2 ತಿಂಗಳ ಗೃಹಲಕ್ಷ್ಮೀ ಹಣ ಬರದಿದ್ರೆ ಸಿಎಂ ಉತ್ತರ: ಲಕ್ಷ್ಮೀ

KannadaprabhaNewsNetwork |  
Published : Dec 19, 2025, 02:15 AM IST
ಲಕ್ಷ್ಮೀ ಹೆಬ್ಬಾಳ್ಕರ್‌ | Kannada Prabha

ಸಾರಾಂಶ

ಆರ್ಥಿಕ ಇಲಾಖೆ ಬಿಡುಗಡೆ ಮಾಡಿದಷ್ಟು ಹಣವನ್ನು ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಗೆ ಪಾವತಿಸಲಾಗಿದೆ. ಆದರೂ, ವಿರೋಧ ಪಕ್ಷಗಳು ಚೈಲ್ಡಿಶ್‌ (ಮಕ್ಕಳ ರೀತಿ) ಆಗಿ ಪ್ರಶ್ನೆ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹರಿಹಾಯ್ದಿದ್ದಾರೆ.

ಕನ್ನಡಪ್ರಭ ವಾರ್ತೆ ಸುವರ್ಣ ವಿಧಾನಸೌಧ

ಆರ್ಥಿಕ ಇಲಾಖೆ ಬಿಡುಗಡೆ ಮಾಡಿದಷ್ಟು ಹಣವನ್ನು ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಗೆ ಪಾವತಿಸಲಾಗಿದೆ. ಆದರೂ, ವಿರೋಧ ಪಕ್ಷಗಳು ಚೈಲ್ಡಿಶ್‌ (ಮಕ್ಕಳ ರೀತಿ) ಆಗಿ ಪ್ರಶ್ನೆ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹರಿಹಾಯ್ದಿದ್ದಾರೆ. ಜತೆಗೆ, ಫೆಬ್ರವರಿ, ಮಾರ್ಚ್‌ ತಿಂಗಳ ಕಂತು ಫಲಾನುಭವಿಗಳಿಗೆ ಪಾವತಿಯಾಗಿಲ್ಲವೆಂದರೆ ಮುಖ್ಯಮಂತ್ರಿ ಉತ್ತರ ಕೊಡುತ್ತಾರೆ ಎಂದೂ ತಿಳಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಮಹಿಳೆಯರಿಗೆ ನೀಡಿದ ವಾಗ್ದಾನವನ್ನು ಸರ್ಕಾರ ಪಾಲಿಸುತ್ತಿದೆ. ಈವರೆಗೆ 23 ಕಂತುಗಳಲ್ಲಿ ಒಟ್ಟು 46 ಸಾವಿರ ರು. ಪ್ರತಿ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಪಾವತಿಸಲಾಗಿದೆ. ಆಗಸ್ಟ್‌ವರೆಗೆ ಗೃಹಲಕ್ಷ್ಮೀ ಯೋಜನೆ ಹಣ ಪಾವತಿಸಲಾಗಿದೆ ಎಂಬ ನನ್ನ ಹೇಳಿಕೆಗೆ ಈಗಲೂ ಬದ್ಧಳಾಗಿದ್ದೇನೆ. ಇನ್ನು, ಪ್ರತಿ ತಿಂಗಳು ಆರ್ಥಿಕ ಇಲಾಖೆಗೆ ಗೃಹ ಲಕ್ಷ್ಮೀ ಹಣ ಬಿಡುಗಡೆಗೆ ಪ್ರಸ್ತಾವನೆ ಕಳುಹಿಸುತ್ತೇವೆ. ಆರ್ಥಿಕ ಇಲಾಖೆ ಅದನ್ನು ಪರಿಶೀಲಿಸಿ ಅನುದಾನ ಬಿಡುಗಡೆ ಮಾಡುತ್ತದೆ. ಹಾಗೇನಾದರೂ, ಫೆಬ್ರವರಿ ಮತ್ತು ಮಾರ್ಚ್‌ನ ಗೃಹಲಕ್ಷ್ಮೀ ಹಣ ಫಲಾನುಭವಿಗಳಿಗೆ ಪಾವತಿಸಿಲ್ಲ ಎಂದಾದರೆ, ಮುಖ್ಯಮಂತ್ರಿ ಅವರು ಅದಕ್ಕೆ ಉತ್ತರ ನೀಡುತ್ತಾರೆ ಎಂದರು.

ಇನ್ನು ಆರ್ಥಿಕ ಇಲಾಖೆಯಿಂದ 5 ಸಾವಿರ ಕೋಟಿ ರು. ಬಿಡುಗಡೆಯಾಗಿದ್ದರೂ ಫಲಾನುಭವಿಗಳ ಖಾತೆಗೆ ಬಿಡುಗಡೆಯಾಗಿಲ್ಲ ಎಂದು ವಿರೋಧ ಪಕ್ಷಗಳು ಹೇಳುತ್ತವೆ. ಹೀಗೆ ಚೈಲ್ಡಿಶ್‌ ಆಗಿ ಪ್ರಶ್ನೆ ಮಾಡುವುದನ್ನು ಬಿಜೆಪಿ ನಾಯಕರು ಬಿಡಬೇಕು. ಆರ್ಥಿಕ ಇಲಾಖೆಯಿಂದ ಅನುದಾನ ಬಂದ ಕೂಡಲೇ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗುತ್ತಿದೆ. ಬಹಳ ಒಳ್ಳೆಯ ಯೋಜನೆಯನ್ನು ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದೆ. ಅದನ್ನು ಹಾಳು ಮಾಡುವ ಕೆಲಸ ಮಾಡಬಾರದು ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು