ರಾಜ್ಯದಲ್ಲಿ ಮಹತ್ವ ಪಡೆದ ಸಹಕಾರಿ ಕ್ಷೇತ್ರ: ನಿತ್ಯಾಶ್ರೀ

KannadaprabhaNewsNetwork |  
Published : Jan 03, 2025, 12:31 AM IST
ಹೂವಿನಹಡಗಲಿಯ ನಿತ್ಯಾಶ್ರೀ ಸಹಕಾರಿ ಕಚೇರಿಯ ಮುಂದೆ ಸೌಹಾರ್ದ ಸಹಕಾರಿ ಕಾಯ್ದೆಗೆ ಬೆಳ್ಳಿ ಹಬ್ಬದ ಸಂಭ್ರಮಾಚರಣೆ ಮಾಡಿದರು. | Kannada Prabha

ಸಾರಾಂಶ

ಕರ್ನಾಟಕದ ಸಹಕಾರ ಕ್ಷೇತ್ರದ ಬೆಳವಣಿಗೆಗೆ ಸೌಹಾರ್ದ ಚಳವಳಿಯ ಪಾತ್ರ ಅತ್ಯಂತ ಮಹತ್ವ ಪಡೆದಿದೆ. ಕಳೆದ 25 ವರ್ಷದ ಹಿಂದೆ ಜ.1-2001ರಂದು ಜಾರಿಗೆ ಬಂದ ಕರ್ನಾಟಕ ಸೌಹಾರ್ದ ಸಹಕಾರಿ ಕಾಯ್ದೆ, ಅದರಲ್ಲಿ ವಿಶೇಷವಾಗಿ ಹಣಕಾಸು ವ್ಯವಹಾರದಲ್ಲಿ ಸೌಹಾರ್ದ ಸಹಕಾರಿಗಳ ಮಾತ್ರ ಅತ್ಯಂತ ಮಹತ್ವದಾಗಿದೆ ಎಂದು ನಿತ್ಯಾಶ್ರೀ ಸಂತೋಷ ಕೆ. ಹೇಳಿದರು.

ಹೂವಿನಹಡಗಲಿ: ಸೌಹಾರ್ದ ಸಹಕಾರಿ ಕಾಯ್ದೆಗೆ ಬೆಳ್ಳಿ ಹಬ್ಬದ ಸಂಭ್ರಮಾಚರಣೆಯನ್ನು ಪಟ್ಟಣದ ನಿತ್ಯಾಶ್ರೀ ಸೌಹಾರ್ದ ಸಹಕಾರಿ ಸಂಘದ ಕಚೇರಿಯ ಮುಂದೆ ಸಹಕಾರಿ ಧ್ವಜಾರೋಹಣ ನೆರವೇರಿಸುವ ಆಚರಿಸಲಾಯಿತು.

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಿತ್ಯಾಶ್ರೀ ಸಂತೋಷ ಕೆ. ಮಾತನಾಡಿ, ಕರ್ನಾಟಕದ ಸಹಕಾರ ಕ್ಷೇತ್ರದ ಬೆಳವಣಿಗೆಗೆ ಸೌಹಾರ್ದ ಚಳವಳಿಯ ಪಾತ್ರ ಅತ್ಯಂತ ಮಹತ್ವ ಪಡೆದಿದೆ. ಕಳೆದ 25 ವರ್ಷದ ಹಿಂದೆ ಜ.1-2001ರಂದು ಜಾರಿಗೆ ಬಂದ ಕರ್ನಾಟಕ ಸೌಹಾರ್ದ ಸಹಕಾರಿ ಕಾಯ್ದೆ, ಅದರಲ್ಲಿ ವಿಶೇಷವಾಗಿ ಹಣಕಾಸು ವ್ಯವಹಾರದಲ್ಲಿ ಸೌಹಾರ್ದ ಸಹಕಾರಿಗಳ ಮಾತ್ರ ಅತ್ಯಂತ ಮಹತ್ವದಾಗಿದೆ ಎಂದರು.

ಕರ್ನಾಟಕದಲ್ಲಿ 6500ಕ್ಕೂ ಅಧಿಕ ಸೌಹಾರ್ದ ಸಹಕಾರಿಗಳು ಕಾರ್ಯ ನಿರ್ವಹಿಸುತ್ತಿವೆ. ನೇರವಾಗಿ 60 ಸಾವಿರ ಜನರಿಗೆ ಉದ್ಯೋಗ ಕಲ್ಪಿಸಿ ₹50 ಸಾವಿರ ಕೋಟಿಗಿಂತ ಅಧಿಕ ಠೇವಣಿ ಸಂಗ್ರಹಿಸಿ ₹40 ಸಾವಿರ ಕೋಟಿ ಸಾಲವನ್ನು ನೀಡಿ ಜನರಿಗೆ ಸಣ್ಣ ವ್ಯಾಪಾರಸ್ಥರಿಗೆ ಸಹಕಾರಿಯಾಗಿದೆ ಎಂದರು.

25 ವರ್ಷಗಳ ಹಿಂದೆ ಖಾಸಗಿ ಹಣಕಾಸು ಲೇವಾದೇವಿ ಸಂಸ್ಥೆಗಳ ಆರ್ಭಟವನ್ನು ನಿಧಾನವಾಗಿ ಹೋಗಲಾಡಿಸುವಲ್ಲಿ ಸೌಹಾರ್ದ ಸಹಕಾರಿಗಳ ಪಾತ್ರ ಅತ್ಯಂತ ಮಹತ್ವದ ಆಗಿದೆ. ಜನಸಾಮಾನ್ಯರು ಈ ಚಳವಳಿ ಕಡೆ ಒಲವು ತೋರಿಸಿದ್ದಾರೆ. ಇಂತಹ ಚಳವಳಿ ರಜತ ಮಹೋತ್ಸವ ಆಚರಿಸಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿ ಆಗಿದೆ ಎಂದರು.

ಖಾಸಗಿ ಹಣಕಾಸು ಸಂಸ್ಥೆಗಳು ಮತ್ತು ಬ್ಯಾಂಕುಗಳ ಹಾಗೇ ಕೇವಲ ಲಾಭದ ಗುರಿ ಹೊಂದದೇ ಸಾಮಾಜಿಕ ಕಳಕಳಿ ಮುಖಾಂತರ ಸಹಕಾರಿಗಳನ್ನು ಸದೃಢಗೊಳಿಸುವಲ್ಲಿ ನಮ್ಮ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಸರ್ಕಾರವು ಇಂತಹ ಮಹತ್ವವಾದ ಚಳವಳಿಯನ್ನು ಹತ್ತಿಕ್ಕಲು ಇನ್ನಿಲ್ಲದ ಕಸರತ್ತು ಮಾಡಿ, ಕಾನೂನು ಸುತ್ತೋಲೆಗಳ ಮೂಲಕ ತನ್ನ ವಶಕ್ಕೆ ಪಡೆದುಕೊಳ್ಳಲು ಯೋಚಿಸುತ್ತಿರುವುದು ಸರಿಯಲ್ಲ ಎಂದರು.

ಈ ಸಂದರ್ಭದಲ್ಲಿ ಕೆ. ಸಂತೋಷ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಿಥಿ ಚಿತ್ರದ ನಟ ‘ಸೆಂಚುರಿ’ಗೌಡ ಸೊಂಟದ ಮೂಳೆ ಮುರಿದು ನಿಧನ
ರಾಜ್ಯ ರಾಜಕಾರಣದಲ್ಲಿ ನನ್ನ ಕ್ಷೇತ್ರ ಚಾಮರಾಜನಗರ : ಪ್ರತಾಪ್‌ ಸಿಂಹ