ಕನ್ನಡಪ್ರಭ ವಾರ್ತೆ ಬೆಂಗಳೂರು
ಸ್ವಾತಂತ್ರ್ಯ ಉದ್ಯಾನದಲ್ಲಿ ಭಾನುವಾರ ಕಾಕ್ರೋಚ್ ಜನತಾ ಪಾರ್ಟಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ, ನಮ್ಮ ಪ್ರಧಾನಿ ಅತಿ ಹೆಚ್ಚು ಶಿಕ್ಷಿತರಾಗಿದ್ದಾರೆ. ಅವರು ‘ಸಂಪೂರ್ಣ ಪೊಲಿಟಿಕಲ್ ಸೈನ್ಸ್’ ಓದಿದ್ದಾರೆ ಮತ್ತು ರಾಜಕೀಯ ಹೇಗೆ ಕೆಲಸ ಮಾಡುತ್ತದೆ ಎಂದು ನೋಡಿದ್ದಾರೆ. ಶಿಕ್ಷಕರು ಹೇಗೆ ಕೆಲಸ ಮಾಡುತ್ತಾರೆ, ಪ್ರಶ್ನೆಪತ್ರಿಕೆ ಹೇಗೆ ಸೋರಿಕೆಯಾಗುತ್ತವೆ ಎಂದೂ ಗೊತ್ತಿದೆ. ಆದರೂ, ಪತ್ರಿಕೆ ಸೋರಿಕೆ ವಿಚಾರದಲ್ಲಿ ಏಕೆ ಮೌನವಾಗಿದ್ದೀರಿ ಎಂದು ಪ್ರಶ್ನಿಸಿದರು.
ನಿವೃತ್ತರ ರಾಜಕೀಯವನ್ನು ಕಂಡು ಬೇಸತ್ತಿರುವ ಯುವಕರು, ‘ಅಂಕಲ್, ಆಂಟಿಗಳೇ ನಿಮ್ಮ ಆಡಳಿತ ಸಾಕು’ ಎಂದು ಹೇಳುತ್ತಿದ್ದಾರೆ. ಯುವ ಸಮುದಾಯಕ್ಕೆ ರಾಜಕೀಯದಲ್ಲಿ ಅವಕಾಶ ನೀಡಬೇಕು. ಯುವಕರೇ ಮುಂದಾಳತ್ವ ವಹಿಸಬೇಕು. ನಿವೃತ್ತರಾಗಿದ್ದರೂ ಅಧಿಕಾರದಲ್ಲಿರುವವರಿಗೆ ರಾಜಕೀಯ ನಿವೃತ್ತಿ ನೀಡಬೇಕು ಎಂದರು.ದೇಶದಲ್ಲಿ ಶಿಕ್ಷಣ ವ್ಯವಸ್ಥೆ ಹಾಳಾಗುತ್ತಿದೆ. ಅದನ್ನು ಬದಲಿಸಲು ಯುವಕರೇ ಈ ದೇಶದ ಭವಿಷ್ಯ ಕಟ್ಟುತ್ತಾರೆ ಎನ್ನುವ ಕಾರಣಕ್ಕೆ ಇಲ್ಲಿಗೆ ಬಂದಿದ್ದೇನೆ. ನಾನು ಎಂದಿಗೂ ಯುವ ಸಮುದಾಯ, ನ್ಯಾಯದ ಪರ ಇರುತ್ತೇನೆ. ನಿಮ್ಮಿಂದಲೇ ಬದಲಾವಣೆ ಸಾಧ್ಯ. ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು. ಶಿಕ್ಷಣದ ಬಗ್ಗೆ ಸ್ಪಷ್ಟ ಉದ್ದೇಶ, ಗುರಿಗಳನ್ನು ಹೊಂದಿರುವ ಸೋನಮ್ ವಾಂಗ್ಚುಕ್ನಂಥವರು ದೇಶದ ಶಿಕ್ಷಣ ಸಚಿವರಾಗಬೇಕು. ಅವರು ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲಿಸುತ್ತಿದ್ದಾರೆ ಎಂದು ಪ್ರಕಾಶ್ ರಾಜ್ ಹೇಳಿದರು.
ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಮಾತನಾಡಿ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ಸಿಜೆಪಿ ಪಕ್ಷದ ಧ್ವನಿ ಈ ದೇಶದ ಯುವ ಸಮುದಾಯದ ಧ್ವನಿಯಾಗಿದೆ. ನ್ಯಾಯಕ್ಕಾಗಿ ಹೋರಾಟ ಮುಂದುವರೆಸುತ್ತೇವೆ. ರಾಜೀನಾಮೆ ನೀಡುವವರೆಗೆ ಬಿಡುವುದಿಲ್ಲ ಎಂದರು.
ಭಾನುವಾರ ಸಂಜೆ ಭಾರೀ ಮಳೆ ನಡುವೆ ನೂರಾರು ಜನ ಕೊಡೆಗಳನ್ನು ಹಿಡಿದುಕೊಂಡು ಸಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಿದರು. ಪ್ರತಿಭಟನೆಯಲ್ಲಿ ಯುವಕರು, ವಯಸ್ಸಾದವರು ಸೇರಿ ಎಲ್ಲಾ ವರ್ಗದವರು ಭಾಗವಹಿಸಿದ್ದರು. ನಾಯಕರ ಮಾತುಗಳಿಗೆ ಚಪ್ಪಾಳೆ ತಟ್ಟಿ ಬೆಂಬಲಿಸಿದರು. ಪ್ರತಿಭಟನೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.ಪುನೀತ್ ಸಮಾಧಿಗೆ ನಮನ:
ಶಿಕ್ಷಣ ವ್ಯವಸ್ಥೆಯಲ್ಲಿ ಅಕ್ರಮ, ಭ್ರಷ್ಟಾಚಾರ, ಸ್ವಜನಪಕ್ಷಪಾತ ನಿಲ್ಲಲೇಬೇಕು. ಯುವಕರೇ ಈ ದೇಶದ ಭವಿಷ್ಯ. ಯುವಕರಿಂದಲೇ ಈ ದೇಶದಲ್ಲಿ ಏನಾದರೂ ಬದಲಾವಣೆ ಕಾಣಲು ಸಾಧ್ಯ. ನೀಟ್ನಂತಹ ಮಹತ್ವದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ ಆಗುತ್ತಿವೆ. 27 ಮಕ್ಕಳು ಬಲಿಯಾಗಿದ್ದಾರೆ. ಮಕ್ಕಳ ಆತ್ಮಹತ್ಯೆಗೆ ಹೊಣೆ ಯಾರು? ಇನ್ನು ಎಷ್ಟು ಜನ ಬಲಿಯಾಗಬೇಕು? ಪ್ರಶ್ನೆ ಪತ್ರಿಕೆಯ ಅಕ್ರಮದ ಹೊಣೆ ಹೊತ್ತು ಶಿಕ್ಷಣ ಸಚಿವರು ರಾಜಿನಾಮೆ ನೀಡಲೇಬೇಕು ಎಂದು ಸೋನಮ್ ಆಗ್ರಹಿಸಿದರು.