22ರಿಂದ ಪಂಚಾಕ್ಷರ ಗವಾಯಿ, ಪುಟ್ಟರಾಜ ಗವಾಯಿ ಪುಣ್ಯಸ್ಮರಣೋತ್ಸವ

KannadaprabhaNewsNetwork |  
Published : Jun 21, 2024, 01:08 AM IST
ಸುದ್ದಿಗೋಷ್ಠಿಯಲ್ಲಿ ಶ್ರೀಕಲ್ಲಯ್ಯಜ್ಜನವರು ಮಾತನಾಡಿದರು. | Kannada Prabha

ಸಾರಾಂಶ

ಗಾನಯೋಗಿ ಶಿವಯೋಗಿ ಪಂ. ಪಂಚಾಕ್ಷರ ಗವಾಯಿಗಳವರ 80ನೇ ಪುಣ್ಯಸ್ಮರಣೋತ್ಸವ ಹಾಗೂ ಪದ್ಮಭೂಷಣ ಡಾ. ಪುಟ್ಟರಾಜ ಕವಿಗವಾಯಿಗಳವರ 14ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ಉಭಯ ಗುರುಗಳ ಜಾತ್ರಾ ಮಹೋತ್ಸವ ಜೂ. 22ರಿಂದ 26ರ ವರೆಗೆ ಜರುಗಲಿದೆ.

ಗದಗ: ಗಾನಯೋಗಿ ಶಿವಯೋಗಿ ಲಿಂ.ಪಂ. ಪಂಚಾಕ್ಷರ ಗವಾಯಿಗಳವರ 80ನೇ ಪುಣ್ಯಸ್ಮರಣೋತ್ಸವ ಹಾಗೂ ಪದ್ಮಭೂಷಣ ಲಿಂ. ಡಾ. ಪುಟ್ಟರಾಜ ಕವಿಗವಾಯಿಗಳವರ 14ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ಉಭಯ ಗುರುಗಳ ಜಾತ್ರಾ ಮಹೋತ್ಸವ ಜೂ. 22ರಿಂದ 26ರ ವರೆಗೆ ಜರುಗಲಿದೆ ಎಂದು ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಶ್ರೀ ಕಲ್ಲಯ್ಯಜ್ಜನವರು ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಜಾತ್ರಾ ಮಹೋತ್ಸವದಲ್ಲಿ ಕೀರ್ತನ, ಸಂಗೀತ, ಉಪನ್ಯಾಸ ಅಂಧರಗೋಷ್ಠಿ ಹಾಗೂ ಗ್ರಂಥ ಬಿಡುಗಡೆ ಕಾರ್ಯಕ್ರಮ ಜರುಗಲಿದೆ. ಜೂ. 26ರಂದು ಉಭಯ ಗುರುಗಳ ಮಹಾರಥೋತ್ಸವ, ಧರ್ಮೋತ್ತೇಜಕ ಮಹಾಸಭೆ ಹಾಗೂ ಅಹೋರಾತ್ರಿ ಸಂಗೀತ ಕಾರ್ಯಕ್ರಮಗಳು ಜರುಗುವವು ಎಂದರು. ಜೂ. 22ರಿಂದ 26ರ ವರೆಗೆ ಕರ್ತೃ ಗದ್ದುಗೆಗೆ ವೇದೋಕ್ತ ರುದ್ರಾಭಿಷೇಕ ಹಾಗೂ ಸಹಸ್ರ ಬಿಲ್ವಾರ್ಚನೆ ಕಾರ್ಯಕ್ರಮವನ್ನು ಗದುಗಿನ ಶ್ರೀ ಕುಮಾರೇಶ್ವರ ವೈದಿಕ ಪಾಠಶಾಲೆಯಿಂದ ಹಾಗೂ ಆಶ್ರಮದ ವಿದ್ಯಾರ್ಥಿಗಳಿಂದ ಪ್ರಾರ್ಥನೆ ನಡೆಯಲಿದೆ. ಪ್ರತಿದಿನ ಬೆಳಗ್ಗೆ 7ರಿಂದ 8ರ ವರೆಗೆ ಕೈವಲ್ಯ ಪದ್ಧತಿ ಶಿವಯೋಗ ಕುರಿತು ಶಿವಾನುಭವವನ್ನು ರನ್ನಬೆಳಗಲಿ ಶಂಭುಲಿಂಗಾಶ್ರಮ ಸಿದ್ಧಾರೂಢ ಮಠದ ಶ್ರೀ ಕೃಷ್ಣೇಗೌಡ ಕೋಲೂರ ಅವರಿಂದ ಜರುಗಲಿದೆ. ಮೇ 26ರಿಂದ ಪಂ. ಸದಾಶಿವಶಾಸ್ತ್ರಿಗಳು ಹುಕ್ಕೇರಿ ವಿರಚಿತ ಪಂ. ಪಂಚಾಕ್ಷರೇಶ್ವರ ಮಹಾಪುರಾಣ ಪ್ರವಚನ ನಡೆಯುತ್ತಿದ್ದು, ಜೂ. 26ರಂದು ಮುಕ್ತಾಯವಾಗಲಿದೆ ಎಂದು ಹೇಳಿದರು.

ವೀರೇಶ್ವರ ಪುಣ್ಯಾಶ್ರಮದ ವ್ಯವಸ್ಥಾಪಕ ಹೇಮರಾಜ ಶಾಸ್ತ್ರೀ ಹೆಡಿಗ್ಗೊಂಡ ಕಾರ್ಯಕ್ರಮದ ವಿವರ ನೀಡಿ, ಜೂ. 26ರಂದು ಸಂಜೆ 6ಕ್ಕೆ ಮಹಾರಥೋತ್ಸವ ಜರಗುಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶಿವಲಿಂಗಶಾಸ್ತ್ರಿಗಳು ಸಿದ್ದಾಪುರ, ವೀರೇಶ ಕಿತ್ತೂರ, ಸಿದ್ದೇಶ್ವರಶಾಸ್ತ್ರಿಗಳು ತೆಲ್ಲೂರು, ಎಂ.ಜಿ. ಗುರುಸಿದ್ದೇಶ್ವರ ಶಾಸ್ತ್ರಿಗಳು ಬೇವೂರ, ಸದಾನಂದ ಶಾಸ್ತ್ರೀಗಳು ಹರ್ಲಾಪುರ, ಎನ್.ಎಸ್. ಕೆಂಗಾರ, ಪ್ರಕಾಶ ಬಸರಿಗಿಡದ, ವಸಂತಗೌಡ ಪೊಲೀಸ್‌ಪಾಟೀಲ, ಪರಶುರಾಮ ಕಟ್ಟಿಮನಿ, ಸಂಗಮೇಶ ದುಂದೂರ, ಪಿ.ಸಿ. ಹಿರೇಮಠ, ಎಂ.ಆರ್. ಹಿರೇಮಠ, ಚನ್ನಬಸಯ್ಯ ಬಂಕಾಪುರಮಠ ಉಪಸ್ಥಿತರಿದ್ದರು.ಕುಮಾರಶ್ರೀ ಪ್ರಶಸ್ತಿ ಪ್ರದಾನ: ಜೂ. 26ರಂದು ಸಂಜೆ 6ಕ್ಕೆ ಮದರಿಯ ರಾಚಯ್ಯ ಶಾಸ್ತ್ರಿ ಹಿರೇಮಠ (ಪ್ರವಚನ ಕ್ಷೇತ್ರ), ನಾಗಾವಿಯ ಲಕ್ಷ್ಮಣ ತಳವಾರ (ಗಾಯನ ಕ್ಷೇತ್ರ) ಹಾಗೂ ಡಾ. ಹನುಮಂತ ಕೊಡಗಾನೂರ ಅವರಿಗೆ ಕುಮಾರಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಅದೇ ರೀತಿ ಪದ್ಮಭೂಷಣ ಪಂ. ಪುಟ್ಟರಾಜ ಪ್ರಶಸ್ತಿಯನ್ನು ರಾಮಣ್ಣ ಮಲ್ಲಿಗವಾಡ (ಸಂಗೀತ ಕ್ಷೇತ್ರ) ಅವರಿಗೆ ಪ್ರದಾನ ಮಾಡಲಾಗುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವೈಯಕ್ತಿಕ ಕಾರಣದಿಂದ ಬೇಸತ್ತು ಕಿರುತೆರೆ ಯುವ ನಟಿ ಆತ್ಮ*ತ್ಯೆ
ಜ.6 ಇಲ್ಲವೇ 9ಕ್ಕೆ ಡಿಕೆಶಿ ಸಿಎಂ 200% ಕನ್ಫರ್ಮ್: ಇಕ್ಬಾಲ್