ಡಿ.19ರಿಂದ ಕರಾವಳಿ ಉತ್ಸವ: ಜಿಲ್ಲಾಧಿಕಾರಿ

KannadaprabhaNewsNetwork |  
Published : Nov 18, 2025, 02:00 AM IST
ಸಭೆಯಲ್ಲಿ ಮಾತನಾಡುತ್ತಿರುವ ಜಿಲ್ಲಾಧಿಕಾರಿ ದರ್ಶನ್‌ ಎಚ್‌.ವಿ. | Kannada Prabha

ಸಾರಾಂಶ

ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧದಲ್ಲಿ ಕರಾವಳಿ ಉತ್ಸವ ಕಾರ್ಯಕ್ರಮ ನಡೆಸುವ ಬಗ್ಗೆ ಪೂರ್ವಭಾವಿ ಸಭೆ ನೆರವೇರಿತು.

ಅಗತ್ಯ ಸಿದ್ಧತೆ ನಡೆಸಲು ಅಧಿಕಾರಿಗಳಿಗೆ ದರ್ಶನ್‌ ಎಚ್‌.ವಿ. ಸೂಚನೆ

ಮಂಗಳೂರು: ಈ ಸಾಲಿನ ಕರಾವಳಿ ಉತ್ಸವ ಕಾರ್ಯಕ್ರಮವನ್ನು ಡಿ.19ರಿಂದ ಜ.4ರವರೆಗೆ ನಡೆಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧದಲ್ಲಿ ಕರಾವಳಿ ಉತ್ಸವ ಕಾರ್ಯಕ್ರಮ ನಡೆಸುವ ಬಗ್ಗೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕರಾವಳಿ ಉತ್ಸವದಲ್ಲಿ ಜನಾಕರ್ಷಣೆ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುತ್ತದೆ. ಸಾಂಸ್ಕೃತಿಕ, ಚಿತ್ರಕಲೆ, ಸಾಹಸ ಹಾಗೂ ಪ್ರಾಕೃತಿಕ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.ಬೀಚ್ ಉತ್ಸವ, ಕಲಾ ಪರ್ಬ, ಚಿತ್ರ ಸಂತೆ, ಫಲಪುಷ್ಪ ಪ್ರದರ್ಶನ ಮತ್ತಿತರ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಜಿಲ್ಲೆಯ ಎಲ್ಲ ಪ್ರಮುಖ ಬೀಚ್‍ಗಳಲ್ಲಿ ವೈವಿಧ್ಯಮಯ ಪ್ರತ್ಯೇಕ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಚಿಂತಿಸಲಾಗಿದೆ. ಕ್ರೀಡಾ ಕಾರ್ಯಕ್ರಮಗಳಿಗೆ ಕರಾವಳಿ ಉತ್ಸವದಲ್ಲಿ ಪ್ರಾಮುಖ್ಯತೆ ನೀಡಲಾಗಿದೆ. ಪ್ರಮುಖವಾಗಿ ಬೀಚ್ ಫುಟ್‍ಬಾಲ್ ಮತ್ತು ವಾಲಿಬಾಲ್ ಕಾರ್ಯಕ್ರಮ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಲಾಲ್‍ಬಾಗ್ ಕರಾವಳಿ ಉತ್ಸವ ಮೈದಾನ, ಕದ್ರಿ ಉದ್ಯಾನವನ ಹಾಗೂ ಪ್ರಮುಖ ಬೀಚ್‍ಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಬೈಕ್ ಮತ್ತು ಕಾರು ಪ್ರದರ್ಶನ ಹಾಗೂ ಶ್ವಾನ ಪ್ರದರ್ಶನ ಆಯೋಜಿಸಲಾಗುವುದು ಎಂದರು. ಪಿಲಿಕುಳದಲ್ಲಿಯೂ ಕರಾವಳಿ ಉತ್ಸವದ ಕೆಲವು ಕಾರ್ಯಕ್ರಮಗಳನ್ನು ಏರ್ಪಡಿಸುವ ಬಗ್ಗೆ ಯೋಚಿಸಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದ ರೂಪುರೇಷೆ ಹಾಗೂ ಅಗತ್ಯ ಸಿದ್ಧತೆಗಳನ್ನು ನಡೆಸುವ ಬಗ್ಗೆ ಒಂದು ವಾರದೊಳಗೆ ವರದಿ ನೀಡಬೇಕು ಹಾಗೂ ಟೆಂಡರ್ ಪ್ರಕ್ರಿಯೆಯನ್ನು ಶೀಘ್ರ ಕೈಗೊಳ್ಳುವಂತೆ ಸೂಚಿಸಿದರು.ಕರಾವಳಿ ಉತ್ಸವ ಅಂಗವಾಗಿ ಸಾರ್ವಜನಿಕರಿಗೆ ನವ ಮಂಗಳೂರು ಬಂದರಿನಲ್ಲಿ ಹಡಗು ವೀಕ್ಷಣೆ ಹಾಗೂ ಕೋಸ್ಟ್‌ ಗಾರ್ಡ್ ನೌಕೆಗಳ ವೀಕ್ಷಣೆಗೆ ಅವಕಾಶ ನೀಡುವ ಕುರಿತು ಸಂಬಂಧಪಟ್ಟ ಪ್ರಾಧಿಕಾರದೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.ಉಪ ಪೋಲಿಸ್ ಆಯುಕ್ತ ಮಿಥುನ್ ಎಚ್‌.ಎನ್, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ವಿವಿಧ ಇಲಾಖೆ ಅಧಿಕಾರಿಗಳು, ಸಂಘ ಸಂಸ್ಥೆ ಪ್ರತಿನಿಧಿಗಳು, ವಿವಿಧ ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ