಜತೆಗೆ ಶಾಸಕರಾದವರು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಮಂತ್ರಿಗಳಾಗಿದ್ದಾರೆ. ಆದರೆ, ನನಗೆ ಅವಕಾಶ ಮತ್ತು ಅದೃಷ್ಟವಿಲ್ಲದೆ ಇರುವುದರಿಂದ ಇಂದು ಸಿಎಂರವರ ಆರ್ಥಿಕ ಸಲಹೆಗಾರನಾಗಿದ್ದೇನೆ ಎಂದು ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.

ಯಲಬುರ್ಗಾ: ‘ನನ್ನ ಜತೆಗೆ ಶಾಸಕರಾದವರು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಮಂತ್ರಿಗಳಾಗಿದ್ದಾರೆ. ಆದರೆ, ನನಗೆ ಅವಕಾಶ ಮತ್ತು ಅದೃಷ್ಟವಿಲ್ಲದೆ ಇರುವುದರಿಂದ ಇಂದು ಸಿಎಂರವರ ಆರ್ಥಿಕ ಸಲಹೆಗಾರನಾಗಿದ್ದೇನೆ’ ಎಂದು ಶಾಸಕ ಬಸವರಾಜ ರಾಯರಡ್ಡಿ ಹೇಳಿದರು. ಮಂಗಳವಾರ ಇಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 1985ರಲ್ಲಿ ನನ್ನ ಜತೆಗೆ ಶಾಸಕರಾದ ಸಿದ್ದರಾಮಯ್ಯ, ಜಿ.ಪರಮೇಶ್ವರ ಅವರು ಸಿಎಂ, ಡಿಸಿಎಂ ಆಗಿದ್ದಾರೆ. ಕಾಂಗ್ರೆಸ್ ಕಟ್ಟುವಲ್ಲಿ ಪ್ರಮುಖರಾದ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ನನಗೆ ಅದೃಷ್ಟ ಮತ್ತು ಅವಕಾಶ ಇಲ್ಲದ್ದಕ್ಕೆ ಸಿಎಂ ಆರ್ಥಿಕ ಸಲಹೆಗಾರ ಹುದ್ದೆಗೆ ತೃಪ್ತಿಪಡಬೇಕಾಯಿತು. ಎಲ್ಲವನ್ನೂ ಸಮಯ ಮತ್ತು ಸಂದರ್ಭ ನಿರ್ಧರಿಸುತ್ತದೆ ಎಂದರು.

ಅಭಿವೃದ್ಧಿ ವಿಚಾರ ಇಟ್ಟುಕೊಂಡು ರಾಜಕಾರಣಕ್ಕೆ ಬಂದಿರುವ ನಾನು ಜಾತಿ, ದ್ವೇಷದ ರಾಜಕಾರಣ ಮಾಡಿಲ್ಲ. ಅಲ್ಲದೆ, ರಾಜಕೀಯಕ್ಕೆ ನನ್ನ ಕುಟುಂಬದವರನ್ನು ತಂದಿಲ್ಲ. ಪಕ್ಷದ ಕಾರ್ಯರ್ತರನ್ನೇ ನನ್ನ ಕುಟುಂಬದ ಸದಸ್ಯರೆಂದು ತಿಳಿದಿದ್ದೇನೆ. ಆದರೆ, ರಾಜಕೀಯದಲ್ಲಿ ಇಂದು ಜಾತಿ ವ್ಯವಸ್ಥೆಯೇ ಹೆಚ್ಚಾಗಿದೆ ಎಂದು ಅವರು ವಿಷಾದಿಸಿದರು.

ರಾಜಕಾರಣದಲ್ಲಿ ನನ್ನನ್ನು ನಂಬಿದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಗೌರವ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಮಾಜಿ ಸಚಿವ ಹಾಲಪ್ಪ ಆಚಾರ್ ಅವರ ಸ್ನೇಹಿತರಿಗೆ ಸಹಕಾರಿ ರತ್ನ ಪ್ರಶಸ್ತಿ ಕೊಡಲು ಶಿಫಾರಸು ಮಾಡಲಾಗುವುದು ಎಂದು ಅವರು ಕಿಚಾಯಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ-ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಒತ್ತಾಯ