ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ತನಿಖೆ ಮಾಡುತ್ತಿದೆ. ಸತ್ಯಾಸತ್ಯತೆ ಬಂದ ಮೇಲೆ ಖಂಡಿತ ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.
ತೀರ್ಮಾನ ಮಾಡಿದ್ದು ಆರ್ಸಿಬಿಸತ್ತವರ ಜೀವ ತಂದುಕೊಡಲು ಸಾಧ್ಯ ಇಲ್ಲ, ಕುಟುಂಬದ ಸದಸ್ಯರ ನೋವು ಮರೆಸಲು ಸಾಧ್ಯವಿಲ್ಲ. ನನ್ನ ವಿಧಾನ ಸಭಾ ಕ್ಷೇತ್ರವಾದ ಚಿಂತಾಮಣಿಯಲ್ಲಿ ಇಬ್ಬರು ಹುಡುಗರ ಸಾವಾಗಿದೆ. ನನಗೂ ನೋವಾಗಿದೆ. ನಾನು ಸಹ ಕ್ರಿಕೆಟ್ ಆಟಗಾರ ಮತ್ತು ಕ್ರಿಕೆಟ್ ಪ್ರೇಮಿ, ವಿಶ್ವಕಪ್ ಪಂದ್ಯ ಗೆದ್ದಾಗಲೂ ಈ ರೀತಿ ಸಂಭ್ರಮ ಇರುತ್ತಿರಲಿಲ್ಲ. ಆದರೆ ಪ್ರೀಮಿಯರ್ ಲೀಗ್ಗೆ ಜನ ಈ ರೀತಿ ಸಂಭ್ರಮ ಮಾಡುತ್ತಾರೆ. ಮೈಮರೀತಾರೆ ಅನ್ನೋದು ನಾನು ನೋಡಿಲ್ಲ. ಹಳ್ಳಿಗಳಲ್ಲಿ ಸಂಭ್ರಮ ಮನೆ ಮಾಡಿತ್ತು. ಐಪಿಎಲ್ ಆಪರೇಷನ್ ಸಿಂಧೂರದಿಂದ ಕೆಲ ಸಮಯ ವಿಳಂಬ ಆಯಿತು. ಹಾಗಾಗಿ ಆರ್ಸಿಬಿ ಮ್ಯಾನೇಜ್ಮೆಂಟ್ ಆಟಗಾರರ ಕಮಿಟ್ಮೆಂಟ್ನಿಂದ ಸಂಭ್ರಮಾಚರಣೆ ತೀರ್ಮಾನ ಮಾಡಿದ್ದು ನಾವಲ್ಲ ಎಂದರು.
ಕುಂಭಮೇಳ ಕಾಲ್ತುಳಿತ ಟೀಕಿಸಿಲ್ಲ
ಪಹಲ್ಗಾಮ್ ದಾಳಿ ಘಟನೆ ಕುಂಭಮೇಳ ಕಾಲ್ತುಳಿತ ಘಟನೆಯನ್ನು ನಾವು ಟೀಕಿಸಿಲ್ಲ. ಬಿಜೆಪಿ, ಜೆಡಿಎಸ್ ನಾಯಕರು ಶವಗಳ ಮೇಲೆ ರಾಜಕೀಯ ಮಾಡುತ್ತಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೃತ ಪಟ್ಟವರ ಬಗ್ಗೆ ಬಿಜೆಪಿ, ಜೆಡಿಎಸ್ ಗೆ ಕರುಣೆ ಇಲ್ಲ. ಬಿಜೆಪಿ, ಜೆಡಿಎಸ್ ನವರು ಶವಗಳ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.