(ಪರಿಷ್ಕೃತ-ಇದೇ ಸುದ್ದಿಯನ್ನು ಬಳಸಿಕೊಳ್ಳಿ) ಹಟ್ಟಿ ಚಿನ್ನದ ಗಣಿಯಲ್ಲಿ ಇಂದು ₹998 ಕೋಟಿಯ ಕಾಮಗಾರಿಗೆ ಚಾಲನೆ

KannadaprabhaNewsNetwork |  
Published : Aug 05, 2025, 11:45 PM IST
ಸಿದ್ದರಾಮಯ್ಯ | Kannada Prabha

ಸಾರಾಂಶ

ದೇಶದಲ್ಲಿ ಚಾಲ್ತಿಯಲ್ಲಿರುವ ಏಕೈಕ ಚಿನ್ನದಗಣಿ ಖ್ಯಾತಿಯ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಬುಧವಾರ ₹998 ಕೋಟಿ ವೆಚ್ಚದ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಚಾಲನೆ ನೀಡಲಿದೆ. ಈ ಕಾರ್ಯಕ್ರಮಕ್ಕೆ ಆಗಮಿಸಬೇಕಿದ್ದ ಸಿಎಂ ಸಿದ್ದರಾಮಯ್ಯ ಅವರ ಪ್ರವಾಸ ಹವಾಮಾನ ವೈಪರೀತ್ಯ ಕಾರಣ ರದ್ದಾಗಿದೆ.

- ಹವಾಮಾನ ವೈಪರೀತ್ಯ ಕಾರಣ ಸಿಎಂ ಭೇಟಿ ರದ್ದು

ಕನ್ನಡಪ್ರಭ ವಾರ್ತೆ ರಾಯಚೂರು

ದೇಶದಲ್ಲಿ ಚಾಲ್ತಿಯಲ್ಲಿರುವ ಏಕೈಕ ಚಿನ್ನದಗಣಿ ಖ್ಯಾತಿಯ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಬುಧವಾರ ₹998 ಕೋಟಿ ವೆಚ್ಚದ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಚಾಲನೆ ನೀಡಲಿದೆ. ಈ ಕಾರ್ಯಕ್ರಮಕ್ಕೆ ಆಗಮಿಸಬೇಕಿದ್ದ ಸಿಎಂ ಸಿದ್ದರಾಮಯ್ಯ ಅವರ ಪ್ರವಾಸ ಹವಾಮಾನ ವೈಪರೀತ್ಯ ಕಾರಣ ರದ್ದಾಗಿದೆ.

ತಾಲೂಕಿನ ಹಟ್ಟಿ ಪಟ್ಟಣದ ಕ್ರೀಡಾಂಗಣದಲ್ಲಿ ಮಧ್ಯಾಹ್ನ 12ಕ್ಕೆ ನಡೆಯುವ ಸಮಾರಂಭದಲ್ಲಿ ಹಟ್ಟಿ ಚಿನ್ನದ ಕಂಪನಿ ನಿಯಮಿತದ ಸಿಬ್ಬಂದಿ ಹಾಗೂ ಕಾರ್ಮಿಕರ ವಸತಿ ಸಮುಚ್ಛ, ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಹಾಗೂ ಕ್ರೀಡಾಂಗಣ ಅಭಿವೃದ್ಧಿ ಸೇರಿದಂತೆ ₹998 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲಾಗುವುದು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್, ಎಸ್.ಎಸ್.ಮಲ್ಲಿಕಾರ್ಜುನ, ಸತೀಶ್ ಜಾರಕಿಹೊಳಿ ಹಾಗೂ ರಾಜ್ಯ ಸರ್ಕಾರದ ಗಣ್ಯರು, ಅಧಿಕಾರಿಗಳು ಭಾಗಿಯಾಗಲಿದ್ದಾರೆ ಎಂದು ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ಅಧ್ಯಕ್ಷ, ಶಾಸಕ ಜೆ.ಟಿ.ಪಾಟೀಲ್‌ ತಿಳಿಸಿದ್ದಾರೆ.

ಮುಖ್ಯಮಂತ್ರಿ ಅವರು ಹೆಲಿಕ್ಯಾಪ್ಟರ್ ಮೂಲಕ ಭೇಟಿ ನೀಡಲಿದ್ದಾರೆ ಎನ್ನಲಾಗಿತ್ತು. ಆದರೆ, ಹವಾಮಾನ ವೈಪರೀತ್ಯ ಕಾರಣದಿಂದ ಕೊನೆಕ್ಷಣದಲ್ಲಿ ಸಿದ್ದರಾಮಯ್ಯ ಅವರ ರಾಯಚೂರು ಜಿಲ್ಲಾ ಪ್ರವಾಸ ರದ್ದಾಗಿದ್ದು, ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ.

ಲಕ್ಷಾಂತರ ಕಾರ್ಮಿಕರಿಗೆ ಕೆಲಸ:ಸಿಂಧೂ ನಾಗರಿಕತೆಯಿಂದ ಹಿಡಿದು ಅಶೋಕನ ಕಾಲಕ್ಕಿಂತಲೂ ಪೂರ್ವದಿಂದ ಇಲ್ಲಿ ಗಣಿಗಾರಿಕೆ ನಡೆಯುತ್ತಿದ್ದು, ಸ್ವಾತಂತ್ರ್ಯ ಬಳಿಕ ನಿಜಾಮರ ಆಡಳಿತದಲ್ಲಿ ಸ್ಥಾಪನೆಯಾದ ಚಿನ್ನದಗಣಿಯು ನಂತರ ಹೈದರಾಬಾದ್‌ ಕರ್ನಾಟಕ ವಿಮೋಚನೆಯಿಂದ ಕರ್ನಾಟಕಕ್ಕೆ ಸೇರಿದೆ. ಇಲ್ಲಿ ಇದುವರೆಗೂ ಲಕ್ಷಾಂತರ ಟನ್‌ ಚಿನ್ನ ಉತ್ಪಾದನೆ ಮಾಡಲಾಗಿದ್ದು, ಲಕ್ಷಾಂತರ ಕಾರ್ಮಿಕರಿಗೆ ಕೆಲಸ ದೊರೆತಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಳಿಪಟ ದಾರ ಕುತ್ತಿಗೆ ಸೀಳಿ ಮಗಳನ್ನು ಹಾಸ್ಟೆಲ್‌ನಿಂದ ಕರೆತರಲು ಹೊರಟಿದ್ದ ಅಪ್ಪ ದಾರುಣ ಸಾವು
ಪೌರಾಯುಕ್ತೆಗೆ ಬೆಂಕಿ: ಕಾಂಗ್ರೆಸ್ಸಿಗನಿಂದ ಧಮ್ಕಿ