ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಮುಗುಳೊಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು, ಕ್ಷೇತ್ರದ ಅಭಿವೃದ್ಧಿಗೆ ಎಚ್.ವೈ.ಮೇಟಿಯವರ ಕೊಡುಗೆಗಳ ಮಾಹಿತಿಯನ್ನು ಒಳಗೊಂಡ "ಪ್ರಗತಿಯ ಪಕ್ಷಿನೋಟ " ಎಂಬ ಕೈಪಿಡಿಯನ್ನು ಬಿಡುಗಡೆಗೊಳಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರ ಪ್ರಚಾರ ನಡೆಸಿದರು. ಸಚಿವರಾದ ಆರ್.ಬಿ.ತಿಮ್ಮಾಪುರ,ವಿಧಾನ ಪರಿಷತ್ ಮಾಜಿ ಸಭಾಪತಿ ಎಸ್.ಆರ್.ಪಾಟೀಲ್, ಶಾಸಕರಾದ ಯಶವಂತರಾಯಗೌಡ ಪಾಟೀಲ್, ಹಂಪನಗೌಡ ಬಾದರ್ಲಿ, ವಿಜಯಾನಂದ ಕಾಶಪ್ಪನವರ್, ಮಾಜಿ ಸಚಿವ ಅಜಯಕುಮಾರ್ ಸರನಾಯಕ ಭಾಗವಹಿಸಿದ್ದರು.