ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಶಿವಮೊಗ್ಗದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಾವ್ಯಾರು ವಿರೋಧ ಮಾಡಿಲ್ಲ. ರಾಮ ಮಂದಿರ ಉದ್ಘಾಟನೆಗೊಳ್ಳುತ್ತಿರುವುದು ಸಂತೋಷ. ನಾವು ಕೂಡ ರಾಮನ ಭಕ್ತರೇ. ಚುನಾವಣೆ ಸಮಯದಲ್ಲಿ ಮನೆ ಮನೆಗೆ ಮಂತ್ರಾಕ್ಷತೆ ಕೊಡುತ್ತಾರೆ, ಕೊಡಲಿ. ರಾಮ ಮಂದಿರ ನಿರ್ಮಾಣ ವಿಚಾರದಿಂದ ಚುನಾವಣೆಯಲ್ಲಿ ಯಾವ ವಾತಾವರಣ ಬದಲಾಗುವುದಿಲ್ಲ ಎಂದರು.
ನಿಗಮ ಮಂಡಳಿ ಕುರಿತು ಪ್ರತಿಕ್ರಿಯಿಸಿದ ಅವರು, ನಿಗಮ ಮಂಡಳಿಗಳಿಗೆ ಶಾಸಕರು, ಮುಖಂಡರು, ಕಾರ್ಯಕರ್ತರಿಗೆ ಕೊಡುವ ಬಗ್ಗೆ ತೀರ್ಮಾನ ಆಗಿದೆ. ಕಾರ್ಯಕರ್ತರು ಮುಖಂಡರು ಶಾಸಕರು ಎಲ್ಲರಿಗೂ ಕೊಡಬೇಕು. ನಾನು ನನಗೆ ನಿಗಮ ಮಂಡಳಿ ಕೊಡಿ ಅಂತಾ ಕೇಳಿಲ್ಲ. ಹಿರಿಯ ಶಾಸಕರಿಗೆ ಕೊಡಿ ಎಂದು ಕೇಳಿದ್ದೇವೆ ಎಂದರು.ಲೋಕಸಭೆ ಸ್ಪರ್ಧೆ ವಿಚಾರ:
- - - ಕೋಟ್ ಹುಬ್ಬಳ್ಳಿ ಕರಸೇವಕನ ಬಂಧನ ವಿಚಾರವಾಗಿ ಬಿಜೆಪಿ ವಿಪಕ್ಷವಾಗಿ ಪ್ರತಿಭಟನೆ ಮಾಡುವುದರಲ್ಲಿ ತಪ್ಪಿಲ್ಲ. ಆದರೆ, ಅವರು ಎಲ್ಲದಕ್ಕೂ ಪ್ರತಿಭಟನೆ ಮಾಡ್ತಾರೆ. ಮಧು ಬಂಗಾರಪ್ಪ ಚೆಕ್ ಬೌನ್ಸ್ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಈ ಬಗ್ಗೆ ನಾನು ಏನು ಮಾತನಾಡಲ್ಲ. ₹40 ಸಾವಿರ ಕೋಟಿ ಹಗರಣ ಆಗಿದೆ ಅಂತಾ ಯತ್ನಾಳ್ ಹೇಳಿದ್ದಾರೆ. ಅದರ ಬಗ್ಗೆ ತನಿಖೆ ನಡೆಸಿ, ಪಿಎಸ್ಐ ಹಗರಣದಲ್ಲಿ ವಿಜಯೇಂದ್ರ ಹೆಸರು ಕೇಳಿಬಂದಿದೆ. ಈ ಬಗ್ಗೆ ತನಿಖೆ ನಡೆಸಲಿ
- ಗೋಪಾಲಕೃಷ್ಣ ಬೇಳೂರು, ಶಾಸಕ, ಸಾಗರ ಕ್ಷೇತ್ರ- - -
(-ಫೋಟೋ: ಗೋಪಾಲಕೃಷ್ಣ ಬೇಳೂರು)