ವಿಧಾನಸೌಧದ ಮೆಟ್ಟಿಲಿಗೆ ಮಾತ್ರ ಸಿದ್ದು ಸಿಎಂ?: ಸಿ.ಟಿ.ರವಿ ಲೇವಡಿ

KannadaprabhaNewsNetwork |  
Published : Jun 10, 2025, 05:59 AM ISTUpdated : Jun 10, 2025, 06:00 AM IST
ಸಿ.ಟಿ.ರವಿ | Kannada Prabha

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಇಡೀ ಕರ್ನಾಟಕಕ್ಕೆ ಮುಖ್ಯಮಂತ್ರಿ ಎಂದು ನಾನು ತಿಳಿದಿದ್ದೆ. ಆದರೆ ಸಿದ್ದರಾಮಯ್ಯ ಅವರು ತಾನು ವಿಧಾನಸೌಧದ ಮೆಟ್ಟಿಲಿಗೆ ಮಾತ್ರ ಮುಖ್ಯಮಂತ್ರಿ ಎಂದು ಭಾವಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಲೇವಡಿ ಮಾಡಿದ್ದಾರೆ.

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಡೀ ಕರ್ನಾಟಕಕ್ಕೆ ಮುಖ್ಯಮಂತ್ರಿ ಎಂದು ನಾನು ತಿಳಿದಿದ್ದೆ. ಆದರೆ ಸಿದ್ದರಾಮಯ್ಯ ಅವರು ತಾನು ವಿಧಾನಸೌಧದ ಮೆಟ್ಟಿಲಿಗೆ ಮಾತ್ರ ಮುಖ್ಯಮಂತ್ರಿ ಎಂದು ಭಾವಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಲೇವಡಿ ಮಾಡಿದ್ದಾರೆ. ಚಿಕ್ಕಮಗಳೂರು ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಜವಾಬ್ದಾರಿ ಮೇರೆಗೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆರ್‌ಸಿಬಿ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಆಯೋಜಿಸಿದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ರಾಜ್ಯದ ಬೇರೆ ಕಡೆ ಜನ ಸಾವನ್ನಪ್ಪಿದರೆ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ಗೆ ಜವಾಬ್ದಾರಿ ಇರುವುದಿಲ್ಲವೇ ಎಂದು ಪ್ರಶ್ನಿಸಿದರು. ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಎರಡು ಕಡೆ ಆಯೋಜಿಸಿದ ಕಾರಣ ಪೊಲೀಸರು ಭದ್ರತೆ ನೀಡಲು ಸಾಧ್ಯವಾಗಲಿಲ್ಲ. ನಿಮ್ಮ ಮಕ್ಕಳು ಹಾಗೂ ಮೊಮ್ಮಕ್ಕಳ ಸುರಕ್ಷತೆ ಬಗ್ಗೆ ಪೊಲೀಸರು ಗಮನಹರಿಸಿದರು. ಇದೆ ವೇಳೆ ಜನಸಾಮಾನ್ಯರು ಸಾವನ್ನಪ್ಪಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.ಜನಸಾಮಾನ್ಯರು ಮೃತಪಟ್ಟಿದ್ದಾರೆ ಎಂದು ತಿಳಿದಾಗ ಮುಖ್ಯಮಂತ್ರಿ ಆತ್ಮಸಾಕ್ಷಿಗೆ ಚುಚ್ಚಬೇಕಿತ್ತಲ್ಲವೇ, ವಿಧಾನಸೌಧದ ಮೆಟ್ಟಿಲ ಮೇಲಿನ ಕಾರ್ಯಕ್ರಮಕ್ಕೆ ರಾಜ್ಯಪಾಲರನ್ನು ಕರೆಸಿದ್ದು ಯಾರು? ಡಿಪಿಆರ್ ಅವರಿಗೆ ಲೆಟರ್ ಕೊಟ್ಟವರು ಯಾರು ಎಂದು ಪ್ರಶ್ನಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುರ್ಚಿ ಕಿತ್ತಾಟ ರಾಜ್ಯದವರೇ ಬಗೆಹರಿಸಿಕೊಳ್ಳಬೇಕು: ಖರ್ಗೆ
ಸದೃಢ ಆರೋಗ್ಯಕ್ಕೆ ಹಲ್ಲು ಸದೃಢವಾಗಿರಲಿ