ಶಿಥಿಲ ಶಾಲಾ ಕಟ್ಟಡದ ಮಾಹಿತಿ ನೀಡಲು ಸಿಎಂ ಕಚೇರಿ ಸೂಚನೆ

KannadaprabhaNewsNetwork |  
Published : Sep 15, 2024, 01:49 AM IST
ಚಿತ್ರ 14ಬಿಡಿಆರ್ 57 | Kannada Prabha

ಸಾರಾಂಶ

ಜೂನ್ 9 ರಂದು ಪ್ರಕಟಗೊಂಡ ಕನ್ನಡಪ್ರಭ ಪತ್ರಿಕೆ ಸುದ್ದಿಯ ತುಣುಕು

ಕನ್ನಡಪ್ರಭ ವಾರ್ತೆ ಔರಾದ್

ತಾಲೂಕಿನ ಜಿರ್ಗಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಸಂಪೂರ್ಣವಾಗಿ ಶಿಥಿಲಗೊಂಡಿದ್ದು, ಕಟ್ಟಡದ ಛಾವಣಿಯ ಸಿಮೆಂಟ್ ಚಕ್ಕಳೆ ಕಳಚಿ ಬೀಳುತ್ತಿದೆ. ಶಿಕ್ಷಕರು ಆತಂಕದಲ್ಲಿಯೇ ತರಗತಿ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕನ್ನಡಪ್ರಭ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿತ್ತು.

ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣ ಸ್ಪಂದಿಸಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.

‘ಕನ್ನಡಪ್ರಭ’ ಜೂನ್ 9 ರಂದು ಭಯದ ನೆರಳಲ್ಲಿಯೇ ಮಕ್ಕಳಿಗೆ ನಿತ್ಯ ಪಾಠ ಎಂಬ ಶಿರ್ಷಿಕೆಯಲ್ಲಿ ಪ್ರಕಟಗೊಂಡ ವರದಿಗೆ ಸ್ಪಂದಿಸಿ ಜಿರ್ಗಾ (ಬಿ) ಶಾಲೆ ಕಟ್ಟಡದ ಸ್ಥಿತಿಗತಿ ಮಾಹಿತಿ ಕೇಳಿದಾರೆ.

ಅದರಂತೆ ಪರಿಶೀಲನೆ ನಡೆಸಿದ್ದು, ಸದರಿ ಶಾಲೆಯಲ್ಲಿ 4 ಕೊಠಡಿಗಳಿದ್ದು, 37 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಶಾಲೆಯ 3 ಕೊಠಡಿಗಳು ಶಿಥಿಲಗೊಂಡಿವೆ. ಮಕ್ಕಳ ಹಿತದೃಷ್ಟಿಯಿಂದ ಮುಖ್ಯೋಪಾಧ್ಯಾಯರ ಕೋಣೆಯಲ್ಲಿ ಮಕ್ಕಳನ್ನು ಕೂಡಿಸಿ ಪಾಠ ಬೋಧನೆ ಮಾಡಲು ವ್ಯವಸ್ಥೆ ಮಾಡಲಾಗಿದೆ.

ಸದರಿ ಶಾಲೆಗೆ ಕೆಕೆಆರ್‌ಡಿಬಿ ಯೋಜನೆಯಡಿ ₹12 ಲಕ್ಷ ಮಂಜೂರಾಗಿದ್ದು, ಕಾಮಗಾರಿ ಪ್ರಾರಂಭವಾಗಬೇಕಿದೆ ಎಂದು ಔರಾದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಲಿಖಿತ ರೂಪದಲ್ಲಿ ಸ್ಪಷ್ಟನೆ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗದ್ದಲದ ನಡುವೆ, ಚರ್ಚೆಯೇ ಇಲ್ಲದೆ ದ್ವೇಷ ಭಾಷಣ ತಡೆ ಮಸೂದೆ ಪಾಸ್‌
ನಗರದ 75 ಜಂಕ್ಷನ್‌ ಅಭಿವೃದ್ಧಿಗೆ ಗ್ರಹಣ!