ನನಗೆ ರಾಜಕೀಯವಾಗಿ ಪುನರ್ ಜನ್ಮ ನೀಡಿದ್ದು ಸಿಎಂ ಸಿದ್ದರಾಮಯ್ಯ: ಶಾಸಕ ಎ. ಆರ್. ಕೃಷ್ಣಮೂರ್ತಿ

KannadaprabhaNewsNetwork |  
Published : Nov 04, 2025, 12:15 AM IST
ರಾಜಕೀಯದಲ್ಲಿ ಪುನರ್ ಜನ್ಮ ನೀಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ- ಎ ಆರ್ ಕೖಷ್ಣಮೂತಿ೯  | Kannada Prabha

ಸಾರಾಂಶ

ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ರು. ಅನುದಾನ ನೀಡಿದ್ದರು. ಈ ಅನುದಾನವನ್ನು ಎಲ್ಲಾ ಧರ್ಮ, ವರ್ಗದವರ ಸಮುದಾಯಗಳ ಅಭಿವೃದ್ಧಿಗೆ ನೀಡಿದ್ದೇನೆ, ಕ್ಷೇತ್ರದ ಅಭಿವೃದ್ಧಿಗಾಗಿ ಈ ಬಾರಿ 50 ಕೋಟಿ ರು. ಅನುದಾನ ಮಂಜೂರು ಮಾಡಿದ್ದು, ಈ ಅನುದಾನವನ್ನು ನಗರಸಭಾ ವ್ಯಾಪ್ತಿ ಹಾಗೂ ಗ್ರಾಮೀಣ ಪ್ರದೇಶಗಳ ರಸ್ತೆಗಳ ಅಭಿವೃದ್ಧಿಗೆ ವಿನಿಯೋಗಿಸುತ್ತೇನೆ. ಕಾಂಗ್ರೆಸ್ ಸರ್ಕಾರ ಬಡವರ , ಹಿಂದುಳಿದವರ ಪರವಿದೆ

ಕನ್ನಡಪ್ರಭ ವಾರ್ತೆ ಕೊಳ್ಳೇಗಾಲ

ನನಗೆ ರಾಜಕೀಯದಲ್ಲಿ ಪುನರ್ ಜನ್ಮ ನೀಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು. ಕಾಂಗ್ರೆಸ್ ಸರ್ಕಾರದ ನೇತೃತ್ವ ವಹಿಸಿದ್ದ ಅವರು ಭಾಗ್ಯಗಳ ಭಾಗ್ಯ ನೀಡಿದ ಸರದಾರರಾಗಿ ಬಡವರಪರ ಕಾಳಜಿಯುಳ್ಳ ಜನಪರ ಮುಖ್ಯಮಂತ್ರಿಗಳಾಗಿದ್ದಾರೆ ಎಂದು ಶಾಸಕ ಎ .ಆರ್. ಕೃಷ್ಣಮೂರ್ತಿ ತಿಳಿಸಿದರು.

ಪಟ್ಟಣದ ಬಸ್ತೀಪುರ ಗ್ರಾಮದ ಸಿದ್ದಪ್ಪಾಜಿ ದೇವಸ್ಥಾನದ ಆವರಣದಲ್ಲಿ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಆಯೋಜಿಸಿದ್ದ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಮತ್ತು ಫಲಾನುಭವಿಗಳ ಸಂವಾದ ಕುರಿತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿಂದೆ ಹಲವಾರು ಬಾರಿ ವಿಧಾನಸಭಾ ಚುನಾವಣೆಯಲ್ಲಿ ನಾನು ಪರಾಭವಗೊಂಡು ವನವಾಸದಲ್ಲಿದ್ದಾಗ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನ್ನನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸಿ, 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುವ ಮೂಲಕ ನನ್ನ ಗೆಲುವಿಗೆ ಕಾರಣೀಭೂತರಾಗಿ ಜನರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ನಾನು ಅನೇಕ ಚುನಾವಣೆಗಳನ್ನು ಎದುರಿಸಿದ್ದೇನೆ, 1994 ಮತ್ತು 1999ರಲ್ಲಿ ಜನತಾದಳದಿಂದ ಸ್ಪರ್ಧಿಸಿ ಶಾಸಕನಾಗಿದ್ದೆ. ಅಂದಿನ ಚುನಾವಣೆ ವೇಳೆ ವಾಟಾಳ್ ನಾಗರಾಜು, ಎಚ್. ಎಸ್. ಮಹದೇವಪ್ರಸಾದ್ , ಜಯಣ್ಣ ಮತ್ತು ಎಚ್. ನಾಗಪ್ಪ ಅವರೂ ಆಯ್ಕೆಯಾಗಿದ್ದರು. ಅಂದು ಮೈಸೂರಿನ 16 ವಿಧಾನಸಭಾ ಕ್ಷೇತ್ರಗಳ ಪೈಕಿ ರಾಜೀನಾಮೆ ಸ್ಥಾನ ಪಲ್ಲಟದಿಂದಾಗಿ ನಾನು ಮತ್ತು ಮಹದೇವಪ್ರಸಾದ್ ಅವರು ಮಾತ್ರ ಗೆದ್ದೆವು , ಆದರೆ ನಂತರದ ಚುನಾವಣೆಗಳಲ್ಲಿ ಸೋಲುತ್ತಲೇ ಬಂದ ನನಗೆ ರಾಜಕೀಯವಾಗಿ ಸಿದ್ದರಾಮಯ್ಯ ಕೈಹಿಡಿದರು ಎಂದರು.

ರಾಜ್ಯದ ಜನರಿಗೆ ಪಂಚ ಗ್ಯಾರಂಟಿ ನೀಡುವ ಮೂಲಕ ಮುಖ್ಯಮಂತ್ರಿಗಳು ನುಡಿದಂತೆ ನಡೆದಿದ್ದಾರೆ, ಕಳೆದ ಬಾರಿ

ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ರು. ಅನುದಾನ ನೀಡಿದ್ದರು. ಈ ಅನುದಾನವನ್ನು ಎಲ್ಲಾ ಧರ್ಮ, ವರ್ಗದವರ ಸಮುದಾಯಗಳ ಅಭಿವೃದ್ಧಿಗೆ ನೀಡಿದ್ದೇನೆ, ಕ್ಷೇತ್ರದ ಅಭಿವೃದ್ಧಿಗಾಗಿ ಈ ಬಾರಿ 50 ಕೋಟಿ ರು. ಅನುದಾನ ಮಂಜೂರು ಮಾಡಿದ್ದು, ಈ ಅನುದಾನವನ್ನು ನಗರಸಭಾ ವ್ಯಾಪ್ತಿ ಹಾಗೂ ಗ್ರಾಮೀಣ ಪ್ರದೇಶಗಳ ರಸ್ತೆಗಳ ಅಭಿವೃದ್ಧಿಗೆ ವಿನಿಯೋಗಿಸುತ್ತೇನೆ. ಕಾಂಗ್ರೆಸ್ ಸರ್ಕಾರ ಬಡವರ , ಹಿಂದುಳಿದವರ ಪರವಿದೆ ಎಂದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಚಂದ್ರು, ತಾಲೂಕು ಅಧ್ಯಕ್ಷ ರಾಜೇಂದ್ರ, ನಗರಸಭಾ ಅಧ್ಯಕ್ಷೆ ರೇಖಾ ರಮೇಶ್, ತಾಲೂಕು ಪಂಚಾಯಿತಿ ಇಒ ಗುರುಶಾಂತಪ್ಪ, ಮಾಜಿ ಅಧ್ಯಕ್ಷ ಶಾಂತರಾಜು, ಬಸ್ತಿಪುರ ಪ್ರಕಾಶ್, ರವಿ ಇನ್ನಿತರರಿದ್ದರು.

----------

ಕೊಳ್ಳೇಗಾಲ ಉಪವಿಭಾಗ ಕೇಂದ್ರ ಆಗಿರುವುದರಿಂದ ನಗರಸಭೆ ಸುತ್ತಮುತ್ತ ಕಂದಾಯ ಇಲಾಖೆಯ 25 ಎಕರೆ ಜಾಗ ಕ್ರೋಡಿಕರಿಸಿ ಜವಳಿ ಪಾರ್ಕ್ ಪ್ರಾರಂಭಿಸುವ ಅಗತ್ಯವಿದೆ, ಈ ನಿಟ್ಟಿನಲ್ಲಿ ನಾನು ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸುವೆ. ನನಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಕ್ಕ ವೇಳೆ ನಮ್ಮ ಪಕ್ಷದ ಕೆಲವರೇ ನಾನು ಗೆಲ್ಲಲ್ಲ ಎಂದು ಕುಹಕದ ಮಾತುಗಳನ್ನಾಡಿದ್ದರು. ಆದರೆ ಮತದಾರರು ನನಗೆ 1 ಲಕ್ಷದ 8 ಸಾವಿರಕ್ಕೂ ಅಧಿಕ ಮತ ನೀಡಿ ಗೆಲ್ಲಿಸಿದ ಪರಿಣಾಮ ನಾನು ಜನ ಸೇವಕನಾಗಿ ಕೆಲಸ ಮಾಡುತ್ತಿರುವೆ.

- ಎ .ಆರ್. ಕೃಷ್ಣಮೂರ್ತಿ, ಶಾಸಕರು

PREV

Recommended Stories

ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ