ಕರಾವಳಿ ಉತ್ಸವದಲ್ಲಿ ಕರಾವಳಿ ಸಂಸ್ಕೃತಿ ಅನಾವರಣ: ಡಿಸಿ

KannadaprabhaNewsNetwork |  
Published : Dec 17, 2024, 01:00 AM IST
ಪೂರ್ವಭಾವಿ ಸಭೆ ನಡೆಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. | Kannada Prabha

ಸಾರಾಂಶ

ಹಲವು ವರ್ಷಗಳ ಬಳಿಕ ನಡೆಯಲಿರುವ ಕರಾವಳಿ ಉತ್ಸವದಲ್ಲಿ ಕರಾವಳಿಯ ಸಂಸ್ಕೃತಿ, ಸಾಹಿತ್ಯ, ಉಡುಗೆ ತೊಡುಗೆಗಳು ಹಾಗೂ ಸಾಂಪ್ರದಾಯಿಕ ತಿಂಡಿ ತಿನಿಸುಗಳ ಪ್ರದರ್ಶನ ಮತ್ತು ಮಾರಾಟದ ಅಪೂರ್ವ ಕಾರ್ಯಕ್ರಮಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ.

21ರಿಂದ ಆಕರ್ಷಕ ವಸ್ತು ಪ್ರದರ್ಶನ, ಆಹಾರ ಮೇಳ, ಭವ್ಯ ಸಾಂಸ್ಕೃತಿಕ ಮೆರವಣಿಗೆ

ಕನ್ನಡಪ್ರಭ ವಾರ್ತೆ ಮಂಗಳೂರು

ಹಲವು ವರ್ಷಗಳ ಬಳಿಕ ನಡೆಯಲಿರುವ ಕರಾವಳಿ ಉತ್ಸವದಲ್ಲಿ ಕರಾವಳಿಯ ಸಂಸ್ಕೃತಿ, ಸಾಹಿತ್ಯ, ಉಡುಗೆ ತೊಡುಗೆಗಳು ಹಾಗೂ ಸಾಂಪ್ರದಾಯಿಕ ತಿಂಡಿ ತಿನಿಸುಗಳ ಪ್ರದರ್ಶನ ಮತ್ತು ಮಾರಾಟದ ಅಪೂರ್ವ ಕಾರ್ಯಕ್ರಮಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಕರಾವಳಿ ಉತ್ಸವದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕರಾವಳಿ ಉತ್ಸವದಿಂದ ಕರಾವಳಿಯ ನೈಜ ಸಂಸ್ಕೃತಿಯ ಅನಾವರಣಗೊಳ್ಳಲಿದೆ. ಈ ನಿಟ್ಟಿನಲ್ಲಿ ಇಲ್ಲಿನ ಸ್ಥಳೀಯ ವಿವಿಧ ಭಾಗ ಮತ್ತು ಜನಾಂಗಗಳ ಸಾಂಪ್ರದಾಯಿಕ ಸಾಂಸ್ಕೃತಿಕ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಪ್ರದರ್ಶಿಸಲಾಗುವುದು. ಕರಾವಳಿಯ ಪುರಾತನ ಸಂಸ್ಕೃತಿ ಹಾಗೂ ತಿಂಡಿ ತಿನಿಸುಗಳ ತಯಾರಿಕೆ ಮತ್ತು ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದಿವಾಸಿ ಮತ್ತು ಗುಡ್ಡಗಾಡು ಜನಾಂಗದ ಸಾಂಪ್ರದಾಯಿಕ ಉತ್ಪನ್ನಗಳ ಮಾರಾಟಕ್ಕೂ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.

ವಿವಿಧ ಆಕರ್ಷಕ ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ಪ್ರದರ್ಶನಗಳಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕರಾವಳಿ ಉತ್ಸವ ಮೈದಾನದಲ್ಲಿ ಆಕರ್ಷಕ ವಸ್ತು ಪ್ರದರ್ಶನ ಮತ್ತು ಆಹಾರ ಮೇಳ ಡಿ.21ರಿಂದ ನಡೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಾಂಸ್ಕೃತಿಕ ಮೆರವಣಿಗೆ:

ಡಿ.21ರಂದು ಕರಾವಳಿ ಉತ್ಸವದ ಉದ್ಘಾಟನೆ ಪ್ರಯುಕ್ತ ನಗರದ ಕೊಡಿಯಾಲ್‍ಬೈಲ್‍ನಿಂದ ಎಂ.ಜಿ. ರಸ್ತೆ ಮೂಲಕ ಕರಾವಳಿ ಉತ್ಸವ ಮೈದಾನದವರೆಗೆ ಆಕರ್ಷಕ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. ಸಂಜೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಕರಾವಳಿ ಉತ್ಸವದ ಪ್ರಯುಕ್ತ ವಿವಿಧೆಡೆ ಏರ್ಪಡಿಸಲಾಗಿರುವ ಬೀಚ್ ಉತ್ಸವ, ಯುವ ಉತ್ಸವ, ಸಸ್ಯಮೇಳ ಮತ್ತಿತರ ಕಾರ್ಯಕ್ರಮಗಳಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು.

ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್‌, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್., ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿನ್ ಸ್ಟಾನಿ ಅಲ್ವಾರಿಸ್ ಮಾತನಾಡಿ, ಕರಾವಳಿ ಉತ್ಸವ ಯಶಸ್ವಿಗೊಳಿಸಲು ಅಕಾಡೆಮಿ ವತಿಯಿಂದ ಸಹಕಾರ ನೀಡುವುದಾಗಿ ತಿಳಿಸಿದರು.

ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಅಪರ ಜಿಲ್ಲಾಧಿಕಾರಿ ಡಾ.ಜಿ. ಸಂತೋಷ್‌ ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್. ಆನಂದ್, ಮೂಡಾ ಆಯುಕ್ತೆ ನೂರ್‌ ಜಹಾನ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೂಪಾ ಮೌದ್ಗಿಲ್‌ ಮಾನಹಾನಿ ಕೇಸ್‌: ರೋಹಿಣಿ ಅರ್ಜಿ ವಜಾ
ವಿರೋಧದ ನಡುವೆ ಮದುವೆ : ಸಿಟ್ಟಲ್ಲಿ ಅಳಿಯನ ಮನೆಗೆ ಮಾವನಿಂದ ಬೆಂಕಿ!