ಮತ ಎಣಿಕೆ ಏಜೆಂಟರಿಗೆ ಟೆಂಗಿನಕಾಯಿ ಮಾರ್ಗದರ್ಶನ

KannadaprabhaNewsNetwork |  
Published : Jun 03, 2024, 01:15 AM ISTUpdated : Jun 03, 2024, 08:08 AM IST
ಲೋಕಸಭಾ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ಶನಿವಾರ ಹುಬ್ಬಳ್ಳಿಯ ಅರವಿಂದ ನಗರದಲ್ಲಿರುವ ಪಕ್ಷದ ಕಾರ್ಯಾಲಯದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಮತ ಎಣಿಕೆಯ ಏಜಂಟರ ಸಭೆ ಸಭೆ ನಡೆಸಿದರು.  | Kannada Prabha

ಸಾರಾಂಶ

ಧಾರವಾಡ ಗ್ರಾಮೀಣ ಲೋಕಸಭಾ ಕ್ಷೇತ್ರದ ಮತ ಎಣಿಕೆ ಏಜೆಂಟರ ಸಭೆಯನ್ನು ಇಲ್ಲಿನ ಅರವಿಂದ ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ನಡೆಸಿದರು.

 ಹುಬ್ಬಳ್ಳಿ : ಲೋಕಸಭಾ ಚುನಾವಣೆಯ ಫಲಿತಾಂಶ ಜೂ. 4ರಂದು ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ ಶನಿವಾರ ಧಾರವಾಡ ಗ್ರಾಮೀಣ ಲೋಕಸಭಾ ಕ್ಷೇತ್ರದ ಮತ ಎಣಿಕೆ ಏಜೆಂಟರ ಸಭೆಯನ್ನು ಇಲ್ಲಿನ ಅರವಿಂದ ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ನಡೆಸಿದರು.

ಈ ವೇಳೆ ಮಾತನಾಡಿದ ಶಾಸಕರು, ಸಾಕಷ್ಟು ಚುನಾವಣೆಗಳಲ್ಲಿ ಮತ ಎಣಿಕೆ ಏಜೆಂಟರಾಗಿ ಕೆಲಸ ಮಾಡಿದ್ದೀರಿ. ಅಲ್ಲಿ ನಾವು ಯಾವ ರೀತಿ ಇರಬೇಕು, ಮತ್ತೆ ಪ್ರತಿ ಬೂತಿನ ಫಲಿತಾಂಶದ ಎಲ್ಲ ಅಭ್ಯರ್ಥಿಗಳ ಅಂಕಿ-ಸಂಖ್ಯೆಗಳನ್ನು ಪಕ್ಷ ನೀಡಿದ ದಾಖಲೀಕರಣ ಪತ್ರದಲ್ಲಿ ದಾಖಲಿಸಬೇಕು. ಶಿಸ್ತು ಬದ್ಧವಾಗಿ ಕಾರ್ಯನಿರ್ವಹಣೆ ಮತ್ತು ಸಕಾಲಕ್ಕೆ ಹಾಜರಿದ್ದು ಕೌಂಟಿಂಗ್ ಮುಗಿಯುವ ವರೆಗೆ ಸ್ಥಳದಲ್ಲಿಯೇ ಇರುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾರ್ಗದರ್ಶನ ನೀಡಿದರು.

ಈ ವೇಳೆ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ, ಪ್ರಮುಖರಾದ ಶಶಿಮೌಳಿ ಕುಲಕರ್ಣಿ, ಜಯತೀರ್ಥ ಕಟ್ಟಿ, ಬಸವರಾಜ ಕುಂದಗೋಳಮಠ, ಸುಭಾಷ ಚವ್ಹಾಣ, ಶಂಕರ ಮುಗದ, ಮಹಾಂತೇಶ ಶ್ಯಾಗೋಟಿ, ಶಿವಾನಂದ ಗುಂಡಗೋವಿ, ರುದ್ರಪ್ಪ ಅರಿವಾಳ, ಮೃತ್ಯುಂಜಯ ಹಿರೇಮಠ, ಷಣ್ಮುಖ ಗುರಿಕಾರ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಆತ್ಮ*ತ್ಯೆಗೆ ಸರ್ಕಾರಿ ನೌಕರಿಗೆ ಸೇರುವಂತೆ ಕುಟುಂಬ ಒತ್ತಡ ಕಾರಣ?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ