ಕನ್ನಡಪ್ರಭ ವಾರ್ತೆ ಬೀದರ್
ಅವರು ಈ ಕುರಿತಂತೆ ಇಲ್ಲಿನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಾಂಗ್ರೆಸ್ನ 2ನೇ ಅವಧಿಯ ಆಡಳಿತದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವರ್ತನೆ ಸಂವಿಧಾನಕ್ಕೆ ಕಿಮ್ಮತ್ತು ನೀಡದಂತಿದೆ. ಜಾತಿಗಣತಿಗೆ ಸಂವಿಧಾನದಲ್ಲಿ ರಾಜ್ಯ ಸರ್ಕಾರಕ್ಕೆ ಅಧಿಕಾರ ಇರದಿದ್ದರೂ ಅದನ್ನು ಕಡೆಗಣಿಸಿ ಗಣತಿಗೆ ಕೈ ಹಾಕಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದೇಶಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿರುವಂಥ ಸಂವಿಧಾನದಲ್ಲಿ ನಂಬಿಕೆಯಿದ್ದಲ್ಲಿ, ಅದರ ಪ್ರತಿಯ ಪುಸ್ತಕವನ್ನು ಎಲ್ಲೆಂದರಲ್ಲಿ ಕೈಯಲ್ಲಿ ಹಿಡಿದು ಮಾತನಾಡುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಸ್ಪಷ್ಟನೆ ನೀಡಲಿ. ಅಷ್ಟಕ್ಕೂ ಅರ್ಬನ್ ನಕ್ಸಲ್ರು ರಾಹುಲ್ ಮೆಧೂಳನ್ನೂ ಕದ್ದೊಯ್ದಿದ್ದಾರೆ ಎಂದು ವ್ಯಂಗ್ಯವಾಡಿದರು.ಇದೀಗ ಸಿದ್ದರಾಮಯ್ಯ ಅವರ ಸಿಎಂ ಖುರ್ಚಿ ಅಲುಗಾಡುತ್ತಿದೆ. ಎರಡು ವರ್ಷಗಳ ಹಿಂದೆ ನೆನಪಾಗದ ಗಣತಿಯ ವಿಚಾರವನ್ನು ಎತ್ತುವ ಮೂಲಕ ರಾಜ್ಯದಲ್ಲಿ ಮತಾಂತರಕ್ಕೆ ಪ್ರೋತ್ಸಾಹ ಕೊಡುವ ರೀತಿ ಯಲ್ಲಿ ರಾಜ್ಯದ ಕಾಂಗ್ರೆಸ್ ವರ್ತಿಸುತ್ತಿರುವುದನ್ನು ಸ್ಪಷ್ಟಪಡಿಸಿದಂತಾಗಿದೆ ಎಂದು ಅವರು ಆರೋಪಿಸಿದರು.
ಹಿಂದುಗಳಾಗಿ ಬಾಳದಿದ್ದಲ್ಲಿ ಸರ್ವನಾಶ ಎಂದಿದ್ದ ಸಿದ್ದಗಂಗಾ ಶ್ರೀಗಳು :
ಲಿಂಗಾಯತ ಪ್ರತ್ಯೇಕ ಧರ್ಮ ಘೋಷಣೆ ಆಗೋವರೆಗೆ ನಾವೆಲ್ಲ ಹಿಂದು:ಪಕ್ಷದ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ಅವರು ಮಾತನಾಡಿ, ರಾಜ್ಯ ಸರ್ಕಾರ ಹಿಂದುಗಳಲ್ಲಿ ಒಳ ಜಗಳ ಹಚ್ಚುವ ಕುತಂತ್ರಕ್ಕೆ ಕೈ ಹಾಕಿದೆ. ಲಿಂಗಾಯತರನ್ನು ಒಡೆದಾಳುವ ಪ್ರಯತ್ನ ಮಾಡುತ್ತಿದೆ. ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಅಧಿಕೃತ ಘೋಷಣೆ ಆದಾಗ ನಾವೆಲ್ಲ ಲಿಂಗಾಯತ ಎಂದು ಬರೆಯಿಸೋಣ ಅಲ್ಲಿಯವರೆಗೆ ಹಿಂದುಗಳೆಂದೇ ಧರ್ಮದ ಕಾಲಂನಲ್ಲಿ ಬರೆಸೋಣ ಎಂದು ಕರೆ ನೀಡಿದರು.
ಸಿದ್ದರಾಮಯ್ಯದು ಡರ್ಟಿ ಪಾಲಿಟಿಕ್ಸ್,
ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಮಾತನಾಡಿ, ಸಿಎಂ ಸಿದ್ದರಾಮಯ್ಯ ಕೊಳಕು ರಾಜಕೀಯ ಮಾಡುತ್ತಿದ್ದಾರೆ. ಹಿಂದು ಧರ್ಮದವರನ್ನು ಒಡೆಯುವ ಕುತಂತ್ರ ಮಾಡುತ್ತಿದ್ದಾರೆ. ಅವೈಜ್ಞಾನಿಕವಾದಂಥ ಗಣತಿಗೆ ಸೂಚನೆ ನೀಡಿದ್ದು, ಲಿಂಗಾಯತ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್ ಹೀಗೆಯೇ ಸುಮಾರು 46 ಕಡೆ ಕ್ರಿಶ್ಚಿಯನ್ ಸೇರಿಸಿ ಮತಾಂತರದ ಅನುಮಾನ ಮೂಡಿಸಿ ಸಮಾಜದ ಭಾವನೆ ಕೆರಳಿಸುತ್ತಿದ್ದಾರೆ ಎಂದು ಆರೋಪಿಸಿ ಗಣತಿಯನ್ನು ಮುಂದೂಡಬೇಕು ಎಂದು ಆಗ್ರಹಿಸಿದರು.
ಸರ್ಕಾರದಿಂದ ಅಧಿಕಾರಿಗಳಿಗೆ
ಶಾಸಕ ಪ್ರಭು ಚವ್ಹಾಣ್ ಮಾತನಾಡಿ, ಬಂಜಾರಾ ಸಮಾಜದವರು ಧರ್ಮದ ಕಾಲಂನಲ್ಲಿ ಹಿಂದೂ ಎಂದು ಜಾತಿಯ ಕಾಲಂನಲ್ಲಿ ಬಂಜಾರ ಎಂದು ಬರೆಸುವಂತೆ ಕರೆ ನೀಡಿ, ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿ ಅಧಿಕಾರಿಗಳಿಗೆ ಸಂಬಳ ನೀಡಲಾಗದಷ್ಟು ದಯನೀಯ ಸ್ಥಿತಿಗೆ ರಾಜ್ಯ ಸರ್ಕಾರ ಬಂದಿದೆ ಎಂದರು. ಇದೇ ವೇಳೆ ಪಕ್ಷದ ಮುಖಂಡ ಈಶ್ವರಸಿಂಗ್ ಠಾಕೂರ್ ಅವರೂ ಮಾತನಾಡಿ ಕಾಂಗ್ರೆಸ್ ಸರ್ಕಾರದ ನಿರ್ಧಾರಗಳ ಕುರಿತು ಕಿಡಿ ಕಾರಿದರು.