ಯಲ್ಲಮ್ಮದೇವಿಗೆ ₹1.96 ಕೋಟಿ ದೇಣಿಗೆ ಸಂಗ್ರಹ

KannadaprabhaNewsNetwork |  
Published : Jul 27, 2024, 12:50 AM IST
ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮದೇವಿ ಹುಂಡಿಯಲ್ಲಿ ಹಾಕಿದ್ದ ಕಾಣಿಕೆಯನ್ನು ಎಣಿಕೆ ಮಾಡುತ್ತಿರುವ ಸಿಬ್ಬಂದಿ | Kannada Prabha

ಸಾರಾಂಶ

ಬೆಳಗಾವಿ : ಉತ್ತರ ಕರ್ನಾಟಕ ಭಾಗದ ಪ್ರಮುಖ ಆರಾಧ್ಯ ದೇವಿ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಕೇವಲ 50 ದಿನದಲ್ಲಿ ಬರೋಬ್ಬರಿ 1.96 ಕೋಟಿ ಹಣ ಭಕ್ತರ ಕಾಣಿಕೆ ಸಂಗ್ರಹವಾಗಿದೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಉತ್ತರ ಕರ್ನಾಟಕ ಭಾಗದ ಆರಾಧ್ಯ ದೈವ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಕೇವಲ 50 ದಿನದಲ್ಲಿ ಬರೋಬ್ಬರಿ ₹1.96 ಕೋಟಿ ಹಣ ಭಕ್ತರ ಕಾಣಿಕೆ ಸಂಗ್ರಹವಾಗಿದೆ.

ಕರ್ನಾಟಕ, ಮಹಾರಾಷ್ಟ್ರಹಾಗೂ ಗೋವಾ ಸೇರಿದಂತೆ ವಿವಿಧ ಕಡೆ ಭಕ್ತರನ್ನು ಹೊಂದಿರುವ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮನ ದೇವಸ್ಥಾನದಲ್ಲಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದೆ. ಏಪ್ರಿಲ್‌ 1ರಿಂದ ಮೇ 20ರ ಅವಧಿಯಲ್ಲಿ ಭಕ್ತರು ಹಾಕಿದ್ದ ಭಕ್ತರ ಕಾಣಿಕೆ ಎಣಿಕೆ ಜು.25ರಂದು ರಾತ್ರಿ ಮುಕ್ತಾಯವಾಗಿದೆ‌‌. 50 ದಿನಗಳಲ್ಲಿ ಒಟ್ಟು₹1.96 ಕೋಟಿ ಕಾಣಿಕೆ‌ ಸಂಗ್ರಹವಾಗಿದೆ. ಅದರಲ್ಲಿ ₹1.71 ಕೋಟಿ ನಗದು, ₹ 20.44 ಲಕ್ಷ ಮೌಲ್ಯದ ಚಿನ್ನಾಭರಣ, ₹4.44 ಲಕ್ಷ ಮೌಲ್ಯದ ಬೆಳ್ಳಿ ಆಭರಣ ಸಂಗ್ರಹವಾಗಿದೆ. ಶಕ್ತಿ ಯೋಜನೆಯಿಂದ ಯಲ್ಲಮ್ಮನ ಗುಡ್ಡಕ್ಕೆ ಅಪಾರ ಸಂಖ್ಯೆಯಲ್ಲಿ ಮಹಿಳಾ ಭಕ್ತರ ಹೆಚ್ಚಳವಾಗಿದೆ. ಹಾಗಾಗಿ ದಾಖಲೆ ಪ್ರಮಾಣದಲ್ಲಿ ದೇಣಿಗೆ ಸಂಗ್ರಹವಾಗಿದೆ ಎಂದು ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಪಿ.ಬಿ ಮಹೇಶ ಮಾಹಿತಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ ಕುರಿತು ಇಂದು ರಾಜ್ಯ ವಿಶೇಷ ಸಂಪುಟ ಸಭೆ
ಫೆ.13ಕ್ಕೆ ಕಾಂಗ್ರೆಸ್‌ ಸರ್ಕಾರಕ್ಕೆ 1000 ದಿನ