ಸಾಧನೆಗೆ ಬದ್ಧತೆ, ಕಠಿಣ ಪರಿಶ್ರಮ ಅವಶ್ಯ: ರಘುಚಂದನ್

KannadaprabhaNewsNetwork |  
Published : Aug 01, 2025, 12:00 AM IST
ಫೋಟೋ . (30 ಹೆಚ್‌ ಎಲ್‌ ಕೆ 1) ಹೊಳಲ್ಕೆರೆಯಲ್ಲಿ ನಡೆದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಇತರೆ ಸಲಕರಣೆಗಳ ವಿತರಣಾ ಸಮಾರಂಭವನ್ನು ಎಂ.ಸಿ.ರಘುಚಂದನ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕಾದರೆ ಬದ್ಧತೆ ಮತ್ತು ಕಠಿಣ ಪರಿಶ್ರಮವಿರಬೇಕೆಂದು ಚಿತ್ರದುರ್ಗದ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಬಿಜೆಪಿ ಯುವ ಮುಖಂಡ ಎಂ.ಸಿ.ರಘುಚಂದನ್ ಹೇಳಿದರು.

ಕನ್ನಡಪ್ರಭ ವಾರ್ತೆ ಹೊಳಲ್ಕೆರೆ

ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕಾದರೆ ಬದ್ಧತೆ ಮತ್ತು ಕಠಿಣ ಪರಿಶ್ರಮವಿರಬೇಕೆಂದು ಚಿತ್ರದುರ್ಗದ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಬಿಜೆಪಿ ಯುವ ಮುಖಂಡ ಎಂ.ಸಿ.ರಘುಚಂದನ್ ಹೇಳಿದರು.

ಪಟ್ಟಣದ ಸಂವಿಧಾನ ಸೌಧದಲ್ಲಿ ಕುವೆಂಪು ಟ್ರಸ್ಟ್ ಶಿವಗಂಗ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನೋಟ್‌ಬುಕ್, ಇತರೆ ಸಲಕರಣೆಗಳ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ, ಟೈಲರಿಂಗ್ ತರಬೇತಿ ಪಡೆದವರಿಗೆ ಪ್ರಶಸ್ತಿ ಪ್ರಮಾಣ ಪತ್ರ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಕಳೆದ 24 ವರ್ಷಗಳಿಂದಲೂ ಕುವೆಂಪು ಟ್ರಸ್ಟ್ ಮಕ್ಕಳ ಏಳಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವುದು ಕಮ್ಮಿ ಸಾಧನೆಯಲ್ಲ. ಜೀವನದಲ್ಲಿ ಜಯ ​ಅಪಜಯ, ಟೀಕೆಗಳನ್ನು ಸಮಾನವಾಗಿ ಯಾರು ಸ್ವೀಕರಿಸುತ್ತಾರೋ ಅಂತಹವರಿಂದ ಮಾತ್ರ ಇಂತಹ ಸಮಾಜ ಸೇವೆ ಮಾಡಲು ಸಾಧ್ಯ ಎಂದರು.

ನನ್ನದೊಂದು ಫೌಂಡೇಷನ್ ಇದೆ. ಅದರಲ್ಲಿ ಬರುವ ಆದಾಯದಲ್ಲಿ ಪ್ರತಿ ವರ್ಷವೂ ಶೇ.40 ರಷ್ಟು ಹಣವನ್ನು ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ನೀಡುತ್ತಿದ್ದೇನೆ. ರಘುಚಂದನ್ ಫೌಂಡೇಶನ್ನಿಂದ ರಾಜ್ಯದಲ್ಲಿ 25 ಬಡ ಮಕ್ಕಳು ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವವರು ಯಾವ ಕಾಲೇಜಿನಲ್ಲಿ ಓದುತ್ತಾರೋ ಅಲ್ಲಿ ಓದಿಸುತ್ತೇವೆ. ಗ್ರಾಮೀಣ ಪ್ರದೇಶದ ಆರು, ಏಳು, ಎಂಟನೇ ತರಗತಿಯಲ್ಲಿ ಶೇ.80ಕ್ಕಿಂತ ಅಧಿಕ ಅಂಕಗಳನ್ನು ಪಡೆದಿರುವ ಬಡ ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡಲಾಗುವುದು. ಚಳ್ಳಕೆರೆ, ಹೊಸದುರ್ಗ, ಹಿರಿಯೂರು, ಚಿತ್ರದುರ್ಗದ ಮಕ್ಕಳು ಹೆಚ್ಚಿನ ಪ್ರಯೋಜನ ಪಡೆದುಕೊಂಡಿದ್ದಾರೆ. ಮುಂದಿನ ವರ್ಷ ಕುವೆಂಪು ಟ್ರಸ್ಟ್‌ಗೆ ರಘುಚಂದನ್ ಫೌಂಡೇಶನ್ನಿಂದ ಐವತ್ತು ಸಾವಿರ ರು.ಗಳನ್ನು ನೀಡುತ್ತೇನೆ ಎಂದು ತಿಳಿಸಿದರು.

ಶಿವಗಂಗ ಕುವೆಂಪು ಟ್ರಸ್ಟ್ ಅಧ್ಯಕ್ಷ ಡಿ.ವಿ.ಪ್ರಕಾಶ್, ಹೊಳಲ್ಕೆರೆ ಬಿಜೆಪಿ ಮಂಡಲ ಅಧ್ಯಕ್ಷ ವಸಂತಕುಮಾರ್, ಪುರಸಭೆ ಅಧ್ಯಕ್ಷ ವಿಜಯಸಿಂಹ ಕಾಟ್ರೋತ್, ಉಪಾಧ್ಯಕ್ಷೆ ನಾಗರತ್ನ ವೇದಮೂರ್ತಿ, ಎ.ಜಯಪ್ಪ, ಡಾ.ಮಂಜುಳಗೌಡ, ಪ್ರಸನ್ನಕುಮಾರಿ, ರಶ್ಮಿ, ಸತೀಶ್, ಬಸವರಾಜ್, ಚಂದ್ರಪ್ಪ, ಮಂಜುಳ, ಶಿವಮೂರ್ತಿ ಶಿವಲಿಂಗಪ್ಪ, ವೀರಕೆಂಚಪ್ಪ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''