ಕನ್ನಡಪ್ರಭ ವಾರ್ತೆ ಚಾಮರಾಜನಗರ
ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಶಿಕ್ಷಣ ಸಚಿವರು ಆಗಮಿಸುವ ಮೂಲಕ ಕೆಟ್ಟ ಸಂಪ್ರದಾಯ ಬರೆದಿದ್ದಾರೆ. ಅನುಭವಿ ರಾಜಕಾರಣಿಯಾಗಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿ ನೋಟಿಸ್ ನೀಡಬೇಕು ಇಲ್ಲದಿದ್ದರೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ವಿಧಾನ ಪರಿಷತ್ತಿಗೆ ಮೇಲ್ಜಾತಿ ಅವರನ್ನೇ ಕಳುಹಿಸಲಾಗುತ್ತಿದ್ದು, ಹಿಂದುಳಿದ ವರ್ಗದವರನ್ನು ಎಲ್ಲಾ ರಾಜಕೀಯ ಪಕ್ಷಗಳು ಕಡೆಗಣಿಸಿವೆ. ಆದ್ದರಿಂದ ಈ ಬಾರಿ ನಾನು ಪಕ್ಷೇತರವಾಗಿ ಸ್ಪರ್ಧಿಸಿದ್ದೇನೆ ಎಂದರು. ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಸೇವೆಯನ್ನು ಕಾಯಂಗೊಳಿಸುವುದು, 7ನೇ ವೇತನ ಆಯೋಗ ಜಾರಿಗೆ ಹೋರಾಟ ನಡೆಸುವುದು, ಹಳೆಯ ಪಿಂಚಣಿ ಪದ್ದತಿ ಜಾರಿಗೆ ಬರುವಂತೆ ಮಾಡುತ್ತೇನೆ. ಅಲ್ಲದೆ ಖಾಸಗಿ ಅನುದಾನಿತ ಶಿಕ್ಷಕರಿಗೆ ಸರ್ಕಾರಿ ಶಿಕ್ಷಕರು ಗಳಿಸಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸುವುದು, ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ಕಡಿಮೆ ಮಾಡಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ವರದರಾಜು, ಕೆಂಪಶೆಟ್ಟಿ, ಶಿವರಾಜಪ್ಪ, ಶಿವಪ್ಪ ಶೆಟ್ಟರು, ಕುಮಾರ್ ಇದ್ದರು.