ಕನ್ನಡಪ್ರಭ ವಾರ್ತೆ ಚಾಮರಾಜನಗರ ಜಿಲ್ಲೆಯ ಅಭಿವೃದ್ದಿಯಲ್ಲಿ ಮಾಜಿ ಸಂಸದ ಆರ್.ಧ್ರುವನಾರಾಯಣ ಬಹಳಷ್ಟು ಪರಿಶ್ರಮ ವಹಿಸಿದ್ದು, ಅವರು ಅಭಿವೃದ್ದಿಯ ಹರಿಕಾರರೆಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಬಣ್ಣಿಸಿದರು.
ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಧ್ರುವನಾರಾಯಣರು ತಮ್ಮ ಅವಧಿಯಲ್ಲಿ ರಾಜ್ಯದಲ್ಲಿ ಪ್ರಥಮ ಸಂಸದ ಹಾಗೂ ದೇಶದಲ್ಲಿ ನಾಲ್ಕನೇ ಸಂಸದರಾಗಿ ಹೆಸರು ಮಾಡಿದ್ದರು ಎಂದು ಹೇಳಿಕೊಳ್ಳುವುದೇ ಹೆಮ್ಮೆ. ಅವರೊಂದಿಗಿನ ಒಡನಾಟ ಮತ್ತು ಸ್ನೇಹ ಚಿರಸ್ಮರಣೀಯ. ಇಂದು ಕಾಡಾ ಅಧ್ಯಕ್ಷಗಿರಿ ಹುದ್ದೆ ನನಗೆ ಸಿಕ್ಕದೆ ಎಂದರೆ ಅದಕ್ಕೆ ಪ್ರಮುಖ ಕಾರಣ ಧ್ರುವನಾರಾಯಣ ಅವರು. ಜಿಲ್ಲಾಧ್ಯಕ್ಷನಾಗಿ ಅವರೊಂದಿಗೆ ಕೆಲಸ ಮಾಡುವುದೇ ಒಂದು ರೀತಿಯಲ್ಲಿ ಸಂತೋಷ ಉಂಟು ಮಾಡುತ್ತಿತ್ತು. ತಮ್ಮ ಸಂಪೂರ್ಣ ಜೀವನವನ್ನು ಕಾಂಗ್ರೆಸ್ ಪಕ್ಷ ಹಾಗೂ ಸಾರ್ವಜನಿಕರ ಸೇವೆಗೆ ಮೀಸಲಾಗಿಟ್ಟಿದ್ದರು. ಪಕ್ಷದ ಕಾರ್ಯಾಧ್ಯಕ್ಷರಾಗಿ ವರಿಷ್ಠರು ನೀಡಿದ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತಿದ್ದ ರೀತಿಯೇ ನಮ್ಮೆಲ್ಲರಿಗು ಸ್ಪೂರ್ತಿಯಾಗುತ್ತಿತ್ತು ಎಂದು ಅವರ ಸೇವೆಯನ್ನು ಸ್ಮರಿಸಿದರು. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಆರ್. ಮಹದೇವ್, ಚಿಕ್ಕಮಹದೇವ್, ಬ್ಲಾಕ್ ಅಧ್ಯಕ್ಷ ಎ.ಎಸ್. ಗುರುಸ್ವಾಮಿ, ಮಹಮದ್ ಅಸ್ಗರ್, ಜಿಪಂ ಮಾಜಿ ಸದಸ್ಯ ಸದಾಶಿವಮೂರ್ತಿ, ಕಾಗಲವಾಡಿ ಚಂದ್ರು, ಸೈಯದ್ ರಫಿ, ಸಿ.ಎ.ಮಹದೇವಶೆಟ್ಟಿ, ಮುಖಂಡರಾದ ಆಲೂರು ಪ್ರದೀಪ್, ಸುಹೇಲ್ ಆಲಿ ಖಾನ್, ಯುವ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಅಜೀಜ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ಜತ್ತಿ, ನಗರಸಭಾ ಸದಸ್ಯರಾದ ಚಿನ್ನಮ್ಮ, ಕಲಾವತಿ, ನೀಲಮ್ಮ, ನಾಗಶ್ರೀ, ಮಾದಲಾಂಬಿಕೆ, ಎಪಿಎಂಸಿ ಮಾಜಿ ಅಧ್ಯಕ್ಷ ಶಿವಸ್ವಾಮಿ, ಮಾಜಿ ಉಪಾಧ್ಯಕ್ಷ ಪುರುಷೊತ್ತಮ್, ಪಿ. ಶೇಖರ್, ಅರುಣ್, ರವಿಬಿಸಲವಾಡಿ, ಮಹದೇವಯ್ಯ, ವೈ.ಪಿ. ರಾಜೇಂದ್ರ, ಮೋಹನ್ ನಗು, ನಾಗೇಂದ್ರ ನಾಯಕ, ಅಕ್ಷಯ್, ಜಯಸಿಂಹ ಮೊದಲಾದವರು ಇದ್ದರು.