
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ನಂತರ ಮಾತನಾಡಿದ ಶ್ರೀನಿಧಿ, ಕಾಫಿ ಉತ್ಪತ್ತಿಯು ದೇಶೀಯ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಕೊಡಗು ಜಿಲ್ಲೆಯ ಶೇ. 99ರಷ್ಟು ರೈತರು ಕಾಫಿ ಬೆಳೆಗಾರರಾಗಿದ್ದಾರೆ. ಆದರೆ ಸೋಮವಾರಪೇಟೆಯಲ್ಲಿ ದಶಕಗಳಿಂದ ಕಾರ್ಯನಿರ್ವಹಿಸುತ್ತಿರುವ ಕಾಫಿ ಮಂಡಳಿ ಕಚೇರಿಗೆ ಇನ್ನೂ ಸ್ವಂತ ಕಟ್ಟಡವಿಲ್ಲ. ಖಾಸಗಿ ಕಟ್ಟಡದಲ್ಲಿ ಬಾಡಿಗೆ ಪಾವತಿಸಿ ಕಾರ್ಯನಿರ್ವಹಿಸಲಾಗುತ್ತಿದೆ.
ಕಾಫಿ ಕೃಷಿಕರ ಅನುಕೂಲ ಹಾಗೂ ಹಿತದೃಷ್ಟಿಯಿಂದ ಕಾಫಿ ಮಂಡಳಿಯನ್ನು ಉನ್ನತಿಕರಿಸಬೇಕಾದ ಅಗತ್ಯವಿದೆ. ಕಾಫಿ ಮಂಡಳಿ ಕಚೇರಿಗೆ ಸ್ವಂತ ಕಟ್ಟಡದೊಂದಿಗೆ ಅಧಿಕಾರಿಗಳ ವಸತಿ ಗೃಹ, ಪ್ರಯೋಗಾಲಯ, ಸಭಾಂಗಣ, ಅತಿಥಿ ಗೃಹ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕಾಫಿ ಮಂಡಳಿಯೊಂದಿಗೆ ಚರ್ಚಿಸಿ ಇದರ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಸದರಿಗೆ ಮನವಿ ಮಾಡಿದರು.ಮನವಿ ಸ್ವೀಕರಿಸಿ ಮಾತನಾಡಿದ ಸಂಸದರು ಈ ಕುರಿತಾಗಿ ಶೀಘ್ರದಲ್ಲೇ ಸಂಬಂದಿಸಿದ ಕಾಫಿ ಮಂಡಳಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭ ಪ್ರಮುಖರಾದ ಸಜನ್ ಮಂದಣ್ಣ, ಜನಾರ್ಧನ್, ಅಭಿಷೇಕ್ ಗೋವಿಂದಪ್ಪ, ಲಕ್ಷ್ಮಿಕಾಂತ್ ಕೊಮಾರಪ್ಪ, ತಮ್ಮಯ್ಯ, ಪ್ರೇಮ್ ಸಾಗರ್, ವಿನಯ್ ಕುಶಾಲಪ್ಪ, ಆಶೀತ್ ಇದ್ದರು.