ರೈತರ ಬೆಳೆ ಪರಿಹಾರ ನೀಡುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಆಗ್ರಹ

KannadaprabhaNewsNetwork |  
Published : Sep 21, 2025, 02:01 AM IST
ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ರೈತರ ಬೆಳೆ ವಿಮೆ ಹಣವನ್ನು ಬ್ಯಾಂಕಿನ ಶಾಖೆಗಳು ಬೆಳೆ ಸಾಲಕ್ಕೆ ಜಮಾ ಮಾಡಿಕೊಳ್ಳುವುದಕ್ಕೆ ಕಡಿವಾಣ ಹಾಕಬೇಕು. ರೈತರ ಸಾಲ ಮಂಜೂರಾತಿಯನ್ನು ಕಾಗದಪತ್ರಗಳಲ್ಲಿ ಸರಳೀಕರಣ ಮಾಡಬೇಕು. ರೈತರ ಬೆಳೆ ಪರಿಹಾರ ನೀಡುವಂತೆ ಒತ್ತಾಯಿಸಿ ಕಿಸಾನ್ ಜಾಗೃತಿ ವಿಕಾಸ ಸಂಘದ ವತಿಯಿಂದ ಶನಿವಾರ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

ಗದಗ: ರೈತರ ಬೆಳೆ ವಿಮೆ ಹಣವನ್ನು ಬ್ಯಾಂಕಿನ ಶಾಖೆಗಳು ಬೆಳೆ ಸಾಲಕ್ಕೆ ಜಮಾ ಮಾಡಿಕೊಳ್ಳುವುದಕ್ಕೆ ಕಡಿವಾಣ ಹಾಕಬೇಕು. ರೈತರ ಸಾಲ ಮಂಜೂರಾತಿಯನ್ನು ಕಾಗದಪತ್ರಗಳಲ್ಲಿ ಸರಳೀಕರಣ ಮಾಡಬೇಕು. ರೈತರ ಬೆಳೆ ಪರಿಹಾರ ನೀಡುವಂತೆ ಒತ್ತಾಯಿಸಿ ಕಿಸಾನ್ ಜಾಗೃತಿ ವಿಕಾಸ ಸಂಘದ ವತಿಯಿಂದ ಶನಿವಾರ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಸಂಘದ ಅಧ್ಯಕ್ಷ ಧ್ರುವಕುಮಾರ ಹೂಗಾರ ಮಾತನಾಡಿ, ರೈತರ ಬೆಳೆವಿಮೆ ಹಣವನ್ನು ವಿವಿಧ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಬೆಳೆ ಸಾಲಕ್ಕೆ ಬೆಳೆ ವಿಮೆಯನ್ನು ಜಮಾ ಮಾಡಿಕೊಳ್ಳುತ್ತಿರುವುದು ಖಂಡನಾರ್ಹವಾಗಿದೆ. ಇದಕ್ಕೆ ಕಡಿವಾಣ ಹಾಕಬೇಕು ಹಾಗೂ ರೈತರಿಗೆ ಕೃಷಿ ಸಾಲವನ್ನು ಸರಳೀಕರಣಗೊಳಿಸಿ ಮಾಡಗೇಜ್ ಪದ್ಧತಿ ಮತ್ತು ಕಾನೂನು ಸಲಹೆ ಪದ್ಧತಿಯಿಂದ ರೈತನಿಗೆ ಬಹಳ ಹೊರೆಯಾಗಿದೆ ಮತ್ತು ಇ.ಸಿ- ಡ ಉತಾರಗಳನ್ನು ಬ್ಯಾಂಕ್‌ ಶಾಖೆಗಳೇ ತಾಲೂಕು ಕಂದಾಯ ಇಲಾಖೆಗಳಿಂದ ಪಡೆದುಕೊಂಡು ರೈತನ ಕೃಷಿ ಉತಾರದ ಮೇಲೆ ಸಾಲ ಮಂಜೂರಾತಿ ಮಾಡುವ ಸರಳ ಪದ್ಧತಿಯನ್ನು ರಾಜ್ಯ ಸರ್ಕಾರ ಅಳವಡಿಸಬೇಕೆಂದು ಆಗ್ರಹಿಸಿದರು.

ಬಸವರಾಜ ಯಲ್ಲಪ್ಪ ನವಲಗುಂದ ಮಾತನಾಡಿ, ರಾಜ್ಯಾದ್ಯಂತ 2025-26ನೇ ಸಾಲಿನಲ್ಲಿ ಅತಿಯಾದ ಮಳೆಯಿಂದ ಗೋವಿನಜೋಳ, ಹೆಸರು, ಸೂರ್ಯಕಾಂತಿ, ಶೇಂಗಾ, ಉಳ್ಳಾಗಡ್ಡಿ ಸೇರಿದಂತೆ ವಿವಿಧ ಬೆಳೆಗಳು ಕೊಳೆತು ಹಾಳಾಗಿ ಹೋಗಿವೆ. ಆದರೂ ಕೂಡ ರಾಜ್ಯ ಸರ್ಕಾರ ಇಲ್ಲಿಯವರೆಗೂ ಬೆಳೆ ಸಮೀಕ್ಷೆಯ ವರದಿಯನ್ನು ಪಡೆದುಕೊಳ್ಳದೆ ವಿಳಂಬ ನೀತಿಯನ್ನು ಅನುಸರಿಸುತ್ತಿರುವುದನ್ನು ರೈತ ಪರ, ಪ್ರಗತಿಪರ ಸಂಘಟನಗಳು ಉಗ್ರವಾಗಿ ಖಂಡಿಸುತ್ತವೆ. ಕೂಡಲೇ ಬೆಳೆ ಸಮೀಕ್ಷೆಯನ್ನು ಮಾಡಿ ರೈತರಿಗೆ ಬೆಳೆ ಪರಿಹಾರವನ್ನು ಮಂಜೂರು ಮಾಡಬೇಕು. ಇಲ್ಲವಾದರೆ ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಬೆಳೆ ಪರಿಹಾರಕ್ಕೆ ಕರೆ ನೀಡಿ ಬೆಂಗಳೂರು ಫ್ರೀಡಂ ಪಾರ್ಕನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದೆಂದು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.ಈ ವೇಳೆ ವೀರಣ್ಣ ಶಂಕ್ರಪ್ಪ ಗಟ್ಟಿ, ದೇವಪ್ಪ ಇಟಗಿ, ಅನ್ನದಾನೇಶ್ವರ ಗಡ್ಡಿ ಸೇರಿದಂತೆ ರೈತರು ಇದ್ದರು.

PREV

Recommended Stories

ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಟಾಕ್ಸಿಕ್‌ ಮುಂಬೈ ಶೂಟ್‌ ಮುಗಿಸಿ ಲಂಡನ್‌ಗೆ ಹಾರಿದ ಯಶ್‌