ಸಹಕಾರ ಸಂಘಗಳು ಅನ್ನದಾತರ ಅಭ್ಯುದಯಕ್ಕೆ ಶ್ರಮಿಸಲಿ: ಮಾಜಿ ಸಂಸದ ಬಚ್ಚೇಗೌಡ

KannadaprabhaNewsNetwork |  
Published : Jul 19, 2024, 12:52 AM IST
ಫೋಟೋ : 17 ಹೆಚ್ ಎಸ್ ಕೆ 1ಹೊಸಕೋಟೆ ನಗರದಲ್ಲಿ ನಡೆದ ಹೊಸಕೋಟೆ ಟೌನ್ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ವಾರ್ಷಿಕ ಸಭೆಯನ್ನು ಮಾಜಿ ಸಂಸದ ಬಿಎನ್ ಬಚ್ಚೇಗೌಡ ಶಾಸಕ ಶರತ್ ಬಚ್ಚೇಗೌಡ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ರೈತರ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ನಿರಂತರ ಶ್ರಮಿಸಬೇಕು ಎಂದು ಮಾಜಿ ಸಂಸದ ಬಚ್ಚೇಗೌಡ ಹೇಳಿದರು. ಹೊಸಕೋಟೆಯಲ್ಲಿ ಕೃಷಿ ಸಹಕಾರ ಸಂಘದ 49ನೇ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.

- ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸಭೆಯಲ್ಲಿ ಬಚ್ಚೇಗೌಡರ ಸಲಹೆ

ಕನ್ನಡಪ್ರಭ ವಾರ್ತೆ ಹೊಸಕೋಟೆ

ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ರೈತರ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ನಿರಂತರ ಶ್ರಮಿಸಬೇಕು ಎಂದು ಮಾಜಿ ಸಂಸದ ಬಚ್ಚೇಗೌಡ ಹೇಳಿದರು.

ನಗರದಲ್ಲಿ ಆಯೋಜಿಸಿದ್ದ ಹೊಸಕೋಟೆ ಟೌನ್ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 49ನೇ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು, ಹೊಸಕೋಟೆ ತಾಲೂಕಿನಲ್ಲಿ ಒಟ್ಟು ಒಂಬತ್ತು ಸಹಕಾರ ಸಂಘಗಳಿದ್ದು, ಎಲ್ಲಕ್ಕಿಂತ ಹೊಸಕೋಟೆ ಟೌನ್ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ಮುಂಚೂಣಿಯಲ್ಲಿದೆ ಎಂದರು.

ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, ಸಹಕಾರ ಸಂಘ ರೈತರ ಬಾಳಿಗೆ ಹೊಸ ಚೈತನ್ಯ ನೀಡಿದೆ. ತಾಲೂಕಿನ ಹಲವು ಸಹಕಾರ ಸಂಘಗಳು ಡಿವಿಡೆಂಟ್ ನೀಡಲು ಪರದಾಡುತ್ತಿದ್ದರೆ, ಈ ಸಂಘ ನಿಯಮಾನುಸಾರ ಗರಿಷ್ಠ ಡಿವಿಡೆಂಟ್ ನೀಡುತ್ತಿದೆ ಎಂದರು.

ಸಹಕಾರ ಸಂಘದ ಅಧ್ಯಕ್ಷ ಪೂಜೇನ ಅಗ್ರಹಾರ ಕೃಷ್ಣಮೂರ್ತಿ ಮಾತನಾಡಿ, 2023-24ನೇ ಸಾಲಿನಲ್ಲಿ 1.52 ಕೋಟಿ ನಿವ್ವಳ ಲಾಭ ಗಳಿಸಿದ್ದು, ಸಾಲ ವಸೂಲಾತಿಯಲ್ಲಿ ಶೇ.99.20 ಪ್ರಗತಿ ಸಾಧಿಸಿದೆ. ಸಂಘ ಈ ಬಾರಿಯೂ ಷೇರುದಾರರಿಗೆ ಶೇ.25 ಗರಿಷ್ಠ ಡಿವಿಡೆಂಟ್ ಘೋಷಿಸಿದೆ. ಪ್ರಸ್ತುತ ಸಂಘದಲ್ಲಿ ೫೧೬೧ ಸದಸ್ಯರಿದ್ದು, 2.77 ಕೋಟಿ ಆಪತ್ ಧನ, 126.2 ಕೋಟಿ ಸದಸ್ಯರ ಠೇವಣಿ ಇದೆ. ಒಟ್ಟು ದುಡಿಯುವ ಬಂಡವಾಳ 141.1 ಕೋಟಿ ಇದೆ. ಹೂಡಿಕೆಗಳು 38.9 ಕೋಟಿ, ಬಡ್ಡಿ ರಹಿತ ಬೆಳೆಸಾಲ 8.66 ಕೋಟಿ, ಆಧಾರ ಸಾಲಗಳು 285.5 ಕೋಟಿ ನೀಡಲಾಗಿದೆ ಎಂದರು.

ಸಹಕಾರ ಸಂಘಗಳ ಜಂಟಿ ನಿರ್ದೇಶಕ ಅಶ್ವಥ್ ನಾರಾಯಣಗೌಡ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಕ ಎಸ್.ನಾರಾಯಣ ಶರ್ಮ, ಸಂಘದ ವ್ಯವಸ್ಥಾಪಕ ನಂಜುಂಡೇಗೌಡ, ಮುಖಂಡರಾದ ಗೋಪಾಲಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಬಾಬುರೆಡ್ಡಿ, ಬಮೂಲ್ ನಿರ್ದೇಶಕ ಎಲ್.ಎನ್.ಟಿ.ಮಂಜುನಾಥ್, ಸಂಘದ ನಿರ್ದೇಶಕರಾದ ಕೆ.ಸತೀಶ್, ಸಿ.ವಿ.ಗಣೇಶ್, ಆರ್.ಸುಜಾತ, ರಾಜಪ್ಪ, ಎನ್.ವಿ.ವೆಂಕಟೇಶ್, ಅಶ್ವಥ್, ಡಿ.ಎಚ್.ಹರೀಶ್, ಬಿ.ಮುನಿರಾಜು, ನಾಗರತ್ನ, ಸುಬ್ರಮಣಿ, ರತ್ನಮ್ಮ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿಗಾಗಿ ಮಕ್ಕಳಿಂದ ಪತ್ರ: ₹490 ಕೋಟಿ ಕೊಟ್ಟ ಸಿಎಂ!
ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ : ಬಿಯರ್‌, ವೈನ್‌ ಅಗ್ಗ?