ಮಾಗಡಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ

KannadaprabhaNewsNetwork |  
Published : Sep 14, 2024, 01:53 AM IST
13ಕೆಆರ್ ಎಂಎನ್ 2.ಜೆಪಿಜಿಮಾಗಡಿ ಪಟ್ಟಣದ ಹೊಸಪೇಟೆ ಸರ್ಕಲ್ ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, ನಿರ್ಮಾಣ ಕಾರ್ಯ ಪೂರ್ಣಗೊಂಡ ವಿವಿಧ ಕಟ್ಟಡಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು. | Kannada Prabha

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಪಟ್ಟಣದ ಹೊಸಪೇಟೆ ಸರ್ಕಲ್ ನಲ್ಲಿ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, ನಿರ್ಮಾಣ ಕಾರ್ಯ ಪೂರ್ಣಗೊಂಡ ವಿವಿಧ ಕಟ್ಟಡಗಳನ್ನು ಲೋಕಾರ್ಪಣೆ ಮಾಡಿದರು. ಮಾಗಡಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

- ಮಾಗಡಿ ಪಟ್ಟಣದಲ್ಲಿ ವಿವಿಧ ಜನೋಪಯೋಗಿ ಕಟ್ಟಡಗಳನ್ನ ಲೋಕಾರ್ಪಣೆ ಮಾಡಿದ ಸಿಎಂಕನ್ನಡಪ್ರಭ ವಾರ್ತೆ ಮಾಗಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಪಟ್ಟಣದ ಹೊಸಪೇಟೆ ಸರ್ಕಲ್ ನಲ್ಲಿ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, ನಿರ್ಮಾಣ ಕಾರ್ಯ ಪೂರ್ಣಗೊಂಡ ವಿವಿಧ ಕಟ್ಟಡಗಳನ್ನು ಲೋಕಾರ್ಪಣೆ ಮಾಡಿದರು.

8 ಕೋಟಿ ರುಪಾಯಿ ವೆಚ್ಚದ ಮಾಗಡಿ ಪುರಸಭೆ ಮಾರುಕಟ್ಟೆ(ಅಂಗಡಿ) ಮಳಿಗೆಗಳ ನಿರ್ಮಾಣ, ಲೋಕೋಪಯೋಗಿ ಇಲಾಖೆ ವತಿಯಿಂದ ಮಾಗಡಿ ಪಟ್ಟಣದ ವ್ಯಾಪ್ತಿಯಲ್ಲಿ ಎಸ್‌ಎಚ್‌ಡಿಪಿ(ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ)ಯ 20 ಕೋಟಿ ರುಪಾಯಿ ವೆಚ್ಚದ ಕಾಮಗಾರಿಗೆ, ಮಾಗಡಿಯ ಜೂನಿಯರ್ ಕಾಲೇಜು ಆವರಣದಲ್ಲಿ 7 ಕೋಟಿ ರುಪಾಯಿಗಳ ವೆಚ್ಚದಲ್ಲಿ ಆಡಿಟೋರಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಬೆಂಗಳೂರು ಹಾಲು ಒಕ್ಕೂಟದ ನೂತನ ಶಿಬಿರ ಕಚೇರಿ ಹಾಗೂ ಮಾಗಡಿ ಪಟ್ಟಣದಲ್ಲಿ ನಿರ್ಮಾಣಗೊಂಡಿರುವ ಐಟಿಐ ಕಾಲೇಜನ್ನು ಉದ್ಘಾಟಿಸಿದರು. ಮಾಗಡಿ ತಾಲೂಕಿನ ಹಾರೋಹಳ್ಳಿ ಗ್ರಾಮದ ಪಾಲಿಟೆಕ್ನಿಕ್ ಕಾಲೇಜಿಗೆ,

ಮಾಗಡಿ ಪಟ್ಟಣದಲ್ಲಿ ಅತ್ಯಾಧುನಿಕ ಗ್ರಂಥಾಲಯ ಕಟ್ಟಡ, ಮಾಗಡಿ ತಾಲೂಕು ಜೂನಿಯರ್ ಕಾಲೇಜಿನ ಕ್ರೀಡಾಂಗಣದ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಇದೇ ಸಂದರ್ಭದಲ್ಲಿ ವೈ.ಜಿ.ಗುಡ್ಡ ಮುಳುಗಡೆ ಪ್ರದೇಶದ ನಿರಾಶ್ರಿತರಿಗೆ ಹಕ್ಕು ಪತ್ರಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಸತಿ ಸಚಿವ ಜಮೀರ್ ಅಹಮದ್, ಶಾಸಕರಾದ ಎಚ್.ಸಿ.ಬಾಲಕೃಷ್ಣ, ಇಕ್ಬಾಲ್ ಹುಸೇನ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ವಿಧಾನ ಪರಿಷತ್ ಸದಸ್ಯರಾದ ರಾಮೋಜಿಗೌಡ, ಸುಧಾಮ್ ದಾಸ್ ಮತ್ತಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವರ್ತಮಾನದೆಡೆಗೆ ಸಂಶೋಧನಾಸಕ್ತಿ ಕೇಂದ್ರಿತವಾಗಲಿ: ಡಾ. ಗಿರೀಶ ಕುಮಾರ
ಆಹಾರ ಸುರಕ್ಷತೆ: 9 ಪ್ರಕರಣಗಳಲ್ಲಿ ₹1.30 ಲಕ್ಷ ದಂಡ