ಸಮ್ಮೇಳನ ಅಧ್ಯಕ್ಷರಾಗಿ ಹಾಸ್ಯ ಕಲಾವಿದ ಜೆ. ನರಸಿಂಹಮೂರ್ತಿ ಅವರಿಗೆ ಆಹ್ವಾನ

KannadaprabhaNewsNetwork |  
Published : Aug 31, 2026, 02:45 AM IST
29ಎಸ್‌ಜಿಪಿ1ಸಿರುಗುಪ್ಪ ನಗರದ ಹೌಸಿಂಗ್ ಬೋರ್ಡ್‌ನಲ್ಲಿರುವ ಪರಿಷತ್ತಿನ ಪದಾಧಿಕಾರಿಗಳು ಹಿರಿಯ ನಿವೃತ್ತ ಶಿಕ್ಷಕ ಹಾಗೂ ಹಾಸ್ಯ ಕಲಾವಿದ ಜೆ. ನರಸಿಂಹಮೂರ್ತಿ ಅವರ ನಿವಾಸದಲ್ಲಿ ಸಮ್ಮೇಳನದ ಅಧ್ಯಕ್ಷತೆ ವಹಿಸಿಕೊಳ್ಳುವಂತೆ ಮನವಿ ಮಾಡಿ ಅಧಿಕೃತವಾಗಿ ಆಹ್ವಾನಿಸಿದರು. | Kannada Prabha

ಸಾರಾಂಶ

ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸೆ. 9ರಂದು ತಾಲೂಕಿನ ರಾವಿಹಾಳ್ ಗ್ರಾಮದಲ್ಲಿ ನಡೆಯಲಿರುವ 8ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ನಿವೃತ್ತ ಶಿಕ್ಷಕ ಹಾಗೂ ಹಾಸ್ಯ ಕಲಾವಿದ ಜೆ. ನರಸಿಂಹಮೂರ್ತಿ ಅವರು ಆಯ್ಕೆಯಾಗಿದ್ದು, ಕಸಾಪ ಪದಾಧಿಕಾರಿಗಳು ಅವರಿಗೆ ಅಧಿಕೃತವಾಗಿ ಶುಕ್ರವಾರ ಆಹ್ವಾನ ನೀಡಿದ್ದರು.

ಸಿರುಗುಪ್ಪ: ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸೆ. 9ರಂದು ತಾಲೂಕಿನ ರಾವಿಹಾಳ್ ಗ್ರಾಮದಲ್ಲಿ ನಡೆಯಲಿರುವ 8ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ನಿವೃತ್ತ ಶಿಕ್ಷಕ ಹಾಗೂ ಹಾಸ್ಯ ಕಲಾವಿದ ಜೆ. ನರಸಿಂಹಮೂರ್ತಿ ಅವರು ಆಯ್ಕೆಯಾಗಿದ್ದು, ಕಸಾಪ ಪದಾಧಿಕಾರಿಗಳು ಅವರಿಗೆ ಅಧಿಕೃತವಾಗಿ ಶುಕ್ರವಾರ ಆಹ್ವಾನ ನೀಡಿದ್ದರು.

ಕನ್ನಡ ಸಾಹಿತ್ಯ, ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ಜೆ. ನರಸಿಂಹಮೂರ್ತಿ ಅವರು ನೀಡಿದ ಗಣನೀಯ ಕೊಡುಗೆ, ಸಾಹಿತ್ಯಾಸಕ್ತಿ ಹಾಗೂ ಕನ್ನಡ ಪ್ರೇಮವನ್ನು ಗುರುತಿಸಿ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ. ಪರಿಷತ್ತಿನ ಪದಾಧಿಕಾರಿಗಳು ನರಸಿಂಹಮೂರ್ತಿ ಅವರ ನಿವಾಸದಲ್ಲಿ ಸಮ್ಮೇಳನದ ಅಧ್ಯಕ್ಷತೆ ವಹಿಸಿಕೊಳ್ಳುವಂತೆ ಮನವಿ ಮಾಡಿ, ಅಧಿಕೃತವಾಗಿ ಆಹ್ವಾನಿಸಿದರು.

ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಡಾ. ಮಧುಸೂದನ ಕಾರಿಗನೂರು ಮಾತನಾಡಿ, ನರಸಿಂಹಮೂರ್ತಿ ಅವರಂತಹ ಹಿರಿಯ ಸಾಹಿತಿ ಹಾಗೂ ಅನುಭವಿ ಶಿಕ್ಷಕರು ಈ ಸಮ್ಮೇಳನದ ಅಧ್ಯಕ್ಷತೆ ವಹಿಸುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ. ಅವರ ಅಪಾರ ಅನುಭವ ಮತ್ತು ಮಾರ್ಗದರ್ಶನದಿಂದ ಸಮ್ಮೇಳನ ಮತ್ತಷ್ಟು ಅರ್ಥಪೂರ್ಣವಾಗಿ ಮೂಡಿಬರಲಿದೆ. ವಿಶೇಷವಾಗಿ ಗಡಿಭಾಗವಾದ ರಾವಿಹಾಳ್‌ನಲ್ಲಿ ಈ ಸಾಹಿತ್ಯ ಹಬ್ಬ ನಡೆಯುತ್ತಿದ್ದು, ಅವರ ಅಧ್ಯಕ್ಷತೆಯು ಗ್ರಾಮೀಣ ಭಾಗದ ಸಾಹಿತ್ಯಾಸಕ್ತರಿಗೆ ಹಾಗೂ ಕನ್ನಡಿಗರಿಗೆ ದೊಡ್ಡ ಪ್ರೇರಣೆಯಾಗಲಿದೆ ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು ಮತ್ತು ಮುಖಂಡರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ವಲಯ ಅಧ್ಯಕ್ಷರ ಸಭೆ
ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ