ಚಿತ್ರದುರ್ಗ: ಉತ್ತಮ ಸಂವಿಧಾನ ರಚಿಸುವ ಮೂಲಕ ದೇಶದಲ್ಲಿ ಸಮಾನತೆ, ಪ್ರಜಾತಂತ್ರ ಮತ್ತು ಒಕ್ಕೂಟ ವ್ಯವಸ್ಥೆ ಜಾರಿಗೊಳಿಸಿ ಜನತೆಗೆ ನೆಮ್ಮದಿ ಜೀವನ ಮಾರ್ಗವನ್ನು ಕಲ್ಪಿಸಿಕೊಟ್ಟವರು ಡಾ. ಬಿ.ಆರ್. ಆಂಬೇಡ್ಕರ್ ಎಂದು ಪ್ರಾಂಶುಪಾಲ ಡಾ. ಎಸ್. ಎಚ್. ಪಂಚಾಕ್ಷರಿ ಹೇಳಿದರು.
ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ಸಮಾಜಕ್ಕೆ ಜಾಢ್ಯವಾಗಿದ್ದ ಜಾತಿ ವ್ಯವಸ್ಥೆ ವಿರುದ್ಧ ಅಂಬೇಡ್ಕರ್ ಹೋರಾಡಿದರು. ಬಸವಾದಿ ಪ್ರಮಥರು ಸಾರಿದ ಸಮ ಸಮಾಜ ಮತ್ತುಸಾಮಾಜಿಕ ನ್ಯಾಯದ ಪರಿಕಲ್ಪನೆಯುಳ್ಳ ಸಂವಿಧಾನವು ಪ್ರಸ್ತುತ ಸಮಾಜದಲ್ಲಿ ಶಾಂತಿ - ಸೌಹಾರ್ದತೆ, ಭ್ರಾತೃತ್ವ ಮತ್ತು ಸಮಾನತೆ ಎತ್ತಿಹಿಡಿದು ದೇಶವು ಒಗ್ಗಟ್ಟಾಗಿ ಮುನ್ನಡೆಯಲು ಉತ್ತಮ ಮಾರ್ಗ ಮಾಡುತ್ತಿದೆ. ಸಂವಿಧಾನದಲ್ಲಿ ಸರ್ವರಿಗೂ ಸಮಾನ ಹಕ್ಕುಗಳನ್ನು ಪ್ರತಿಪಾದಿಸಿರುವ ಅಂಬೇಡ್ಕರ್ ವಿಚಾರಧಾರೆಗಳನ್ನು ನಾವೆಲ್ಲರು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.