ಚನ್ನಗಿರಿ: ರೈತರ ಭೂಮಿಗೆ ಸಂಬಂಧಪಟ್ಟಂತೆ ಪಹಣಿಯಲ್ಲಿ ವಕ್ಫ್ ಭೂಮಿ ಎಂದು ನಮೂದಿಸಿ, ಸಮಸ್ಯೆ ಉಂಟುಮಾಡುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ನೇತೃತ್ವದ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮದ್ ಹುನ್ನಾರಗಳೇ ಕಾರಣವಾಗಿವೆ. ಈ ಅಕ್ರಮ ವಿರುದ್ಧ ನ.4ರಿಂದ ನಿರಂತರ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಸಹಕಾರ ವಿಭಾಗದ ರಾಜ್ಯ ಪ್ರಕೋಷ್ಠಕ ಅಧ್ಯಕ್ಷ, ತಾಲೂಕು ಬಿಜೆಪಿ ಮುಖಂಡ ಎಚ್.ಎಸ್. ಶಿವಕುಮಾರ್ ಹೇಳಿದರು.
ವಿಜಯಪುರ, ಬೀದರ್, ದೆಹಲಿ, ಕಲಬುರಗಿ ಜಿಲ್ಲೆಗಳಲ್ಲಿ ಲಕ್ಷಾಂತರ ಹೆಕ್ಟರ್ ಜಾಗವನ್ನು ವಕ್ಫ್ ಆಸ್ತಿ ಎನ್ನುತ್ತಾರೆ. ಇದು ಕೇವಲ ಬಿಜೆಪಿ ಹೋರಾಟವಲ್ಲ, ಸಂತ್ರಸ್ತ ರೈತರು, ಎಲ್ಲ ವರ್ಗಗಳ ಜನರ ಹೋರಾಟ ಇದಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಗಿರೀಶ್ ನಾಯ್ಕ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಕೆ.ಎಂ,ಪ್ರಕಾಶ್ ಉಪಸ್ಥಿತರಿದ್ದರು.- - - -3ಕೆಸಿಎನ್ಜಿ2: