ಕೋಲ್ಡ್ ಸ್ಟೋರೇಜಿನಿಂದ ರೈತ ವರ್ಗಕ್ಕೆ ಅನುಕೂಲ: ಬಸವರಾಜ ರಾಯರಡ್ಡಿ

KannadaprabhaNewsNetwork |  
Published : Mar 31, 2026, 02:30 AM IST
ಕುಕನೂರು ಪಟ್ಟಣದ ಎಪಿಎಂಸಿಯಲ್ಲಿ ₹7 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಕೋಲ್ಡ್ ಸ್ಟೋರೇಜ್ ಕಟ್ಟಡವನ್ನು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ವೀಕ್ಷಿಸಿದರು. | Kannada Prabha

ಸಾರಾಂಶ

ಕುಕನೂರು ಪಟ್ಟಣದ ಎಪಿಎಂಸಿಯಲ್ಲಿ ₹7 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಕೋಲ್ಡ್ ಸ್ಟೋರೇಜ್ ಕಟ್ಟಡವನ್ನು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ವೀಕ್ಷಿಸಿದರು.

ಕುಕನೂರು: ರೈತ ವರ್ಗಕ್ಕೆ ಕೋಲ್ಡ್ ಸ್ಟೋರೇಜಿನಿಂದ ಅನುಕೂಲ ಆಗುತ್ತದೆ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.

ಪಟ್ಟಣದ ಎಪಿಎಂಸಿಯಲ್ಲಿ ₹7 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಕೋಲ್ಡ್ ಸ್ಟೋರೇಜ್ ಕಟ್ಟಡ ವೀಕ್ಷಿಸಿದ ಅವರು, ಕೋಲ್ಡ್ ಸ್ಟೋರೇಜ್ 8 ಕೋಲ್ಟ್ ರೂಂಗಳನ್ನು ಹೊಂದಿದೆ. 2200 ಮೆ. ಟನ್ ಸಂಗ್ರಹ ಸಾಮರ್ಥ್ಯ ಹೊಂದಿದೆ. ರೈತರು ತಾವು ಬೆಳೆಗಳನ್ನು ಸಂಗ್ರಹಿಸಿ ಇಡಲು ಬಹಳ ಅನುಕೂಲ ಆಗುತ್ತದೆ. ಶೀಘ್ರದಲ್ಲಿ ಉದ್ಘಾಟನೆ ಮಾಡಲಾಗುವುದು ಎಂದರು.

ಮೌಖಿಲವಾಗಿ ಕೋರ್ಟ್‌ ಗ್ರೀನ್ ಸಿಗ್ನಲ್: ಪಟ್ಟಣದ ಗುದ್ನೇಪ್ಪನ ಮಠದಲ್ಲಿ ಗುತ್ತಿಗೆ ಆಧಾರದ ಮೇಲೆ ಸರ್ಕಾರಿ ತಾಲೂಕಾಡಳಿತ ಕಟ್ಟಡ, ಆಸ್ಪತ್ರೆ, ಬುದ್ಧ, ಬಸವ, ಅಂಬೇಡ್ಕರ್ ಭವನ ನಿರ್ಮಾಣ, ಕೋರ್ಟ್‌ ನಿರ್ಮಾಣಕ್ಕೆ, ತಾಲೂಕು ಕ್ರೀಡಾಂಗಣ ನಿರ್ಮಾಣಕ್ಕೆ ನ್ಯಾಯಾಲಯ ಮೌಖಿಕವಾಗಿ ಆದೇಶ ನೀಡಿದೆ. ಲಿಖಿತ ರೂಪದ ಆದೇಶಕ್ಕೆ ಮಾತ್ರ ಕಾಯುತ್ತಿದ್ದೇವೆ. ಗುದ್ನೇಪ್ಪನಮಠದ ಸ್ಥಳೀಯರು ಕೋರ್ಟ್‌ ಮೊರೆ ಹೋದ ಕಾರಣ ಕೆಲಸಗಳು ವಿಳಂಬವಾಗಿವೆ ಎಂದರು.

ಪ್ರಮುಖರಾದ ಖಾಸಿಂಸಾಬ್ ತಳಕಲ್ಲ, ಯಂಕಣ್ಣ ಯರಾಶಿ, ಹನುಮಂತಗೌಡ ಚಂಡೂರು, ಅಶೋಕ ತೋಟದ, ಪಪಂ ಅಧ್ಯಕ್ಷೆ ಲೀಲಾವತಿ ಮೂಧೋಳ, ಉಪಾಧ್ಯಕ್ಷೆ ಮಂಜುಳಾ ಕಲ್ಮನಿ, ಕೆರಿಬಸಪ್ಪ ನಿಡಗುಂದಿ, ಮುತ್ತು ಮ್ಲ್ಮೀಕಿ, ರೆಹೆಮಾನಸಾಬ್ ಮಕ್ಕಪರ್ನವರ್, ಪಪಂ ಸದಸ್ಯ ರಾಮಣ್ಣ ಬಂಕದಮನಿ, ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಿರಾಜ್ ಕರಮುಡಿ, ಸಂಗಮೇಶ ಗುತ್ತಿ, ಸಿದ್ದಯ್ಯ ಕಳ್ಳಿಮಠ, ವಿಠಲ ದೇಸಾಯಿ, ವೀರಯ್ಯ ತೋಂಟದಾರ್ಯಮಠ, ರಾಘವೇಂದ್ರ ಕಾತರಕಿ, ಶ್ರೀಧರ ಭಂಡಾರಿ, ಮಂಜುನಾಥ ಯಡಿಯಾಪೂರ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವದಂತಿ ನಂಬಬೇಡಿ, ಆರೋಗ್ಯವಾಗಿದ್ದೇನೆ- ಶಾಸಕ ಶಿವಣ್ಣನವರ
ಭಗವಾನ್ ಮಹಾವೀರರು ತತ್ವಗಳು ಜೀವನ ಉನ್ನತೀಗೇರಿಸುವ ಮಾರ್ಗಗಳು