ಧಾರವಾಡ:
ಶನಿವಾರ ಇಲ್ಲಿಯ ಕರ್ನಾಟಕ ರಾಜ್ಯ ಮಾದಿಗ ವಿದ್ಯಾರ್ಥಿ ಒಕ್ಕೂಟ ಆಯೋಜಿಸಿದ್ದ ಪ್ರಾಯೋಗಿಕ ದತ್ತಾಂಶ ಸಂಗ್ರಹ ಕುರಿತು ಎರಡು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯ ಲಭಿಸಿ 75 ವರ್ಷ ಕಳೆದರೂ ಪರಿಶಿಷ್ಟರಲ್ಲಿ ಕೆಲವು ಜಾತಿಗಳು ಅಭಿವೃದ್ಧಿಯಲ್ಲಿ ಹಿಂದುಳಿದಿವೆ. ಈ ಹಿಂದುಳಿಯುವಿಕೆಗೆ ಕಾರಣ ಹುಡುಕಲು ಈಗಾಗಲೇ ಹಲವು ಆಯೋಗ, ಸಮಿತಿಗಳು ರಚನೆಯಾಗಿ ವರದಿ ಸಲ್ಲಿಕೆಯಾಗಿವೆ. ಅವುಗಳಲ್ಲಿನ ದತ್ತಾಂಶ ಮತ್ತು ಆಯಾ ತಾಲೂಕು ಮಟ್ಟದಲ್ಲಿ ಲಭ್ಯವಿರುವ ಅಂಕಿ ಅಂಶ ಸಂಗ್ರಹಿಸಿ ಪ್ರತಿ ತಾಲೂಕಿನಿಂದ ಪ್ರತ್ಯೇಕ ಮನವಿಯನ್ನು ಆಯೋಗಕ್ಕೆ ಸಲ್ಲಿಸುವುದು ಅತ್ಯಗತ್ಯವಾಗಿದೆ ಎಂದು ನಾರಾಯಣಸ್ವಾಮಿ ಒತ್ತಿ ಹೇಳಿದರು.ಆಯ್ಕೆಯಾದ ಸರ್ಕಾರಗಳು ಆಯಾ ಕಾಲಕ್ಕೆ ತನ್ನಲ್ಲಿನ ಸಮುದಾಯಗಳ ಅಭಿವೃದ್ಧಿ, ಹಿಂದುಳಿಯುವಿಕೆ ಕುರಿತಂತೆ ಪರಾಮರ್ಶಿಸಿ ಆ ಅಸಮಾನತೆ ನಿವಾರಣೆಗೆ ಮಾಡಬೇಕೆಂದು ಸಂವಿಧಾನ ಹೇಳಿದೆ. ಆದರೆ, ರಾಜ್ಯದಲ್ಲಿ ಅಧಿಕಾರ ನಡೆಸಿದ ಯಾವುದೇ ಸರ್ಕಾರ ಕಣ್ತೆರೆದು ನೋಡದೇ ಇದ್ದಾಗ ಮಾದಿಗ ಸಮುದಾಯ ಅವಕಾಶ ಗಳಿಂದ ವಂಚಿತವಾಗುತ್ತ ಬಂದಿದೆ. ಇದಕ್ಕೆ ಕೊನೆ ಹಾಡಲು ಆಯೋಗದ ಮುಂದೆ ನಮ್ಮ ನೋವಿನ ಸಮರ್ಥನೆ ಮಾಡಿಕೊಳ್ಳಬೇಕಿದೆ ಎಂದರು.ಮಾಜಿ ಸಚಿವ ಹನುಮಂತಪ್ಪ ಅಲ್ಕೋಡ ಮಾತನಾಡಿ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಎಲ್ಲ ಸಮುದಾಯಗಳ ದತ್ತಾಂಶ ಇರುತ್ತದೆ. ಅದನ್ನೇ ಆಧರಿಸಿ ಒಳಮೀಸಲು ನೀಡಬೇಕಿತ್ತು. ಆದಾಗ್ಯೂ ಹೊಸ ಆಯೋಗ ರಚಿಸಿದೆ. ನಮ್ಮ ಬೇಡಿಕೆ ಈಡೇರಿಸುವಾಗ ಮಾತ್ರ ಇಂತಹ ನೆಪಗಳನ್ನು ಹುಡುಕಲಾಗುತ್ತಿದೆ ಎಂದು ಹೇಳಿದರು.
ಕವಿವಿ ಕುಲಸಚಿವ ಡಾ. ನಿಜಲಿಂಗಪ್ಪ ಮಟ್ಟಿಹಾಳ, ಪ್ರಕೃತಿಯಲ್ಲಿ ಅಸಮತೋಲನವಾದರೆ ಬಿರುಗಾಳಿ, ಭೂಕಂಪ, ಪ್ರವಾಹ ಹುಟ್ಟಿಕೊಳ್ಳುತ್ತವೆ. ಮಾನವ ಸಮಾಜದಲ್ಲಿ ತಾರತಮ್ಯವಾದರೆ ಕ್ರಾಂತಿ ಹುಟ್ಟಿಕೊಳ್ಳುತ್ತದೆ. ಇಂಥ ಕ್ರಾಂತಿಯನ್ನು ಮಾದಿಗ ಸಮುದಾಯ ಮಾಡಿದೆ. ಅದರ ಫಲ ದಕ್ಕುವ ಸಮಯ ಬಂದಿದೆ ಎಂದರು.
ಡಾ. ಜಿ.ಬಿ. ನಂದನ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಐಆರ್ಎಸ್ ಅಧಿಕಾರಿ ಎಚ್.ಆರ್. ಭೀಮಾಶಂಕರ, ಪ್ರೊ. ಶಿವಶರಣ ಸಿ.ಟಿ., ಪ್ರೊ. ಮಹಾದೇವಪ್ಪ ದಳಪತಿ, ಸಂಚಾಲಕ ಪರಸಪ್ಪ ಮಾಂಗ, ಮಂಜುನಾಥ ಹಾಸಟ್ಟಿ, ತರುಣ ದೊಡಮನಿ, ಅಜೀತ ಮ್ಯಾಗಡಿ, ನಾಗರಾಜ ಮಾದರ, ವಿರುಪಾಕ್ಷಿ ಮಾಚನೂರ ಇದ್ದರು.