ಗಂಗೊಳ್ಳಿ ಬೋಟು ಮುಳುಗಡೆ - 27 ಮೀನುಗಾರರ ರಕ್ಷಣೆ

KannadaprabhaNewsNetwork |  
Published : Aug 27, 2026, 03:15 AM IST
ಮುಳುಗಿದ ಬೋಟಿನಿಂದ ರಕ್ಷಿಸಲ್ಪಟ್ಟ ಮೀನುಗಾರರು | Kannada Prabha

ಸಾರಾಂಶ

ಇಲ್ಲಿನ ಗಂಗೊಳ್ಳಿಯ ಮೀನುಗಾರಿಕಾ ಧಕ್ಕೆಯಿಂದ ಮಧ್ಯಾಹ್ನದ ನಂತರ ಮೀನುಗಾರಿಕೆಗೆ ತೆರಳಿದ ಶ್ರೀ ಬಾಲಾಂಜನೇಯ ಹೆಸರಿನ ಪರ್ಶಿನ್ ಬೋಟು ಅನತಿ ದೂರದಲ್ಲಿ ಅಳಿವೆಯ ಸಮೀಪವೇ ಮುಳುಗಡೆಯಾಗಿದೆ. ಕೂಡಲೇ ಕಾರ್ಯಚರಣೆಗೆ ಇಳಿದ ಸಮೀಪದಲ್ಲಿದ್ದ ಇತರ ಬೋಟುಗಳ ಮೀನುಗಾರರು ಹಾಗೂ ಕರಾವಳಿ ಕಾವಲು ಪಡೆಯ ಸಿಬಂದಿಗಳು ಹಗ್ಗಗಳ ಸಹಾಯದಿಂದ ಮುಳುಗಿದ ಬೋಟಿನಲ್ಲಿದ್ದ 27 ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ. ಒಬ್ಬ ಮೀನುಗಾರನಿಗೆ ಗಾಯಗಳಾಗಿದ್ದು, ಚಿಕಿತ್ಸೆಗೆ ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಂದಾಪುರ: ಇಲ್ಲಿನ ಗಂಗೊಳ್ಳಿಯ ಮೀನುಗಾರಿಕಾ ಧಕ್ಕೆಯಿಂದ ಮಧ್ಯಾಹ್ನದ ನಂತರ ಮೀನುಗಾರಿಕೆಗೆ ತೆರಳಿದ ಶ್ರೀ ಬಾಲಾಂಜನೇಯ ಹೆಸರಿನ ಪರ್ಶಿನ್ ಬೋಟು ಅನತಿ ದೂರದಲ್ಲಿ ಅಳಿವೆಯ ಸಮೀಪವೇ ಮುಳುಗಡೆಯಾಗಿದೆ. ಕೂಡಲೇ ಕಾರ್ಯಚರಣೆಗೆ ಇಳಿದ ಸಮೀಪದಲ್ಲಿದ್ದ ಇತರ ಬೋಟುಗಳ ಮೀನುಗಾರರು ಹಾಗೂ ಕರಾವಳಿ ಕಾವಲು ಪಡೆಯ ಸಿಬಂದಿಗಳು ಹಗ್ಗಗಳ ಸಹಾಯದಿಂದ ಮುಳುಗಿದ ಬೋಟಿನಲ್ಲಿದ್ದ 27 ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ. ಒಬ್ಬ ಮೀನುಗಾರನಿಗೆ ಗಾಯಗಳಾಗಿದ್ದು, ಚಿಕಿತ್ಸೆಗೆ ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೋಟಿನ ತಳಭಾಗದ ಹಲಗೆಗಳು ನೀರಿನ ರಭಸಕ್ಕೆಕಿತ್ತು ಕೊಚ್ಚಿ ಹೋಗಿದ್ದರಿಂದ ಬೋಟಿನೊಳಗೆ ನೀರು ಮುಗ್ಗಿ ಮುಳುಗಲು ಕಾರಣವೆನ್ನಲಾಗಿದೆ. ಅವಘಡದಿಂದ ಲಕ್ಷಾಂತರ ರೂ. ನಷ್ಟ ಸಂಭವಿಸಿದ್ದಾಗಿ ತಿಳಿದುಬಂದಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂಗಾ ಬಸದಿಯಲ್ಲಿ ನೂತನ ಸಭಾಭವನಕ್ಕೆ ಭೂಮಿಪೂಜೆ
ಮಹಿಳೆಯರ ಶಕ್ತಿಗೆ ಸಾಕ್ಷಿಯಾದ ಅದ್ಧೂರಿ ರಥೋತ್ಸವ!