22ರ ಬಳಿಕ ಅಯೋಧ್ಯೆಗೆ ನಾನೂ ಹೋಗ್ತೀನಿ: ಸಿಎಂ

KannadaprabhaNewsNetwork |  
Published : Jan 13, 2024, 01:31 AM IST
ಮುಖ್ಯಮಂತ್ರಿ ಸಿದ್ಧರಾಮಯ್ಯ | Kannada Prabha

ಸಾರಾಂಶ

ಶ್ರೀರಾಮಚಂದ್ರನ ವಿಚಾರದಲ್ಲಿ ನನ್ನ ಯಾವುದೇ ವಿರೋಧ ಇಲ್ಲ. ನಾವೂ ಶ್ರೀರಾಮನ ಭಕ್ತರು. ಜ.22ರ ನಂತರ ನಾನೂ ಅಯೋಧ್ಯೆಗೆ ಹೋಗುತ್ತೇನೆ, ರಾಮಮಂದಿರಕ್ಕೆ ಭೇಟಿ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗಶ್ರೀರಾಮಚಂದ್ರನ ವಿಚಾರದಲ್ಲಿ ನನ್ನ ಯಾವುದೇ ವಿರೋಧ ಇಲ್ಲ. ನಾವೂ ಶ್ರೀರಾಮನ ಭಕ್ತರು. ಜ.22ರ ನಂತರ ನಾನೂ ಅಯೋಧ್ಯೆಗೆ ಹೋಗುತ್ತೇನೆ, ರಾಮಮಂದಿರಕ್ಕೆ ಭೇಟಿ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಿಂದ ದೂರವುಳಿಯುವುದಾಗಿ ಕಾಂಗ್ರೆಸ್‌ ಪಕ್ಷ ನಿರ್ಧಾರ ಕೈಗೊಂಡ ಬೆನ್ನಲ್ಲೇ ಬಿಜೆಪಿಯಿಂದ ಕೇಳಿಬರುತ್ತಿರುವ ಟೀಕೆಗಳ ಕುರಿತಾಗಿ ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಯೋಧ್ಯೆ ಮತ್ತು ಶ್ರೀರಾಮಚಂದ್ರನ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದಾರೆ. ಈ ರಾಜಕೀಯವನ್ನಷ್ಟೇ ನಾವು ವಿರೋಧಿಸುತ್ತೇವೆ. ನಾನು ಅಯೋಧ್ಯೆಗೆ ಹೋಗುತ್ತೇನೆ, ನಮ್ಮ ಕಾರ್ಯಕರ್ತರೂ ಹೋಗುತ್ತಾರೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಂಗಾಳಕ್ಕೆ ದೀದಿ, ತಮಿಳ್ನಾಡಿಗೆ ಅಣ್ಣಾ, ಅಸ್ಸಾಂಗೆ ಮಾಮಾ, ಕೇರಳಕ್ಕೆ ದಾದಾ!
ಬಾಗಲಕೋಟೆ: ಮತ್ತೆ ಚರಂತಿಮಠ, ಮೇಟಿ ಕುಟುಂಬ ಮಧ್ಯೆ ಫೈಟ್‌