ಆ ಬದ ಬಳಸಿಲ್ಲವೆಂದು ಧರ್ಮಸ್ಥಳ ಸನ್ನಿಧಾನಕ್ಕೆ ಬನ್ನಿ: ಸಿ.ಟಿ. ರವಿಗೆ ಹೆಬ್ಬಾಳಕರ ಸವಾಲು

KannadaprabhaNewsNetwork |  
Published : Dec 25, 2024, 12:49 AM IST
ಲಕ್ಷ್ಮೀ ಹೆಬ್ಬಾಳಕರ | Kannada Prabha

ಸಾರಾಂಶ

ಆಕ್ಷೇಪಾರ್ಹ ಪದ ಬಳಸಿಲ್ಲ ಅಂದ್ರೆ ಧರ್ಮಸ್ಥಳ ಮಂಜುನಾಥೇಶ್ವರನ ಸನ್ನಿಧಾನಕ್ಕೆ ಬನ್ನಿ. ನಾನೂ ಕುಟುಂಬ ಸಮೇತ ಬರುವೆ. ನೀವೂ ಬನ್ನಿ ಆಣೆ ಪ್ರಮಾಣ ಮಾಡೋಣ ಎಂದು ಸಿ.ಟಿ. ರವಿ ಅವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ನೇರವಾಗಿ ಸವಾಲು ಹಾಕಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಆಕ್ಷೇಪಾರ್ಹ ಪದ ಬಳಸಿಲ್ಲ ಅಂದ್ರೆ ಧರ್ಮಸ್ಥಳ ಮಂಜುನಾಥೇಶ್ವರನ ಸನ್ನಿಧಾನಕ್ಕೆ ಬನ್ನಿ. ನಾನೂ ಕುಟುಂಬ ಸಮೇತ ಬರುವೆ. ನೀವೂ ಬನ್ನಿ ಆಣೆ ಪ್ರಮಾಣ ಮಾಡೋಣ ಎಂದು ಸಿ.ಟಿ. ರವಿ ಅವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ನೇರವಾಗಿ ಸವಾಲು ಹಾಕಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾರಿಗೂ ಸವಾಲು ಹಾಕಲ್ಲ, ಜವಾಬ್ ಕೇಳುತ್ತಿಲ್ಲ. ಈ ಪ್ರಕರಣದಲ್ಲಿ ರಾಜಕಾರಣ ಸ್ಟಂಟ್ ಬೇಕಿಲ್ಲ. ಮಾಡಬಾರದ್ದನ್ನು ಮಾಡಿ ಬಿಜೆಪಿ ನಾಯಕರೇ ವಿಜೃಂಭಿಸುತ್ತಿದ್ದಾರೆ. ಆಡಬಾರದ್ದನ್ನು ಆಡಿರುವ ಸಿ.ಟಿ. ರವಿಗೆ ಹೂವು, ಹಾರ, ತೂರಾಯಿ ಹಾಕಿಸಿಕೊಳ್ತಿದ್ದಾರೆ, ಪಟಾಕಿ ಹೊಡಿಸಿಕೊಳ್ತಿದ್ದಾರೆ. ಅದಕ್ಕಾಗಿ ನಾನು ಇಷ್ಟೆ ಹೇಳೋದು ಎಂದರು.

ಧರ್ಮಸ್ಥಳ ಕ್ಷೇತ್ರದ ಮಂಜುನಾಥನನ್ನು ನಾನು ನಂಬುತ್ತೇನೆ. ದೇವಾನು ದೇವತೆಗಳನ್ನು ನಾನು ನಂಬುತ್ತೇನೆ. ಸಿ‌.ಟಿ. ರವಿ ಅವರ ಚಿಕ್ಕಮಗಳೂರಿಗೆ ಧರ್ಮಸ್ಥಳ ತುಂಬ ಹತ್ತಿರಯಿದೆ. ನೀವೂ ದೇವರನ್ನು ನಂಬುತ್ತೀರಿ. ದತ್ತಮಾಲೆ ಹಾಕುತ್ತೀರಿ. ದತ್ತ ಪೀಠಕ್ಕೆ ಹೋಗುತ್ತೀರಿ. ಆ ಪದ ಬಳಸಿಲ್ಲ ಎಂದರೆ ಕುಟುಂಬ ಸಮೇತ ಧರ್ಮಸ್ಥಳಕ್ಕೆ ಬನ್ನಿ, ನಾನೂ ಬರುತ್ತೇನೆ ಎಂದು ಹೆಬ್ಬಾಳಕರ ಸವಾಲು ಹಾಕಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!