ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾರಿಗೂ ಸವಾಲು ಹಾಕಲ್ಲ, ಜವಾಬ್ ಕೇಳುತ್ತಿಲ್ಲ. ಈ ಪ್ರಕರಣದಲ್ಲಿ ರಾಜಕಾರಣ ಸ್ಟಂಟ್ ಬೇಕಿಲ್ಲ. ಮಾಡಬಾರದ್ದನ್ನು ಮಾಡಿ ಬಿಜೆಪಿ ನಾಯಕರೇ ವಿಜೃಂಭಿಸುತ್ತಿದ್ದಾರೆ. ಆಡಬಾರದ್ದನ್ನು ಆಡಿರುವ ಸಿ.ಟಿ. ರವಿಗೆ ಹೂವು, ಹಾರ, ತೂರಾಯಿ ಹಾಕಿಸಿಕೊಳ್ತಿದ್ದಾರೆ, ಪಟಾಕಿ ಹೊಡಿಸಿಕೊಳ್ತಿದ್ದಾರೆ. ಅದಕ್ಕಾಗಿ ನಾನು ಇಷ್ಟೆ ಹೇಳೋದು ಎಂದರು.
ಧರ್ಮಸ್ಥಳ ಕ್ಷೇತ್ರದ ಮಂಜುನಾಥನನ್ನು ನಾನು ನಂಬುತ್ತೇನೆ. ದೇವಾನು ದೇವತೆಗಳನ್ನು ನಾನು ನಂಬುತ್ತೇನೆ. ಸಿ.ಟಿ. ರವಿ ಅವರ ಚಿಕ್ಕಮಗಳೂರಿಗೆ ಧರ್ಮಸ್ಥಳ ತುಂಬ ಹತ್ತಿರಯಿದೆ. ನೀವೂ ದೇವರನ್ನು ನಂಬುತ್ತೀರಿ. ದತ್ತಮಾಲೆ ಹಾಕುತ್ತೀರಿ. ದತ್ತ ಪೀಠಕ್ಕೆ ಹೋಗುತ್ತೀರಿ. ಆ ಪದ ಬಳಸಿಲ್ಲ ಎಂದರೆ ಕುಟುಂಬ ಸಮೇತ ಧರ್ಮಸ್ಥಳಕ್ಕೆ ಬನ್ನಿ, ನಾನೂ ಬರುತ್ತೇನೆ ಎಂದು ಹೆಬ್ಬಾಳಕರ ಸವಾಲು ಹಾಕಿದರು.