ನಶಾ ಮುಕ್ತ ಗ್ರಾಮಕ್ಕಾಗಿ ಪಣತೊಡಿ: ಬಾಗಲಿ

KannadaprabhaNewsNetwork |  
Published : Nov 01, 2025, 02:45 AM IST
ಪೋಟೊ31ಕೆಎಸಟಿ3: ಕುಷ್ಟಗಿ ತಾಲೂಕಿನ ಬಿಜಕಲ್ಲ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ನಶೆಯ ಮೂಲ ಹಾಗೂ ಕ್ಯಾನ್ಸರ್ ಕಾರಕಗಳು ಮತ್ತು ಅವುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳು ಕುರಿತು ಸಮಗ್ರ ಮಾಹಿತಿ

ಕುಷ್ಟಗಿ: ಗ್ರಾಮವನ್ನು ನಶಾಮುಕ್ತ ಗ್ರಾಮವನ್ನಾಗಿ ಮಾಡುವಲ್ಲಿ ಎಲ್ಲರೂ ಪಣತೊಡಬೇಕು ಎಂದು ಮುಖ್ಯೋಪಾಧ್ಯಾಯ ಬಸವರಾಜ ಬಾಗಲಿ ಹೇಳಿದರು.

ತಾಲೂಕಿನ ಬಿಜಕಲ್ಲ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದ ಅಂಗವಾಗಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರತಿಯೊಬ್ಬ ವಿದ್ಯಾರ್ಥಿಯು ಅಭಿಯಾನದ ಪ್ರತಿಜ್ಞೆ ಮಾಡುವ ಮೂಲಕ ಮನೆ ಹಾಗೂ ಸುತ್ತಮುತ್ತಲಿನ ವಾತಾವರಣದಲ್ಲಿ ನಶೆ ಮುಕ್ತ ವಾತಾವರಣ ನಿರ್ಮಿಸುವ ಮೂಲಕ ಇಡೀ ಸಮಾಜವನ್ನು ನಂತರ ಗ್ರಾಮವನ್ನು ನಶಾ ಮುಕ್ತಗೊಳಿಸಿ ಈ ಅಭಿಯಾನದ ಯಶಸ್ವಿಗೆ ಕಾರಣಿಭೂತರಾಗಬೇಕೆಂದು ಹೇಳಿದರು.

ಆರೋಗ್ಯ ಕೇಂದ್ರದ ಸಿಬ್ಬಂದಿ ಉಮೇಶ ಮಾತನಾಡಿ, ನಶೆಯ ಮೂಲ ಹಾಗೂ ಕ್ಯಾನ್ಸರ್ ಕಾರಕಗಳು ಮತ್ತು ಅವುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳು ಕುರಿತು ಸಮಗ್ರ ಮಾಹಿತಿ ನೀಡಿದರು.

ಜಾಗೃತಿ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ರಂಗೋಲಿ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ ಏರ್ಪಡಿಸಲಾಗಿತ್ತು, ಶಿಕ್ಷಕ ವಿಜಯಕುಮಾರ್ ಬಿರಾದಾರ್ ನಶಾ ಮುಕ್ತ ಭಾರತ ಅಭಿಯಾನದ ಪ್ರತಿಜ್ಞಾವಿಧಿ ಬೋಧಿಸಿದರು,

ಈ ಸಂದರ್ಭದಲ್ಲಿ ಶಿಕ್ಷಕ ಸಂತೋಷ್ ನಾಗಲೋಟಿ, ಮಹಾಂತಯ್ಯ ಮಾಲಿಪಾಟೀಲ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಶಂಕರಪ್ಪ ಕರ್ನಾಟಕ ರತ್ನಕ್ಕೆ ಅರ್ಹ : ಶ್ರೀ
ಮೈಸೂರು ಹೀಲಿಯಂ ಸಿಲಿಂಡರ್‌ ಸ್ಫೋಟ : ಎನ್‌ಐಎ ಭೇಟಿ