ಮೋದಿ ಜನಪ್ರಿಯತೆಗೆ ಮಸಿ ಬಳಿಯಲು ಷಡ್ಯಂತ್ರ । ಆಂತರಿಕ ಭದ್ರತಾ ವೈಫಲ್ಯವೆಂದು ಬಿಂಬಸಲು ಯತ್ನ: ಆರೋಪ
ಲೋಕಸಭೆಯ ಪ್ರೇಕ್ಷಕರ ಗ್ಯಾಲರಿಯಿಂದ ಅಪರಿಚಿತರಿಬ್ಬರು ಸದನದೊಳಕ್ಕೆ ಹಾರಿ ಬಂದು ಬಣ್ಣಮಿಶ್ರಿತ ಗ್ಯಾಸ್ಬಾಂಬ್ ಹಾಕಿದ ಘಟನೆ ಪ್ರಧಾನಿ ಮೋದಿಯವರ ಜನಪ್ರಿಯತೆಗೆ ಮಸಿ ಬಳಿಯುವ ಯತ್ನ ಎಂದು ಸಂಸದ ಎಸ್.ಮುನಿಸ್ವಾಮಿ ಖಂಡಿಸಿದರು.
ಲೋಕಸಭೆಯಲ್ಲಿ ನಡೆದ ಘಟನೆಯ ಪ್ರತ್ಯಕ್ಷದರ್ಶಿ ಹಾಗೂ ಆರೋಪಿಗಳನ್ನು ಹಿಡಿಯುವಲ್ಲಿ ಸಹಕರಿಸಿದ ಕೋಲಾರ ಸಂಸದ ಎಸ್.ಮುನಿಸ್ವಾಮಿ ಘಟನೆ ಕುರಿತು ದೂರವಾಣಿ ಮೂಲಕ ಸುದ್ದಿಗಾರರಿಗೆ ಮಾಹಿತಿ ನೀಡಿದರು.ಶೂನಲ್ಲಿದ್ದ ಗ್ಯಾಸ್ ಬಾಂಬ್:
ಈ ಸಂದರ್ಭದಲ್ಲಿ ಆಂಧ್ರದ ಅನಂತಪುರಂ ಸಂಸದ ಹಾಗೂ ಮಾಜಿ ಪೊಲೀಸ್ ವೃತ್ತ ನಿರೀಕ್ಷಕರೂ ಆಗಿರುವ ಗೋರೆಂಟ್ಲ ಮಾಧವ ಅವರೊಂದಿಗೆ ತಾವು ಏಳೆಂಟು ಮಂದಿ ಆರೋಪಿಗಳನ್ನು ಹಿಡಿದು ಭದ್ರತಾ ಸಿಬ್ಬಂದಿಗೆ ಒಪ್ಪಿಸಿದ್ದಾಗಿ ವಿವರಿಸಿದರು.
ಭದ್ರತಾ ವೈಫಲ್ಯವೆಂದು ಬಿಂಬಿಸಲು ಯತ್ನಪ್ರಧಾನಿ ನರೇಂದ್ರ ಮೋದಿ ಇಂದು ವಿಶ್ವಮಟ್ಟದ ನಾಯಕರಾಗಿ ಜನಪ್ರಿಯತೆ ಗಳಿಸಿದ್ದಾರೆ, ಇದನ್ನು ಸಹಿಸಲು ಆಗದ ಕೆಲವು ವಿದ್ರೋಹಿಗಳು, ದೇಶದಲ್ಲಿ ಆಂತರಿಕ ಭದ್ರತೆ ವೈಫಲ್ಯದಿಂದ ಕೂಡಿದೆ ಎಂದು ಬಿಂಬಿಸಲು ನಡೆಸಿರುವ ಷಡ್ಯಂತ್ರವಾಗಿದೆ ಎಂದು ಟೀಕಿಸಿದರು.
ಇಂತಹ ಘಟನೆ ಮರುಕಳಿಸದಂತೆ ಲೋಕಸಭಾಧ್ಯಕ್ಷರು ಈಗಾಗಲೇ ಸಮಗ್ರ ತನಿಖೆಗೆ ಆದೇಶಿಸಿದ್ದಾರೆ ಮತ್ತು ಸಂಸದರ ರಕ್ಷಣೆಗೆ ಹೆಚ್ಚಿನ ಒತ್ತು ನೀಡುವುದಾಗಿ ಘೋಷಿಸಿದ್ದಾರೆ ಎಂದು ತಿಳಿಸಿದ್ದಾರೆ.ಪಾಸ್ ನೀಡುವಾಗ ಎಚ್ಚರ ಅಗತ್ಯ
ಸಂಸದರಾದವರನ್ನು ನೋಡಲು ಅವರ ಕ್ಷೇತ್ರದ ಜನರು ಬಂದಾಗ ಸಂಸತ್ತಿನ ವೀಕ್ಷಣೆಗೆ ಪಾಸ್ ನೀಡುವುದು ಸಾಮಾನ್ಯ, ಮತ ನೀಡಿದವರು ಅಷ್ಟು ದೂರದಿಂದ ಬಂದಾಗ ಜನಪ್ರತಿನಿಧಿಯಾದವರು ಪಾಸ್ ನೀಡಲೇಬೇಕಾಗುತ್ತದೆ. ಆದರೆ ಇನ್ನು ಮುಂದೆ ಪಾಸ್ ನೀಡುವಾಗಲು ಹೆಚ್ಚಿನ ಜಾಗ್ರತೆ ವಹಿಸಬೇಕು ಎಂಬುದನ್ನು ಈ ಘಟನೆ ತೋರಿಸಿಕೊಟ್ಟಿದೆ ಎಂದರು.